ಸೋಮನಾಥಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ; ಗ್ರಾಮಸ್ಥರಿಂದ ಸ್ವಾಗತ
Team Udayavani, Mar 19, 2022, 12:43 PM IST
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಹೋಬಳಿಯ ಸೋಮನಾಥಪುರ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿ ಆರ್. ಲತಾ ದಿನವಿಡಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಗ್ರಾಮಕ್ಕೆ ಆಗಮಿಸಿದ್ದಾರೆ.
ಗ್ರಾಮದ ಪ್ರವೇಶ ರಸ್ತೆಯಲ್ಲಿ ಮಹಿಳೆಯರು ಆರತಿ ಬೆಳಗಿ ಸಂಭ್ರಮದ ಸ್ವಾಗತ ನೀಡಿದರು. ಹಬ್ಬದ ಸಡಗರ, ಸಂಭ್ರಮದ ವಾತಾವರಣ ಮನೆ ಮನೆಗಳಲ್ಲಿ ಕಳೆಗಟ್ಟಿದೆ. ನಂತರ ಗ್ರಾಮದ ಮುತ್ತರಾಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ಗ್ರಾಮದ ಅಂಬೇಡ್ಕರ್ ಕಾಲೋನಿ ಸೇರಿದಂತೆ ಇತರೆ ಕಾಲೋನಿಗಳಿಗೆ ಖುದ್ದಾಗಿ ರಸ್ತೆ, ಸ್ಚಚ್ಛತೆ ಹಾಗೂ ನೈರ್ಮಲ್ಯ ಕುರಿತು ಪರಿಶೀಲನೆ ನಡೆಸಿದರು. ಜೊತೆಗೆ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಬಹುಕಾಲದ ಗೆಳತಿ ವಿನಿ ರಾಮನ್ ಜೊತೆಗೆ ವಿವಾಹವಾದ ಗ್ಲೆನ್ ಮ್ಯಾಕ್ಸ್ ವೆಲ್
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಬಾಗೇಪಲ್ಲಿ ತಾಲ್ಲೂಕು ತಹಶೀಲ್ದಾರ್ ವೈ. ರವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ