ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಗರ್ಭಿಣಿ ಸೇರಿ ಹಲವರಿಗೆ ಗಾಯ
ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Team Udayavani, Sep 17, 2022, 1:32 PM IST
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44ರ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಬೈಕ್ಗೆ ಢಿಕ್ಕಿ ಹೊಡೆದು ಹೋಟೆಲ್ನತ್ತ ನುಗ್ಗಿ ಬೈಕ್ ಸವಾರ ಹಾಗೂ ಹೋಟೆಲ್ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹೋಗಿ ಕ್ಯಾಂಟರ್ ಮೊದಲು ಬೈಕ್ ಸವಾರನಿಗೆ ಢಿಕ್ಕಿ ಹೊಡೆದು ಬಳಿಕ ಹೋಟೆಲ್ ಮುಂಭಾಗ ಪಾರ್ಕಿಂಗ್ ನಲ್ಲಿದ್ದ 5 ಕಾರುಗಳಿಗೆ ಢಿಕ್ಕಿ ಹೊಡೆದಿದೆ ಹೋಟೆಲ್ ಬಳಿ ಇದ್ದ ಗರ್ಭಿಣಿ ಮಹಿಳೆ, ಸೆಕ್ಯೂರಿಟಿ ಗಾರ್ಡ್, ಹಿರಿಯ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ರಾಮದೇವರಗುಡಿ ಬಳಿಯ ಪ್ರಣವ್ ಹೋಟೆಲ್ ಮುಂಭಾಗ ಈ ದುರಂತ ಸಂಭವಿಸಿದ್ದು ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಈ ಸಂಬಂಧ ಪೆರೆಸಂದ್ರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕ್ಯಾಂಟರ್ ಚಾಲಕನನ್ನು ಬಂಧಿಸಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಘಟನೆಯಲ್ಲಿ ಬೈಕ್ ಸವಾರ ಟಿ.ಚೊಕ್ಕನಹಳ್ಳಿ ಜನಾರ್ಧನ್ ಹಾಗೂ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಮೃತಪಟ್ಟಿದ್ದಾರೆ ಮಾನಸ ಮತ್ತು ಅವರ ತಂದೆ ನರಸಿಂಹ ಇಬ್ಬರು ತೀವ್ರ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆಯೆಂದು ಪರೆಸಂದ್ರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ತಿಳಿಸಿದ್ದಾರೆ.
ನಿನ್ನೆಯಷ್ಟೆ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಕ್ಯಾಂಟರ್ ಢಿಕ್ಕಿ ಹೊಡೆದು ಇಬ್ಬರು ಪ್ರಾಣ ಕಳೆದುಕೊಳ್ಳುವಂತಾಗಿದೆ.
ಇದನ್ನೂ ಓದಿ : ಭುವನೇಶ್ವರದಲ್ಲಿ ಜನರ ನಿದ್ದೆಗೆಡಿಸಿದ ಕರಿ ಬೆಕ್ಕು : 25 ಜನರ ಮೇಲೆ ದಾಳಿ, ಶೋಧ ಕಾರ್ಯ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ