ವಿರೋಧ ಪಕ್ಷಗಳ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ: ಹೆಚ್. ನಾಗೇಶ್
Team Udayavani, Oct 19, 2019, 2:37 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ವಿರೋಧ ಪಕ್ಷಗಳ ಕೇಲಸವೇ ವಿರೋಧ ಮಾಡುವುದಲ್ಲವಾ? ಹಾಗಾಗಿ ವಿರೋಧ ಪಕ್ಷಗಳ ಹೇಳಿಕೆಗಳನ್ನು ಯಾರು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಹೆಚ್ ನಾಗೇಶ್ ತಿಳಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ಶನಿವಾರ ನೂತನ ಐಟಿಐ ಕಟ್ಡಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅತ್ಯಂತ ಶ್ರದ್ದಾ ಭಕ್ತಿಂದ ಕೆಲಸ ಮಾಡುತ್ತಿದೆ ಎಂದರು.
ಒಂದೂವರೆ ತಿಂಗಳ ಕಾಲ ಸಚಿವ ಸಂಪುಟ ಇಲ್ಲದಿದ್ದರೂ ಸಿಎಂ ಯಡಿಯೂರಪ್ಪ, ಒಂದು ರೀತಿ ಒಂಟಿ ಸಲಗದ ರೀತಿಯಲ್ಲಿ ನೆರೆ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಯಡಿಯೂಪ್ಪ ಸಿಎಂ ಆದ ಮೇಲೆ ದೇವರ ಅನುಗ್ರಹದಿಂದ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಅಗುತ್ತಿದೆ. ಪ್ರಕೃತಿ ವಿಕೋಪದಿಂದ ನೆರೆ ಬಂದಿದೆ. ಆದರೆ ಸರ್ಕಾರ ಎಲ್ಲವನ್ನು ಸಮರ್ಪಕವಾಗಿ ಮಾಡುತ್ತಿದೆ. ವಿರೋಧ ಪಕ್ಷಗಳು ಏನಾದರೂ ಒಂದು ಹೇಳಿಕೆ, ವ್ಯಾಖ್ಯಾನ ನೀಡುವುದಕ್ಕಾಗಿ ಸರ್ಕಾರದ ವಿರುದ್ದ ಮಾತನಾಡುತ್ತಾರೆ. ಅದು ಅವರ ಕೆಲಸ, ಅದನ್ನು ಯಾರು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!