ಉಪ ಮಾರುಕಟ್ಟೆ ನಿರ್ಮಾಣ ಯಾವಾಗ?


Team Udayavani, Mar 28, 2023, 1:12 PM IST

tdy-15

ಗುಡಿಬಂಡೆ: ಚುನಾವಣೆ ಮುಗಿದು ಮತ್ತೂಂದು ಚುನಾವಣೆ ಬರುತ್ತಿದ್ದರು ತಾಲೂಕಿನಲ್ಲಿ ಎಪಿಎಂಸಿ ಮಾರುಕಟ್ಟೆ ತೆರೆಯಲು ಜನ ಪ್ರತಿನಿಧಿಗಳ ಹಾಗೂ ಅಧಿಕಾರಿಗಳು ಬೇಜಾವಾಬ್ದಾರಿ ತನ ತೋರುತ್ತಿರುವುದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2007 ರಲ್ಲಿಯೇ ಬಾಗೇಪಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾರಂಭವಾಗಿದ್ದು, ಆ ಸಮಯದಲ್ಲಿಯೇ ಗುಡಿಬಂಡೆ ತಾಲೂಕಿನಲ್ಲಿ ಉಪ ಮಾರುಕಟ್ಟೆಯನ್ನು ಪ್ರಾರಂಭಿಸಲು ಘೋಷಣೆ ಮಾಡಲಾಗಿತ್ತು ಎಂದು ಎಪಿಎಂಸಿ ಅಧಿಕಾರಿಗಳೇ ಹೇಳುತ್ತಿದ್ದಾರೆ. ಅಂದಿನಿಂದಲೂ ಉಪಮಾರುಕಟ್ಟೆ ಪ್ರಾರಂಭಿಸಲು ಎಪಿಎಂಸಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನಡುವೆ ಸೂಕ್ತ ಜಾಗ ಕೋರಿ ಹಗ್ಗ ಜಗ್ಗಾಟಗಳೇ ನಡೆದು ಹೋಗಿ, ಕಂದಾಯ ಇಲಾಖೆ ಜಾಗ ಗುರುತಿಸಿ ಕೊಟ್ಟರು, ಈಗ ಎಪಿಎಂಸಿ ಅಧಿಕಾರಿಗಳು ಮಾತ್ರ ಮಾರುಕಟ್ಟೆ ಸ್ಥಾಪಿಸಲು ಬೇಜಾಬ್ದಾರಿ ತನ ತೋರುತ್ತಿರುವುದು ದುರಂತ.

ತರಕಾರಿ ಮಾರುಕಟ್ಟೆಗೆ ಸಾಗಲು ನಿತ್ಯವು ಪರದಾಟ: ತಾಲೂಕಿನಿಂದ ರೈತರು ಪ್ರತಿ ದಿನ ಬೆಳೆಗಳನ್ನು ಸಾಗಿಸಲು ಹತ್ತಿರದ 20 ಕಿಮೀ ದೂರದಲ್ಲಿರುವ ಬಾಗೇಪಲ್ಲಿ ಎಪಿಎಂಸಿ ಹೊರತು ಪಡಿಸಿ, ಗೌರೀಬಿದನೂರು, ಚಿಕ್ಕಬಳ್ಳಾಪುರ, ಹಿಂದೂಪುರ ಮಾರುಕಟ್ಟೆಗಳಿಗೆ ಹೋಗಲು ಸುಮಾರು 35 ರಿಂದ 45 ಕಿ.ಮೀ ಬೆಳೆಗಳನ್ನು ಬಾಡಿಗೆ ವಾಹನದಲ್ಲಿ ತೆಗೆದುಕೊಂಡು ಹೋಗಿ ಮಾರಾಟ ಮಾಡಿ ಬರಬೇಕಾದ ಪರಿಸ್ಥಿತಿಯಲ್ಲಿ ರೈತರು ಇದ್ದು, ಅಲ್ಲಿಗೆ ಹೋಗಿ ಮಾರಾಟ ಮಾಡಿದ ನಂತರ ಕೆಲವೊಮ್ಮೆ ಸಾಗಾಣಿಕೆ ವೆಚ್ಚವೂ ಸಹ ಬಾರದೇ ದುಬಾರಿ ವೆಚ್ಚ ಭರಿಸುವ ಸ್ಥಿತಿ ಇದೆ.

ಜಾಗ ಗುರುತಿಸಿ ಮಂಜೂರಾತಿಗೆ ಸಲ್ಲಿಕೆ: 2017ರಲ್ಲಿ ಗುಡಿಬಂಡೆ ತಾಲೂಕಿನ, ಪಲ್ಲೆಗಾರಹಳ್ಳಿ ಗ್ರಾಮದ ಸರ್ವೆ ನಂ. 8/1ಬಿ ರಲ್ಲಿ 14.05 ಎಕರೆ ಜಮೀನು ಮಂಜೂರಾತಿ ತೀರ್ಮಾನಿಸಿ ಅದರಂತೆ ತಹಶೀಲ್ದಾರ್‌ ರಿಗೆ ಜಮೀನು ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಲಾಗಿದೆ.

ಸರ್ಕಾರಕ್ಕೆ ಶುಲ್ಕ ಪಾವತಿಸಿದರೆ ಮಂಜೂರು: ಎಪಿಎಂಸಿ ಸಮಿತಿ ಕೋರಿಕೆಯಂತೆ ಜಮೀನು ಮಂಜೂರು ಮಾಡಲು ತಹಶೀಲ್ದಾರ್‌ ಗುಡಿಬಂಡೆ ರವರು ಜಮೀನು ಮಂಜೂರು ಮಾಡಲು ಸರ್ಕಾರ ವಿಧಿಸುವ ಮೊತ್ತ ಪಾವತಿಸಲು, ಕೋರಿಕೆದಾರರು ಒದಗಿಸುವ ಸೌಲಭ್ಯಗಳ ಬಗ್ಗೆ ನೀಲಿನಕಾಶೆ, ಯೋಜನಾ ಮತ್ತು ಅಂದಾಜು ಪಟ್ಟಿ ನೀಡುವಂತೆ 2018ರಲ್ಲಿ ರಂದು ಪತ್ರ ನೀಡಿದ್ದಾರೆ, ಕಂದಾಯ ಅಧಿಕಾರಿಗಳು ಷರತ್ತುಗಳು ವಿಧಿಸಿದ್ದೇ ತಡ, ಜಮೀನು ಮಂಜೂರಾತಿ ವಿಚಾರ ಅಲ್ಲಿಗೆ ಕೈ ಬಿಟ್ಟು, ಶಾಸಕರು ಇತರೆ ಮುಖಂಡರು ಪ್ರಸ್ತಾಪಿಸಿದಾಗ ಅರ್ಜಿ ಸಲ್ಲಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ವಹಿಸಿದ್ದಾರೆ.

ಚುನಾವಣೆ ವೇಳೆ ಮಾತ್ರ ಅಭಿವೃದ್ಧಿ ಘೋಷಣೆ : ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಜನ ಪ್ರತಿನಿಧಿಗಳು ರೈತರನ್ನು ಓಲೈಕೆ ಮಾಡಲು ಶೀಘ್ರದಲ್ಲೇ ಗುಡಿಬಂಡೆ ತಾಲೂಕಿನಲ್ಲಿ ಎಪಿಎಂಸಿ ಮಾರುಕಟ್ಟೆ ಸ್ಥಾಪನೆ ಮಾಡುತ್ತೇವೆ ಎಂದು ಭರವಸೆಗಳನ್ನು ಕೊಡುತ್ತಾ ಕಾಲಹರಣ ಮಾಡುತ್ತಿದ್ದಾರೆಯೇ ಹೊರತು ಅದನ್ನು ಜಾರಿಗೆ ತರಲು ಮಾತ್ರ ಪ್ರಯತ್ನ ಪಡೆದ ಕಾರಣ, ರಾಜಕಾರಣಿಗಳ ಬೇಜವಾಬ್ದಾರಿ ತನಕ್ಕೆ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ಗುಡಿಬಂಡೆ ತಾಲೂಕಿನಲ್ಲಿ ಪ್ರಮುಖವಾಗಿ ಕೃಷಿಯೇ ಅದಾಯ ಮೂಲವಾಗಿದ್ದು, ಇಲ್ಲಿ ಸ್ಥಳಿಯವಾಗಿ ಮಾರುಕಟ್ಟೆ ಇಲ್ಲದೆ, ಬೇರೆಡೆಗೆ ಸಾಗಾಣಿಕೆ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾರುಕಟ್ಟೆ ಪ್ರಾರಂಭಿಸಬೇಕು. ●ಮಧು.ವೈ. ಪಿ.ಎಸ್‌.ಎಸ್‌.ಮುಖಂಡ, ಹಳೇ ಯರ್ರಹಳ್ಳಿ

ತಾಲೂಕಿನಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಇಲ್ಲದ ಕಾರಣ ಬೇರೆಡೆಗೆ ಹೋಗಿ ಮಾರಾಟ ಮಾಡಬೇಕಾಗಿದ್ದು, ಇದರಿಂದ ಬರುವ ಆದಾಯವೂ ಕಡಿಮೆಯಾಗಿ, ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ. ಶೀಘ್ರದಲ್ಲೇ ತಾಲೂಕಿನಲ್ಲಿ ಮಾರುಕಟ್ಟೆ ಸ್ಥಾಪನೆ ಮಾಡಲು ಕ್ರಮ ವಹಿಸಬೇಕು. -ಪಿ.ಆರ್‌.ಸುದೀಪ್‌, ರೈತ, ಪೋಲಂಪಲ್ಲಿ

  • ನವೀನ್‌ಕುಮಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.