ಸರಳವಾಗಿ ಈದ್ ಮಿಲಾದ್ ಆಚರಣೆ
Team Udayavani, Oct 31, 2020, 3:57 PM IST
ಚಿಕ್ಕಬಳ್ಳಾಪುರ: ಜಗತ್ತಿನ ಕಲ್ಯಾಣಕ್ಕಾಗಿ ಅವತರಿಸಿದ ಕೊನೆಯ ಪೈಗಂಬರ್ ಮೊಹ್ಮದ್(ಸಅಸ) ಅವರ ಹುಟ್ಟು ಹಬ್ಬವನ್ನು ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಸರಳವಾಗಿ ಆಚರಿಸಿದರು.
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವಸಲುವಾಗಿ ಸರ್ಕಾರ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಮತ್ತು ಮೆರವಣಿಗೆ ನಡೆಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿರುವ ನಿರ್ದೇಶನ ಪಾಲಿಸುವ ಮೂಲಕ ಪ್ರವಾದಿಮೊಹ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಉಲ್ ನಬೀ(ಸಅಸ) ಶ್ರದ್ಧಾಭಕ್ತಿಯಿಂದ ಮನೆ ಮತ್ತು ಮಸೀದಿಗಳಲ್ಲಿ ಆಚರಿಸಿದರು.
ಸಂಪ್ರದಾಯದಂತೆ ಜಿಲ್ಲಾದ್ಯಂತ ನಗರ ಪ್ರದೇಶ ಗಳಲ್ಲಿ ಹಸಿರು ಬಣ್ಣದ ಧ್ವಜಗಳೊಂದಿಗೆ ಮತ್ತು ವಾಹನಗಳನ್ನು ಶೃಂಗರಿಸಿಕೊಂಡು ಮೆರವಣಿಗೆ ನಡೆಸಿ ಬಳಿಕ ಈದ್ಗಾ ಮೈದಾನದಲ್ಲಿ ಸಾಮೂಹಿಕ ವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದರು. ಆದರೆ ಈ ವರ್ಷ ಕೋವಿಡ್ ಆತಂಕದಿಂದ ಎಲ್ಲಾ ಆಚರಣೆ ಗಳಿಗೆ ಬ್ರೇಕ್ ಬಿದ್ದಿದೆ. ಮೆರವಣಿಗೆ ಮತ್ತು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ನಿಬಂಧಿಸಿ ದ್ದರಿಂದ ಮನೆ ಮತ್ತು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಬ್ಯಾನರ್, ದೀಪಾಲಂಕಾರ: ಈದ್ ಮಿಲಾದ್ ಉಲ್ ನಬೀ ಅಂಗವಾಗಿ ಮಸೀದಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ ಕಂಗೊಳಿಸಲಾಗಿದೆ. ನಗರದ ಪ್ರಮುಖ ಬೀದಿಗಳನ್ನು ಬಂಟಿಂಗ್ಸ್ ಮತ್ತು ಬ್ಯಾನರ್ಗಳಿಂದ ಶೃಂಗರಿಸಲಾಗಿದೆ. ಸಮಾಜದ ಯುವಕರು ತಮ್ಮ ತಮ್ಮ ವಾಹನಗಳಿಗೆ ಹಸಿರು ಬಣ್ಣದ ಧ್ವಜಗಳಿಂದ ಶೃಂಗಾರ ಮಾಡಿಕೊಂಡಿದ್ದಾರೆ.
ಇನ್ನೂ ಕೆಲವರು ಆಟೋ ಮತ್ತು ಕಾರುಗಳನ್ನು ಅಲಂಕರಿಸಿದ್ದಾರೆ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿ ಸಲು ಬರುವ ಮುಸ್ಲಿಂ ಸಮಾಜದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಿ ಮಸೀದಿಯ ಹೊರಭಾಗದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಿದ್ದು ವಿಶೇಷವಾಗಿತ್ತು.
ಜಿಲ್ಲೆಯ ಶಿಡ್ಲಘಟ್ಟ ನಗರದ ಆಮೀರಿಯಾ ಮಿಲಾದ್ ಸಮಿತಿ ಸದಸ್ಯರು ಅಮೀರ್ ದರ್ಗಾ ಬಳಿ ಮದೀನಾ ಮುನವರಾದ ಗುಮ್ಮಟದ ಮಾದರಿಯ ಸ್ತಬ್ದಚಿತ್ರ ಸಿದ್ಧಗೊಳಿಸಿದ್ದರು. ಯುವಕರು ಅದರ ಮುಂದೆ ನಿಂತು ಫೋಟೊ ತೆಗೆದುಕೊಳ್ಳು ತ್ತಿದ್ದು ವಿಶೇಷವಾಗಿತ್ತು. ಈ ಸಮಿತಿಯ ಸದಸ್ಯರು ಪ್ರವಾದಿ ಅವರ ಹೆಸರಿನಲ್ಲಿ ವಿಶೇಷ ಸೇವಾ ಕಾರ್ಯ ನಡೆಸಿ ಸಿಹಿ ಹಂಚಿಕೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ