ಘನ ತ್ಯಾಜ್ಯ ನಿರ್ವಹಣೆಗೆ ಸೇವಾ ಶುಲ್ಕ ವಸೂಲಿಗೆ ವಿರೋಧ

ಖಾಸಗಿ ಆಸ್ಪತ್ರೆ ವೈದ್ಯರು, ಹೋಟೆಲ್, ಕಲ್ಯಾಣ ಮಂಟಪ ಮಾಲೀಕರ ವಿರೋಧ | ನಗರಸಭೆ ಕ್ರಮಕ್ಕೆ ಬೇಸರ

Team Udayavani, May 25, 2019, 2:42 PM IST

cb-tdy-5..

ಚಿಕ್ಕಬಳ್ಳಾಪುರ ನಗರಸಭೆ ಸಭಾಂಗಣದಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಸೇವಾ ಶುಲ್ಕ ವಿಧಿಸುವ ಸಂಬಂಧ ಕರೆಯಲಾಗಿದ್ದ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್ ಮಾಲೀಕರು ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ: ಸ್ಥಳೀಯ ನಗರಸಭೆ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಸ ಉತ್ಪಾದಿಸುವವರಿಗೆ ಘನ ತ್ಯಾಜ್ಯ ನಿರ್ವಹಣೆ ನಿಯಮ 2016ರ ಅಡಿ ಸೇವಾ ಶುಲ್ಕ ವಿಧಿಸುವ ನಗರಸಭೆ ಕ್ರಮಕ್ಕೆ ಖಾಸಗಿ ಆಸ್ಪತ್ರೆಗಳ ವೈದ್ಯರು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್ ಮಾಲೀಕರು, ಹೋಟೆಲ್ ಹಾಗೂ ಕಲ್ಯಾಣ ಮಂಟಪದ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಗರಸಭೆ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಸೇವಾ ಶುಲ್ಕ ವಸೂಲಿ ಮಾಡುವ ನಗರಸಭೆ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಯಿತು. ಘನ ತ್ಯಾಜ್ಯ ನಿರ್ವಹಣೆ ಮಾಡುವುದು ಸ್ಥಳೀಯ ಸಂಸ್ಥೆಗಳ ಹೊಣೆಗಾರಿಕೆಯಾಗಿದೆ. ಅದನ್ನು ನಮ್ಮ ಮೇಲೆ ಹೊರಿಸಿದರೆ ಹೇಗೆ ಎಂದು ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದ ಮಾಲೀಕರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಹೊಸ ಮಂಡಳಿ ಬರಲಿ: ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಂ.ವೆಂಕಟಾಚಲಪತಿ ಮಾತನಾಡಿ, ಇದು ತುಂಬಾ ಮಹತ್ವದ ನಿರ್ಧಾರ. ಹೀಗಾಗಿ ಇದನ್ನು ಆಡಳಿತ ಮಂಡಳಿ ಇಲ್ಲದೇ ಅಧಿಕಾರಿಗಳು ತೆಗೆದುಕೊಳ್ಳುವುದು ಬೇಡ. ಚುನಾವಣೆ ಮುಗಿದು ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಅಧಿಕಾರಿಗಳು ಕಾಯಿರಿ. ಬಳಿಕ ಆಡಳಿತ ಮಂಡಳಿ ಸಭೆ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮಕ್ಕೆ ಮುಂದಾಗಿ ಎಂದು ಹೇಳಿದರು.

ನಗರದ ಮಂಜುನಾಥ್‌ ಆಸ್ಪತ್ರೆ ಮಾಲೀಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್‌ ಮಾತನಾಡಿ, ನಗರದ ಸ್ವಚ್ಛತೆ, ಆರೋಗ್ಯ, ರಸ್ತೆ, ಕುಡಿಯುವ ನೀರು, ಒಳಚರಂಡಿ ನಿರ್ವಹಣೆ ನೋಡಿಕೊಳ್ಳುವುದು ನಗರ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ. ಅದಕ್ಕಾಗಿ ಸಾರ್ವಜನಿಕರು ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ.

ಆಸ್ಪತ್ರೆಗಳಿಗೆ ಸೇವಾ ಶುಲ್ಕ ಬೇಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಅನುದಾನ ನೀಡುತ್ತವೆ. ಆದ್ದರಿಂದ ತ್ಯಾಜ್ಯದ ನೆಪದಲ್ಲಿ ಸೇವಾ ಶುಲ್ಕ ವಿಧಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೂಲಸೌಕರ್ಯ ಒದಗಿಸುವುದು ನಗರ ಸ್ಥಳೀಯ ಸಂಸ್ಥೆಗಳ ಕರ್ತವ್ಯ. ಅದಕ್ಕಾಗಿ ಶುಲ್ಕ ಪಡೆಯುವುದು ಅನೈತಿಕ ಕ್ರಮ ಎಂದು ತಮಿಳುನಾಡು ಗ್ರಾಹಕರ ವೇದಿಕೆ ಆದೇಶ ನೀಡಿದೆ. ಇಂತಹದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಲ್ಲಿ ನಾಲ್ಕು ಪ್ರಕರಣಗಳ ವಿಚಾರಣೆ ಬಾಕಿ ಇದೆ. ಆಸ್ಪತ್ರೆಗಳು ಸೇವಾ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತವೆ. ಆದ್ದರಿಂದ ಆಸ್ಪತ್ರೆಗಳಿಗೆ ಸೇವಾ ಶುಲ್ಕ ವಿಧಿಸುವ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಪರಿಸರ ಅಭಿಯಂತರರ ಗಮನಕ್ಕೆ: ನಗರಸಭೆ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ನಗರದ ಅನೇಕ ಕಡೆಗಳಲ್ಲಿ ನೀರು ಹರಿಯದೇ ಅದ್ವಾನ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅಧಿಕಾರಿಗಳು ಮೊದಲು ಗಮನ ಹರಿಸಲಿ ಎಂದು ತಿಳಿಸಿದರು.

ಚಿತ್ರಮಂದಿರದವರು ನಗರದಲ್ಲಿ ಎಲ್ಲೆಂದರಲ್ಲಿ ಪೋಸ್ಟರ್‌ಗಳನ್ನು ಅಂಟಿಸಿ, ಗಲೀಜು ಮಾಡುವುದು ನಿಲ್ಲಿಸಬೇಕು. ನಿಗದಿತ ಸ್ಥಳಗಳಲ್ಲಿ ಮಾತ್ರ ಪೋಸ್ಟರ್‌ ಅಂಟಿಸಬೇಕು. ನಗರಸಭೆ ವಾಹನಗಳಿಗೆ ತ್ಯಾಜ್ಯ ನೀಡಬೇಕು. ಪರವಾನಗಿ ನವೀಕರಣ ಮಾಡಿಸಬೇಕು. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇವೆಂದು ಸಭೆಯಲ್ಲಿ ಉಪಸ್ಥಿತರಿದ್ದ ನಗರಸಭೆ ಪರಿಸರ ಅಭಿಯಂತರರಾದ ಶಿವಶಂಕರ್‌ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೇಂದ್ರದ ವೈದ್ಯ ಡಾ.ಸಿದ್ದಲಿಂಗಪ್ಪ, ಡಾ.ಎಚ್.ಎಸ್‌.ಮಧುಕರ್‌, ಡಾ.ರಜನಿ, ಹೋಟೆಲ್, ಬಾರ್‌, ರೆಸ್ಟೋರೆಂಟ್, ಕಲ್ಯಾಣ ಮಂಟಪಗಳ ಮಾಲೀಕರು ಉಪಸ್ಥಿತರಿದ್ದರು.

ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಶುಲ್ಕ ವಿಧಿಸಲಿ:

ಜೀವನ್‌ ಆಸ್ಪತ್ರೆಯ ಡಾ.ಐ.ಎಸ್‌.ರಾವ್‌ ಮಾತನಾಡಿ, ರಾಜ್ಯದಲ್ಲಿ ಮಾತ್ರ ಕೇಂದ್ರ ಸರ್ಕಾರ ಪ್ರಾಯೋಜಿತ ಆಯುಷ್ಮಾನ್‌ ಭಾರತ ಯೋಜನೆಯ ಲಾಭ ಬರೀ ಸರ್ಕಾರಿ ಆಸ್ಪತ್ರೆಗಳಿಗೆ ದೊರೆಯುವಂತೆ ಸೀಮಿತ ಮಾಡಲಾಗಿದೆ. ಉಚಿತವಾಗಿ ಎಲ್ಲ ಸರ್ಕಾರಿ ಸೌಲಭ್ಯಗಳು ಹೊಂದಿರುವ ಆಸ್ಪತ್ರೆಗಳು, ವೈದ್ಯರಿಗೆ ಸರ್ಕಾರ ಹಣ ಹರಿದು ಹೋಗುತ್ತಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಶುಲ್ಕ ವಿಧಿಸಿ ವಸೂಲಿ ಮಾಡಲಿ ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಸಲಹೆ ನೀಡಿದರು. ನಾವು ಆಸ್ಪತ್ರೆಯಲ್ಲಿ ಉತ್ಪಾದನೆಯಾಗುವ ಜೈವಿಕ ತ್ಯಾಜ್ಯ ವಿಲೇವಾರಿಗೆ ಖಾಸಗಿ ಕಂಪನಿಗಳ ಸಹಕಾರ ಪಡೆದಿದ್ದೇವೆ. ಇನ್ನು ನಗರಸಭೆ ವಾಹನಗಳಿಗೆ ನೀಡುವುದು ಸಾರ್ವಜನಿಕರಿಂದ ಉತ್ಪಾದನೆಯಾದ ತ್ಯಾಜ್ಯ. ಅದನ್ನು ತೆಗೆದುಕೊಂಡು ಹೋಗುವುದು ನಗರಸಭೆ ಕರ್ತವ್ಯ. ಅದಕ್ಕೆ ನಾವು ಶುಲ್ಕ ಕಟ್ಟಬೇಕು ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಪ್ರತಿಯೊಬ್ಬರಿಗೂ ಜವಾಬ್ದಾರಿ ಇರಲಿ:

ನಗರದ ಸ್ವಚ್ಛತೆ ಕಾಯ್ದುಕೊಂಡು ಪರಿಸರ ಸಂರಕ್ಷಣೆ ಮಾಡುವ ಜತೆಗೆ ಮುಂದಿನ ಪೀಳಿಗೆಗಾಗಿ ಯೋಜನಾ ಬದ್ಧವಾಗಿ ನಗರ ಅಭಿವೃದ್ಧಿ ಮಾಡುವುದು ನಗರಸಭೆ ಕರ್ತವ್ಯ. ಆದ್ದರಿಂದ ನಗರದ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ಕಸ ಉತ್ಪಾದಕರಿಗೂ ಜವಾಬ್ದಾರಿ ಬರಲಿ ಎಂಬ ಉದ್ದೇಶಕ್ಕೆ ಸೇವಾ ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ನಗರಸಭೆ ಪರಿಸರ ಅಧಿಕಾರಿ ಶಿವಶಂಕರ್‌ ತಿಳಿಸಿದರು. ಪ್ರತಿಯೊಬ್ಬರೂ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ನೀಡಬೇಕು. ಗ್ರಾಹಕರಿಗೆ ಕೂಡ ವರ್ತಕರು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಲ್ಲಿ ಹೆಚ್ಚಿನ ಕಸ ಉತ್ಪಾದನೆಯಾಗುತ್ತಿದೆ. ಜತೆಗೆ ನಿಷೇಧಿತ ಪ್ಲಾಸ್ಟಿಕ್‌ ಗ್ಲಾಸ್‌ ಮತ್ತು ಬ್ಯಾಗನ್ನು ಕೆಲವರು ಕದ್ದುಮುಚ್ಚಿ ಬಳಕೆ ಮಾಡುತ್ತಿದ್ದು, ಕೂಡಲೇ ನಿಲ್ಲಿಸಬೇಕೆಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.