ಶ್ರೀ ಸ್ವರ್ಣಾಂಬಾ ದೇವಿ ಅದ್ಧೂರಿ ಬ್ರಹ್ಮರಥೋತ್ಸವ ಸಂಪನ್ನ


Team Udayavani, Mar 31, 2018, 5:33 PM IST

chikk-1.jpg

ಕಡೂರು: ತಾಲೂಕಿನ ಮಲ್ಲೇಶ್ವರದ ಗ್ರಾಮ ದೇವತೆ ಶ್ರೀಸ್ವರ್ಣಾಂಬಾ ದೇವಿ ಬ್ರಹ್ಮ ರಥೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು. ಶುಕ್ರವಾರ ಬೆಳಿಗ್ಗೆ ದೇವಿಗೆ ಅಭಿಷೇಕ, ನಿತ್ಯಪೂಜೆ, ಅರ್ಚನೆ, ಶ್ರೀ ಮಾತೆಯ ಗಜಾರೋಹಣೋತ್ಸವ ನಡೆಸಲಾಯಿತು, ಶ್ರೀ ಸ್ವಣಾಂಬಾ ಕಲ್ಯಾಣ ಮಂಟಪದಲ್ಲಿ ಪುರಸ್ಸರ ಕಲ್ಯಾಣೋತ್ಸವ ಹಾಗೂ ಕನ್ನಿಕಾ ಪೂಜಾ ನಡೆಯಿತು. 

ಸಂಪ್ರದಾಯದಂತೆ ನಡೆದ ಪೂಜೆಯ ನಂತರ ಶ್ರೀದೇವಿಯ ಉತ್ಸವ ಮೂರ್ತಿಯನ್ನು ಭಕ್ತರು ಹೊತ್ತು ತಂದಾಗ ನೆರೆದಿದ್ದ ಸಾವಿರಾರು ಭಕ್ತರು ಉತ್ಸಾಹದಿಂದ ದೇವಿಯ ಮೇಲೆ ಅರಿಶಿನ ಕುಂಕುಮವನ್ನು ಎರಚಿ ಸಂಭ್ರಮಿಸಿದರು.

ಶ್ರೀ ಸ್ವರ್ಣಾಂಬಾ, ಶ್ರೀಅರಳೀಮರದಮ್ಮ ಮತ್ತು ಚೌಡ್ಲಾಪುರದ ಶ್ರೀಕರಿಯಮ್ಮ ದೇವಿಯವರನ್ನು ಭಕ್ತರು ದೇವಾಲಯದ ಭಾಗದಲ್ಲಿ ಮೂರು ಸುತ್ತು ಪ್ರದರ್ಶನ ಮಾಡಿದಾಗ ಭಕ್ತರು ಎರಚಿದ ಅರಿಶಿನ ಕುಂಕುಮದಿಂದ ದೇವರನ್ನು ಹೊತ್ತವರು ಅರಿಶಿನ ಕುಂಕುಮದಿಂದ ಮುಳಗಿ ಹೋಗಿದ್ದರು.

ಶಕ್ತಿ ದೇವತೆ ಶ್ರೀ ಸ್ವರ್ಣಾಂಬಾ ದೇವಿಯು ಹುತ್ತದಲ್ಲಿ ನೆಲೆಸಿದ್ದು, ತವರು ಮನೆಯಿಂದ ಹೊರಟ ಹೆಣ್ಣು ಮಗಳಿಗೆ ಅರಿಶಿನ ಕುಂಕುಮ ನೀಡುವ ಭಾವನೆಯಲ್ಲಿ ಭಕ್ತರು ದೇವಿಗೆ ಅರಿಶಿನ ಸಮರ್ಪಣೆ ಮಾಡುತ್ತಾರೆ. ದಕ್ಷಿಣ ಭಾರತದಲ್ಲೇ ದೇವರಿಗೆ ಅರಿಶಿನ ಮತ್ತು ಕುಂಕುಮ ಎರಚುವುದು ತಾಲೂಕಿನ ಮಲ್ಲೇಶ್ವರ ಜಾತ್ರಾ ಮಹೋತ್ಸವದಲ್ಲಿ ಎನ್ನುವುದು ಈ ಜಾತ್ರಾ ಮಹೋತ್ಸವದ ವಿಶೇಷವಾಗಿದೆ. ಬೆಳಗ್ಗೆ ಸಾಂಪ್ರದಾಯಿಕ ರಥ ಪೂಜೆ ಮತ್ತು ಬಲಿ ಪೂಜೆ ನಡೆದ ನಂತರ ಶ್ರೀದೇವಿಯ ವಿಗ್ರಹವನ್ನು ರಥಾರೋಹಣ ಮಾಡಿಸಲಾಯಿತು. ನೆರೆದ ಭಕ್ತರು ಬಾಳೆಹಣ್ಣುಗಳನ್ನು ರಥದ ಕಳಸಕ್ಕೆ ಎಸೆದು ಭಕ್ತಿ ಸಮರ್ಪಿಸುತ್ತಿದ್ದಂತೆಯೇ ಭಕ್ತರು ಹರ್ಷೋದ್ದಾರಗಳ ನಡುವೆ ರಥವನ್ನು ಎಳೆದರು. ನಂತರ ನಾಡಿನ ನಾನಾ ಮೂಲೆಗಳಿಂದ ಬಂದ ಭಕ್ತರು ಶ್ರೀದೇವಿಗೆ ಹೂವು ಹಣ್ಣು ಸಮರ್ಪಿಸಿ ಪೂಜೆ ಸಲ್ಲಿಸಿದರು. ಶ್ರೀ ಸ್ವರ್ಣಾಂಬಾ ದೇವಾಲಯದ ಧರ್ಮಾಧಿಕಾರಿ ಎಂ.ಟಿ. ಶ್ರೀನಿವಾಸ್‌, ಶಾಸಕ ವೈ.ಎಸ್‌.ವಿ ದತ್ತ, ಕೆ.ಎಂ. ಕೆಂಪರಾಜು, ದೇಗುಲದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಎಂ.ಟಿ. ಸತ್ಯನಾರಾಯಣ, ಆಡಳಿತ ಮಂಡಳಿ ಸದಸ್ಯರಾದ ಚಂದ್ರಶೇಖರಪ್ಪ, ಲೋಕೇಶ್‌ ಬಸಪ್ಪ, ಧರ್ಮಣ್ಣ, ಕಡೂರು ಪಟ್ಟಣ, ಮಲ್ಲೇಶ್ವರ ಗ್ರಾಮಸ್ಥರು ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ದೇವಿಯ ಕೃಪೆಗೆ ಪಾತ್ರರಾದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.