ಅಸ್ವಸ್ಥಗೊಂಡ ಕೋತಿಗಳು: ಕೋವಿಡ್ ಪರೀಕ್ಷೆಗೆ ಆಗ್ರಹ


Team Udayavani, May 18, 2021, 2:19 PM IST

ಅಸ್ವಸ್ಥಗೊಂಡ ಕೋತಿಗಳು: ಕೋವಿಡ್ ಪರೀಕ್ಷೆಗೆ ಆಗ್ರಹ

ಚಿಂತಾಮಣಿ: ಮರದಿಂದ ಮರಕ್ಕೆ, ‌ ಮನೆಗಳ ಮೇಲೆ ಸದಾ ಲವಲವಿಕೆಯಿಂದ ಜಿಗಿದಾಡುತ್ತಿದ್ದ ಕೋತಿ ಗಳು, ಮೂರು ನಾಲ್ಕು ದಿನದಿಂದ ಏಕಾಏಕಿ ನೀರು, ಆಹಾರ ಬಿಟ್ಟು ಎಲ್ಲೆಂದರಲ್ಲೇ ಸುಸ್ತಾಗಿ ಮಲಗುತ್ತಿವೆ. ಇದು ಗ್ರಾಮಸ್ಥರಲ್ಲಿ ತೀವ್ರ ಆತಂಕ ತಂದಿದ್ದು, ಕೋವಿಡ್ ಪರೀಕ್ಷೆ ಮಾಡುವಂತೆ ಆಗ್ರಹಿಸಿದ್ದಾರೆ.

ತಾಲೂಕಿನ ಕೈವಾರ ಹೋಬಳಿಯ ಜಂಗಮ ಶೀಗೇನಹಳ್ಳಿ ಗ್ರಾಮದಲ್ಲಿ40ಕ್ಕೂ ಹೆಚ್ಚು ಮಂಗಗಳು ಬಲಹೀನವಾಗಿ ಇದ್ದ ಸ್ಥಳಗಳಲ್ಲೇ ಕುಸಿದು ಬೀಳುತ್ತಿವೆ. ಕೋತಿಗಳು ಏಕಾಏಕಿ ಅಸ್ವಸ್ಥಗೊಂಡಿರುವುದನ್ನು ಕಂಡ ಗ್ರಾಮಸ್ಥರು ಮಂಗಗಳಿಗೆಯಾವುದೋ ರೋಗ ಬಂದಿರಬಹುದು ಎಂದು ಹೇಳುತ್ತಿದ್ದಾರೆ.

ಕೋವಿಡ್ ವೈರಸ್‌ನ ಶಂಕೆ: ಇನ್ನು ಗ್ರಾಮದಲ್ಲಿನ ಕೋತಿಗಳು ಕಳೆ ಮೂರು ದಿನಗಳಿಂದ ರಾತ್ರಿ ವೇಳೆ ವಿಪರೀತವಾಗಿ ಕೆಮ್ಮುತ್ತಿವೆ. ಇದರಿಂದ ಜನರಿಗೆ ನಿದ್ದೆ ಮಾಡುವುದಕ್ಕೂ ಆಗುತ್ತಿಲ್ಲ ಎಂದು ಹೇಳುವ ಗ್ರಾಮಸ್ಥರು, ಬಹುಶಃ ಕೋತಿಗಳಿಗೂ ಕೊರೊನಾ ವೈರಸ್‌ ಹರಡಿರಬಹುದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಅಸ್ವಸ್ಥಗೊಂಡಿರುವ ಕೋತಿಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿದ ಅರಣ್ಯ ಮತ್ತು ಪಶುವೈದ್ಯರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ, ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಮಂಗಳವಾರ ಕೋತಿಗಳನ್ನು ಹಿಡಿದು ಪರೀಕ್ಷಿಸಿ,ಅವುಗಳಿಗೆ ಯಾವ ರೋಗ ಬಂದಿದೆ ಎಂಬುದನ್ನು ಖಾತ್ರಿ ಮಾಡಿಕೊಂಡು ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಜಂಗಮಶೀಗೇನಹಳ್ಳಿ ಗ್ರಾಮದಲ್ಲಿ40ಕ್ಕೂ ಹೆಚ್ಚು ಕೋತಿಗಳು ಅಸ್ವಸ್ಥವಾಗಿವೆ ಎಂದು ಗ್ರಾಮಸ್ಥರ ದೂರಿನ ಮೇರೆಗೆ ಸ್ಥಳಕ್ಕೆ ತೆರಳಿ ಪರೀಕ್ಷೆ ಮಾಡಲಾಗಿದೆ. ಕೋತಿಗಳು ಸುಸ್ತಾಗಿ ಬಿದ್ದಿದ್ದವು.ಅದರಲ್ಲಿ ಒಂದು ಕೋತಿ ಕೆಮ್ಮುತ್ತಿತ್ತು. ಆದರೆ, ಅವುಗಳನ್ನು ಹಿಡಿಯವರು ಯಾರು ಇಲ್ಲದಕಾರಣ ವಾಪಸ್ಸಾಗಿದ್ದೇವೆ. ಮಂಗಳವಾರ ಅರಣ್ಯ ಇಲಾಖೆಯವರು ಹಿಡಿದುಕೊಡುವುದಾಗಿ ಹೇಳಿದ್ದಾರೆ. ನಂತರ ರೋಗ ಪತ್ತೆ ಹಚ್ಚಲಾಗುವುದು ಎಂದು ತಾಲೂಕು ಪಶು ಸಂಗೋಪನಾಇಲಾಖೆಯ ಹಿರಿಯ ವೈದ್ಯ ಬೈರೆಡ್ಡಿ ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಸದ್ಯ ಒಬ್ಬರೇ ಪಶು ವೈದ್ಯರಿದ್ದು, ಅವರು ಮೈಸೂರಿನಲ್ಲಿ ಇರುತ್ತಾರೆ. ಕೋತಿಗಳ ಸ್ಥಿತಿಗತಿ ಹೇಳಲು ನಮಗೆ ಆಗಿಲ್ಲ.ಅರಣ್ಯ ಇಲಾಖೆಯಿಂದ ಕೋತಿಗಳನ್ನುಹಿಡಿದು ಕೊಟ್ಟರೆ ಪರೀಕ್ಷಿಸುವುದಾಗಿ ಪಶು ವೈದ್ಯರು ಹೇಳಿದ್ದಾರೆ.ಅದರಂತೆ ಮಂಗಳವಾರ ರಾಯಲ್ಪಾಡಿನಿಂದ ಕೋತಿ ಹಿಡಿಯಲು ಬರುತ್ತಿದ್ದು, ಪರೀಕ್ಷಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ.-ಧನಲಕ್ಷ್ಮೀ, ಅರಣ್ಯ ಅಧಿಕಾರಿ, ಚಿಂತಾಮಣಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.