ಕಾರ್ಮಿಕ ಕಾನೂನು ರಕ್ಷಣೆಗೆ ಆಗ್ರಹಿಸಿ ಮುಷ್ಕರ


Team Udayavani, Dec 29, 2019, 3:00 AM IST

karmika-kanoonu

ಚಿಕ್ಕಬಳ್ಳಾಪುರ: ಕೇಂದ್ರದ ಬಿಜೆಪಿ ಸರ್ಕಾರ ದಮನ ಮಾಡುತ್ತಿರುವ ಕಾರ್ಮಿಕ ಕಾನೂನುಗಳನ್ನು ರಕ್ಷಿಸುವ ದಿಸೆಯಲ್ಲಿ ದೇಶದ 11 ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ.8ಕ್ಕೆ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಜಿಲ್ಲಾದ್ಯಂತ ಆಚರಿಸಲಾಗುವುದು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ ತಿಳಿಸಿದರು.

ನಗರದ ವಾಪಸಂದ್ರದಲ್ಲಿರುವ ಸಿಐಟಿಯು ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಸಿಐಟಿಯು ಪದಾಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಿಫ‌ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನಿಷ್ಠ ವೇತನ ನೀಡಲಿ: ಕೇಂದ್ರ ಸರ್ಕಾರ 1948ರ ಕಾರ್ಮಿಕ ಕಾನೂನುಗಳನ್ನು ರಕ್ಷಣೆ ಮಾಡಬೇಕಿದೆ. ತಿದ್ದುಪಡಿ ತರಲು ಉದ್ದೇಶಿಸಿರುವ ಕಾನೂನುಗಳನ್ನು ಕೂಡಲೇ ಕೈ ಬಿಡಬೇಕು. ಸ್ಕೀಂ ವರ್ಕರ್ ಎಂದು ಹೇಳುವ ಅಂಗನವಾಡಿ, ಆಶಾ, ಅಕ್ಷರ ದಾಸೋಹ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಅವರಿಗೆ ಕನಿಷ್ಠ ವೇತನ ನೀಡಬೇಕೆಂದರು.

21 ಸಾವಿರ ರೂ. ನಿಗದಿಗೊಳಿಸಿ: ಗ್ರಾಪಂ ನೌಕರರಿಗೆ ಆನ್‌ಲೈನ್‌ ಮುಖಾಂತರ ಕನಿಷ್ಠ ವೇತನವನ್ನು ಅವರ ಬ್ಯಾಂಕ್‌ ಖಾತೆಗೆ ನೇರವಾಗಿ ಪಾವತಿ ಮಾಡಬೇಕು. ಪ್ರತಿ ಕಾರ್ಮಿಕನಿಗೆ ಕನಿಷ್ಠ 21 ಸಾವಿರ ರೂ. ವೇತನ ನಿಗದಿಗೊಳಿಸುವ ಬಗ್ಗೆ ಕಳೆದ ಮಾರ್ಚ್‌ ತಿಂಗಳಲ್ಲಿ ನಡೆದ ಅಖಿಲ ಭಾರತ ಕಾರ್ಮಿಕ ಸಮ್ಮೇಳನದ ನಿರ್ಣಯವನ್ನು ಜಾರಿಗೆ ತರಬೇಕೆಂದು ಸಿದ್ದಗಂಗಪ್ಪ ಆಗ್ರಹಿಸಿದರು.

ಕಾನೂನು ದುರ್ಬಲಗೊಳಿಸಲು ಯತ್ನ: ಕಾರ್ಮಿಕರಿಗೆ ಸಿಗುತ್ತಿರುವ ಅಲ್ಪವೇತನ ಇಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟವಾಗಿದೆ. ಮಕ್ಕಳ ಶಿಕ್ಷಣ ಶುಲ್ಕದಿಂದ ಹಿಡಿದು ಮನೆ ಬಾಡಿಗೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕಾರ್ಮಿಕರ ರಕ್ಷಣೆಗೆ ಇರುವ ಕಾನೂನುಗಳನ್ನು ತಿದ್ದುಪಡಿ ಹೆಸರಿನಲ್ಲಿ ಇನ್ನಷ್ಟು ರ್ದುಬಲಗೊಳಿಸುವ ಕೆಲಸವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿದೆ ಟೀಕಿಸಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ ಮಾತನಾಡಿ, ಸಾರ್ವತ್ರಿಕ ಮುಷ್ಕರವನ್ನು ಜಿಲ್ಲಾದ್ಯಂತ ಯಶಸ್ವಿಗೊಳಿಸಲು ಸಿಐಟಿಯು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಪೂರ್ವಭಾವಿ ಸಭೆ ನಡೆಸಿ ದುಡಿಯುವ ವರ್ಗವಾದ ಕೃಷಿ ಕೂಲಿ ಕಾರ್ಮಿಕರನ್ನು ಹಾಗೂ ಮಹಿಳೆಯರನ್ನು ಹೋರಾಟಕ್ಕೆ ಅಣಿಗೊಳಿಸಲಾಗುವುದು ಎಂದರು.

ಸಾರ್ವತ್ರಿಕ ಮುಷ್ಕರ ಹಿನ್ನಲೆಯಲ್ಲಿ ಡಿ.30 ರಂದು ಗೌರಿಬಿದನೂರು, 31ಕ್ಕೆ ಚಿಂತಾಮಣಿ, ಜ.2ಕ್ಕೆ ಚಿಕ್ಕಬಳ್ಳಾಪುರದಲ್ಲಿ ತಾಲೂಕು ಮಟ್ಟದ ಸಮಾವೇಶ ನಡೆಸಿ ಕಾರ್ಮಿಕರಲ್ಲಿ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಲಾಗುವುದು ಎಂದರು. ಸಭೆಯಲ್ಲಿ ಚಿಂತಾಮಣಿ ಅಧ್ಯಕ್ಷ ನಾಗರಾಜ್‌, ತಿಪ್ಪಣ್ಣ, ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಆಂಜನೇಯರೆಡ್ಡಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.