ಇ-ಲೋಕ್ ಅದಾಲತ್ ಆರಂಭ
Team Udayavani, Aug 31, 2020, 1:54 PM IST
ಶಿಡ್ಲಘಟ್ಟ: ಕೋವಿಡ್ -19 ಎಲ್ಲೆಡೆ ವ್ಯಾಪಕವಾಗಿ ಹರಡಿರುವುದರಿಂದ ಸಾರ್ವಜನಿಕರಿಗೆ ನ್ಯಾಯ ನೀಡಲು ಇ – ಲೋಕ್ ಅದಾಲತ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ ಇ-ಲೋಕ ಅದಾಲತ್ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ವಕೀಲರಿಗೆ ಆದಾಯ ಇರುವುದಿಲ್ಲ. ಆದ್ದರಿಂದ ಇಂತಹ ಅದಾಲತ್ ನಿಂದ ಸಾರ್ವಜನಿಕ ಪ್ರಕರಣಗಳು ಇತ್ಯರ್ಥ ಮಾಡುವುದರಿಂದಾಗಿ ಸಾರ್ವಜನಿಕರಿಗೆ ಸಹಾಯವಾಗುತ್ತದೆ ಹಾಗೂ ವಕೀಲರಿಗೆ ಆದಾಯ ಬರುತ್ತದೆ ಎಂದು ಹೇಳಿದರು.
ಇ-ಲೋಕ ಅದಾಲತ್ನ ಉಪಯೋಗ ಪ್ರತಿ ಜಿಲ್ಲೆ ಮತ್ತು ತಾಲೂಕಿನ ಸಾರ್ವಜನಿಕರಿಗೆ ತಲುಪಬೇಕು, ಸಾರ್ವಜನಿಕರು ತಮ್ಮ ಮೊಬೆ„ಲ್ ಮೂಲಕ ನ್ಯಾಯಾಧೀಶರ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.
ಇ ಲೋಕ್ ಅದಾಲತ್ ಎಂದರೆ ವಾದಿ ಪ್ರತಿವಾದಿಗಳು ಮತ್ತು ಅವರ ಪರ ವಕೀಲರು ತಮ್ಮ ಕಚೇರಿ ಅಥವಾ ಮನೆಗಳಿಂದ ನ್ಯಾಯಾಲಯದಿಂದ ಒದಗಿಸಲಾಗುವ ಲಿಂಕ್ ಮೂಲಕ ವೀಡಿಯೋ ಕಾನ್ಫರೆನ್ಸ್ಗೆ ಸೇರ್ಪಡೆಯಾಗಬೇಕು. ಒಂದು ವೇಳೆ ತಾಂತ್ರಿಕ ಲೋಪದೋಷಗಳು ಕಂಡುಬಂದಲ್ಲಿ, ಕರೆ ಮಾಡುವ ಮೂಲಕ ತಮ್ಮ ವಾದ ಮತ್ತು ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಜಿಲ್ಲಾ ಹೆಚ್ಚುವರಿ ನ್ಯಾ. ಬಿ.ಸಿ.ಭಾನುಮತಿ, ಹಿರಿಯ ಸಿವಿಲ್ ನ್ಯಾ.ಎಚ್.ದೇವರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು