ಕಾರ್ಮಿಕರ ಆಶ್ರಯ ತಾಣಕ್ಕೆ ಸುಧಾಕರ್ ಭೇಟಿ
Team Udayavani, Apr 11, 2020, 2:51 PM IST
ಬಾಗೇಪಲ್ಲಿ: ಪಟ್ಟಣದ ಪರಿಶಿಷ್ಟ ವರ್ಗ ಗಳ ವಿದ್ಯಾರ್ಥಿ ನಿಲಯದಲ್ಲಿ ವಾಸವಾಗಿರುವ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ವಲಸೆ ಕಾರ್ಮಿಕರ ಹಾಗೂ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಶ್ರಯ ಪಡೆದಿರುವ ಮಧ್ಯಪ್ರದೇಶದ ವಲಸೆ ಕಾರ್ಮಿಕರ ಆಶ್ರಯ ತಾಣಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ಹೊರ ವಲಯದ ಪ್ರಥಮ ದರ್ಜೆ ಕಾಲೀಜಿನಲ್ಲಿ ಆಶ್ರಯ ಪಡೆದಿರುವ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ವಾಸವಾಗಿರುವ ವಲಸೆ ಕಾರ್ಮಿಕರನ್ನು ಶುಕ್ರವಾರ ಸಂಜೆ 5 ಗಂಟೆಗೆ ಭೇಟಿಯಾದ ಸಚಿವ ಡಾ. ಸುಧಾಕರ್, ಇಲ್ಲಿ ನಿಮಗೆ ಅಧಿಕಾರಿಗಳು ಚೆನ್ನಾಗಿ ನೋಡಿಕೊಳ್ಳುತ್ತಿ ದ್ದಾರೆಯೇ, ಸಮಯಕ್ಕೆ ಸರಿಯಾಗಿ ಊಟ ನೀರು ಸಿಗುತ್ತಿದೆಯಾ ಎಂದು ವಲಸೆ ಕಾರ್ಮಿಕರನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಆದಷ್ಟು ಬೇಗ ನಮ್ಮ ಊರುಗಳಿಗೆ ತೆರಳಬೇಕು ಎಂದರು. ಲಾಕ್ಡೌನ್ ಸದ್ಯಕ್ಕೆ ತೆರವುಗೊಳಿಸುವುದಿಲ್ಲ. ಜನರು ಆದಷ್ಟು ಮನೆಯಲ್ಲಿ ಇರಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಎಸ್. ಎನ್.ಸುಬ್ಟಾರೆಡ್ಡಿ, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ(ಚಿನ್ನಿ), ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಫೌಝೀಯಾ ತರುನ್ನಮ್, ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್, ತಹಶೀಲ್ದಾರ್ ಎಂ.ನಾಗರಾಜು, ಇಒ ಮಂಜುನಾಥ್ಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮಂಡಲ ಅಧ್ಯಕ್ಷ ಪ್ರತಾಪ್, ಕೆಡಿಪಿ ಸದಸ್ಯ ಅಮರನಾಥರೆಡ್ಡಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ