ಸಿದ್ದರಾಮಯ್ಯಗೆ ಹೃದಯ, ಮನಸ್ಸು ಎರಡು ಇಲ್ಲ: ಸುಧಾಕರ್ ವಾಗ್ದಾಳಿ
Team Udayavani, Nov 5, 2019, 3:23 PM IST
ಚಿಕ್ಕಬಳ್ಳಾಪುರ: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಹೃದಯ, ಮನಸ್ಸು ಎರಡು ಇದೆಯೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ತಮ್ಮ ಗುರುಗಳಾದ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.
ನಿಮ್ಮ ಪೌರುಷ ನಮ್ಮ ಮೇಲೆ ತೋರಿಸಬೇಡಿ ನಿಮಗೆ ತಾಕತ್ತು ಇದ್ದರೆ ನಿಮ್ಮನ್ನು ರಾಜಕೀಯವಾಗಿ ಮುಗಿಸಿದವರ ಮೇಲೆ ನಿಮ್ಮ ಪೌರುಷ ತೋರಿಸಿ ನಮ್ಮ ಮೇಲೆ ಹಗೆತನ ಸಾಧಿಸಬೇಡಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನೀವೆ ನಮ್ಮನ್ನು ಅನರ್ಹಗೊಳಿಸಿದ್ದೀರಿ, ನಿಮ್ಮ ನಾಯಕತ್ವ ವಿಫಲದಿಂದ ಮೈತ್ರಿ ಸರ್ಕಾರ ಪತನಗೊಂಡಿದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಸುಧಾಕರ್ ಕಿಡಿಕಾರಿದರು.
ನಿಮ್ಮನ್ನು ಆರು ವರ್ಷಗಳ ಕಾಲ ಹೆಗಲ ಮೇಲೆ ಹೊತ್ತುಕೊಂಡು ನಾವು ನಿಮ್ಮನ್ನು ರಕ್ಷಣೆ ಮಾಡಿದವು ಎಂದರು. ಯಾರು ನಿಮ್ಮ ವಿರುದ್ದ ಮಾತನಾಡಲಿಕ್ಕೆ ನಾನು ಬಿಡುತ್ತಿರಲಿಲ್ಲ.
ತಂದೆ ಸ್ಥಾನದಲ್ಲಿ ಇದ್ದವರು ಎಲ್ಲರನ್ನು ಸಮಾನವಾಗಿ ನೋಡಬೇಕಿತ್ತು. ಆದರೆ ಅದರಲ್ಲಿ ನೀವು ವಿಫಲರಾಗಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ದ ಶಿಷ್ಯ ಸುಧಾಕರ್ ಗರಂ ಆದರು.
ಕ್ರೌರ್ಯ ಮತ್ತು ವಿಕೃತ ಮನಸ್ಸಿನಿಂದ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ದಿವಾಳಿತನವನ್ನು ಈ ರಾಜ್ಯದ ಜನರ ಮುಂದಿಡುತ್ತಿದ್ದಾರೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ