ಅಂಗನವಾಡಿಗಳಿಗೆ 1960 ಸ್ಮಾರ್ಟ್‌ಫೋನ್‌ ಭಾಗ್ಯ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೋಷಣ್‌ ಅಭಿಯಾನ ಹೈಟೆಕ್‌

Team Udayavani, Sep 2, 2020, 3:29 PM IST

ಅಂಗನವಾಡಿಗಳಿಗೆ 1960 ಸ್ಮಾರ್ಟ್‌ಫೋನ್‌ ಭಾಗ್ಯ

ಸಾಂದರ್ಭಿಕ ಚಿತ್ರ

ಶಿಡ್ಲಘಟ್ಟ: ಕೇಂದ್ರ ಸರ್ಕಾರ ಪೂರ್ವ ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಉದ್ದೇಶ  ದಿಂದ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಮಕ್ಕಳ ಪೌಷ್ಟಿಕ ಬೆಳವಣಿಗೆ, ಗರ್ಭಿಣಿ ಮತ್ತು ಬಾಣಂತಿಯರ ಮಾಹಿತಿ ಕಲೆ ಹಾಕಲು ಪೋಷಣ್‌ ಅಭಿಯಾನ ಕಾರ್ಯಕ್ರಮದಡಿ ಅಂಗನವಾಡಿ ಗಳಿಗೆ ಸ್ಮಾರ್ಟ್‌ಫೋನ್‌ ವಿತರಿಸುವ ಭಾಗ್ಯ ಕೂಡಿಬಂದಿದ್ದು ಜಿಲ್ಲೆಗೆ 1961 ಬಂದಿದೆ.

ಉದ್ಯೋಗ ಖಾತ್ರಿ ಯೋಜನೆ ಮೂಲಕ ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಲು ಜಿಪಂ ಸಿಇಒ ಫೌಝೀಯಾ ತರುನ್ನುಮ್‌ ಕ್ರಮ ಕೈಗೊಂಡಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರ ಪೋಷಣ್‌ ಅಭಿಯಾನ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರಿಗೆ ಸ್ಮಾಟ್‌ ಫೋನ್‌ ನೀಡಲು ತೀರ್ಮಾನಿ ಸಿದ್ದು, ಅದರಂತೆ ಜಿಲ್ಲೆಯ 1961 ಅಂಗನವಾಡಿಗಳಿಗೆ ಸ್ಮಾರ್ಟ್‌ಫೋನ್‌ ದೊರೆಯಲಿದೆ. ಏನಿದು ಸ್ಮಾರ್ಟ್‌ಪೋನ್‌ ಯೋಜನೆ: ಕೇಂದ್ರ ಸರ್ಕಾರ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಕಾರ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆ ಅಪೌಷ್ಟಿಕತೆಯಿಂದ ಮತ್ತು ರಕ್ತಹೀನತೆಯಿಂದ ಮಕ್ಕಳು ಮತ್ತು ಮಹಿಳೆಯರ ಸಾವಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ.

ಪ್ರತಿಯೊಂದು ಅಂಗನವಾಡಿ ಕೇಂದ್ರಗಳ ಮಾಹಿತಿ ಕೇಂದ್ರಗಳಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದ್ದು, ಸ್ಮಾರ್ಟ್‌ಫೋನ್‌ಗಳ ಮೂಲಕ ಮಕ್ಕಳ ವಿವರ, ಗರ್ಭಿಣಿ ಮತ್ತು ಬಾಣಂತಿಯರ ಮಾಹಿತಿ ದಾಖಲಿಸಲು ಸಹಕಾರಿಯಾಗಲಿದೆ. ತರಬೇತಿ ನೀಡಲಾಗಿದೆ: ರಾಜ್ಯದ ಅಂಗನವಾಡಿ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ಸ್ನೇಹ ಆ್ಯಪ್‌ ಅಭಿವೃದ್ಧಿಗೊಳಿಸಲಾಗಿದ್ದು, ಅಂಗನವಾಡಿ ಕಾರ್ಯ ಕರ್ತರು ತಮ್ಮ ಕೇಂದ್ರದ ವಿವರ ದಾಖಲಾತಿ ಮಾಡಬೇಕಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಜತೆಗೆ ಇಲಾಖೆಯ ಮೇಲ್ವಚಾರಕರಿಗೂ ಸ್ಮಾರ್ಟ್‌  ಫೋನ್‌ ವಿತರಿಸಲು ಯೋಜನೆ ರೂಪಿಸಿ ಸ್ನೇಹ ಆ್ಯಪ್‌ ತಂತ್ರಾಂಶದಲ್ಲಿ ಹೇಗೆ ಮಾಹಿತಿಗಳನ್ನು ಅಪ್‌ಲೋಡ್‌ ಮಾಡಬೇಕೆಂದು ತರಬೇತಿ ಸಹ ನೀಡಲಾಗಿದೆ.

ಮಕ್ಕಳ ವಿವರ, ಆಹಾರ ಮಾಹಿತಿ: ಅಂಗನವಾಡಿ ಕೇಂದ್ರ ಗಳಲ್ಲಿ ಮಕ್ಕಳ ವಿವರ, ಅವರ ತೂಕ, ಎತ್ತರ, ನೀಡಿದ ಆಹಾರದ ವಿವರ ಮತ್ತು ಕೇಂದ್ರ ವ್ಯಾಪ್ತಿಯಲ್ಲಿರುವ ಗರ್ಭಿಣಿಯರು, ಬಾಣಂತಿಯರ ವಿವರಗಳನ್ನು ದಾಖಲಾತಿ ಮಾಡಬೇಕಾಗುತ್ತದೆ. ಕೋವಿಡ್‌ ಸೋಂಕು ನಿಯಂತ್ರಿಸಲು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬರುತ್ತಿಲ್ಲ. ಆದರೂ ಸಹ ಅಂಗನವಾಡಿ ಕಾರ್ಯಕರ್ತರು ಇಲಾಖೆಯ ಯೋಜನೆಗಳನ್ನು ಜಾರಿಗೊಳಿಸಲು ಶ್ರಮ ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಂಗನ ವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ಫೋನ್‌ ವಿತರಿಸಲು ಇಲಾಖಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇಲಾಖೆಯ ಮಾಹಿತಿ ಅಪ್‌ಲೋಡ್‌ :  ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಒಟ್ಟು 6 ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಕಚೇರಿಗಳಿದ್ದು, ಇದರ ವ್ಯಾಪ್ತಿಯಲ್ಲಿ ಒಟ್ಟು 1960 ಅಂಗನವಾಡಿ ಕೇಂದ್ರಗಳು ಕಾರ್ಯಾನಿರ್ವಹಿಸುತ್ತಿವೆ. ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣೆಯ ಮೇಲುಸ್ತುವಾರಿಗಾಗಿ 70 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರದಿಂದ ನೀಡುವ ಸ್ಮಾರ್ಟ್ ಫೋನ್‌ ಬಳಸಿ ಇಲಾಖೆಯ ಪ್ರಗತಿಯನ್ನು ಅಪ್‌ಲೋಡ್‌ ಮಾಡಬೇಕು. ಅನ್ಯ ಉದ್ದೇಶಗಳಿಗೆ ಬಳಕೆ ಮಾಡಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

‌ಗರ್ಭಿಣಿ, ಬಾಣಂತಿಯರು, ಮಕ್ಕಳ ಮನೆಗೆ ಪೌಷ್ಟಿಕ ಆಹಾರ: ಸಿಡಿಪಿಒ ವೈ.ನಾಗವೇಣಿ : ಕೋವಿಡ್ ಸೋಂಕು ಹರಡಿರುವುದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಹಾಜರಾಗುತ್ತಿಲ್ಲ. ಕೇಂದ್ರಗಳ ಕಾರ್ಯಕರ್ತರು ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಮನೆಗಳಿಗೆ ಪೂರಕ ಪೌಷ್ಟಿಕ ಆಹಾರ ವಿತರಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಶಿಡ್ಲಘಟ್ಟ ಸಿಡಿಪಿಒ ವೈ.ನಾಗವೇಣಿ ತಿಳಿಸಿದರು. ಯೋಜನೆ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಗಳಂತೆ ಮನೆ ಮನೆಗೆ ಜನರ ಆರೋಗ್ಯ ಮಾಹಿತಿ ಕಲೆ ಹಾಕುವ ಕೆಲಸ ಕಾರ್ಯಕರ್ತರು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೆ ಸ್ಮಾರ್ಟ್‌ಫೋನ್‌ ಮತ್ತು ಸಿಮ್‌ ವಿತರಿಸಲಾಗುವುದು ಎಂದು ತಿಳಿಸಿದರು.

ಮಾಪನ ಯಂತ್ರ :  ಪೋಷಣ್‌ ಅಭಿಯಾನದ ಮೂಲಕ ಅಂಗನ ವಾಡಿಗಳಿಗೆ ಮಕ್ಕಳ ತೂಕ ಹಾಗೂ ಎತ್ತರ ಅಳೆಯುವ ಹೊಸದಾದ ಯಂತ್ರಗಳು ಕೂಡ ಬಂದಿದ್ದು, ಈಗಾಗಲೇ ಅದನ್ನು ಎಲ್ಲಾ ಕೇಂದ್ರಗಳಿಗೆ ತಲುಪಿಸಲಾಗಿದೆ. ಸ್ಯಾಮ್‌ಸಂಗ್‌ ಕಂಪನಿಯ ಮೊಬೈಲ್‌ಗ‌ಳಾಗಿದ್ದು, ಜೊತೆಗೆ ಪವರ್‌ಬ್ಯಾಂಕ್‌, ಹೆಡ್‌ಫೋನ್‌, ಡಸ್ಟ್‌ಪ್ರೂಫ್‌ ಪೌಚ್‌, ಮೆಮೊರಿ ಕಾರ್ಡ್‌ ಮೊದಲಾದ ಸಲಕರಣೆಗಳಿರುತ್ತವೆ.

ಸರ್ಕಾರ ಸ್ಮಾರ್ಟ್‌ಫೋನ್‌ ನೀಡುತ್ತಿರುವುದು ಸಂತೋಷ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ವರ್ಕ್‌ ಇರುವುದಿಲ್ಲ. ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರ ಮಾಹಿತಿ ಅಪ್‌ ಲೋಡ್‌ ಮಾಡಲು ಮತ್ತು ಯೋಜನೆಯನ್ನು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸಲು ಸಹಕಾರ ನೀಡುತ್ತೇವೆ. ತಾಂತ್ರಿಕ ದೋಷವಾದರೆ ಅದಕ್ಕೆ ಅಂಗನವಾಡಿ ಕಾರ್ಯಕರ್ತರನ್ನು ಹೊಣೆ ಮಾಡಬಾರದು.  ಲಕ್ಷ್ಮೀದೇವಮ್ಮ, ಸಿಐಟಿಯು ಜಿಲ್ಲಾಧ್ಯಕ್ಷೆ

ಪೋಷಣ್‌ ಅಭಿಯಾನದ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಕ್ಕಳು, ಗರ್ಭಿಣಿಯರು,ಬಾಣಂತಿಯರ ಮಾಹಿತಿ ದಾಖಲಿಸಲು ಸ್ಮಾರ್ಟ್‌ಫೋನ್‌ ವಿತರಿಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ. ಜಿಲ್ಲೆಯ 1960 ಅಂಗನವಾಡಿಗಳಿಗೆ ಮತ್ತು 70

ಮೇಲ್ವಿಚಾರಕರಿಗೆ ಶೀಘ್ರವೇ ಸ್ಮಾರ್ಟ್‌ಫೋನ್‌ ಗಳನ್ನು ವಿತರಿಸಿ ಅದರ ಮೂಲಕ ಸ್ನೇಹ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಮಾಹಿತಿ ಅಪ್‌ಲೋಡ್‌ ಮಾಡಲು ತರಬೇತಿ ನೀಡಲಾಗಿದೆ.  ನಾರಾಯಣಸ್ವಾಮಿ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

 

-ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.