ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ವಿಜ್ಞಾನ ಸಾಹಿತ್ಯ ಸಮಾವೇಶ
Team Udayavani, Sep 15, 2019, 3:35 PM IST
ಚಿಕ್ಕಬಳ್ಳಾಪುರ; ಜಿಲ್ಲೆಯ ವಿಶ್ವ ವಿಖ್ಯಾತ ಎಂಜಿನಿಯರ್, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ನವರ 159ನೇ ಜಯಂತಿ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕಸಾಪ ಘಟಕದಿಂದ ರಾಜ್ಯ ಮಟ್ಟದ ವಿಜ್ಞಾನ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಸರ್ .ಎಂ.ವಿ.ಹುಟ್ಟೂರಾದ ಮುದ್ದೇನಹಳ್ಳಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ.ಕೈವಾರ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ವಿಜ್ಞಾನ ಸಾಹಿತ್ಯ ಸಮಾವೇಶಗೊಂಡಿದ್ದು ಸ್ಥಳೀಯ ವಿಟಿಯು ತಾಂತ್ರಿಕ ಶಿಕ್ಷಣ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಸಮ್ಮೇಳನದಲ್ಲಿ ವಿಶೇಷವಾಗಿ ರಾಷ್ಟ್ರಕ್ಕೆ ಸರ್.ಎಂ.ವಿಶ್ವೇಶ್ವರಯ್ಯ ನವರ ಕೊಡುಗೆ, ಅದರಲ್ಲೂ ಕೃಷಿ, ಸಾಹಿತ್ಯ, ತಂತ್ರಜ್ಞಾನ, ನೀರಾವರಿ, ಕೈಗಾರಿಗಳ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳ ಬಗ್ಗೆ ರಾಜ್ಯದ ಪ್ರಖ್ಯಾತ ತಂತ್ರಜ್ಞರು, ಚಿಂತಕರು, ಸಾಹಿತಿಗಳು ಪಾಲ್ಗೊಂಡ ಚಿಂತನ, ಮಂಥನ ನಡೆಸುವುದರ ಜೊತೆಗೆ ರಾಷ್ಟ್ರದ ಭವಿಷ್ಯದ ಸಮಸ್ಯೆ, ಸವಾಲುಗಳ ಬಗ್ಗೆಯು ಚರ್ಚೆ, ಸಂವಾದ ಕಾರ್ಯಕ್ರಮಗಳನ್ನು ಇಡೀ ದಿನ ಕಸಾಪ ಹಮ್ಮಿಕೊಂಡಿದೆ.
ಸಮಾವೇಶದಲ್ಲಿ ಸರ್ವಧರ್ಮ ಪೀಠದ ಶ್ರೀ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನಯ್ಯ ಪಾಲ್ಗೊಂಡಿದ್ದು ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ, ಕಾಲೇಜು ಪ್ರಾಧ್ಯಾಪಕ ಮೋಹನ್ ಕುಮಾರ್ ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ