ಎಲ್ಲಾ ವಾಹನಗಳಿಗೆ ವಿಮೆ ಕಡ್ಡಾಯವಾಗಿ ಮಾಡಿಸಿಕೊಳ್ಳಿ
ವಾಹನ ಚಾಲಕರಿಗೆ ನ್ಯಾ.ಲಕ್ಷ್ಮೀಕಾಂತ್ ಜಾನಕಿ ಮಿಸ್ಕಿನ್ ಸಲಹೆ ವಾಹನಗಳ ಕಾಯ್ದೆ, ಗ್ರಾಹಕರ ಕಾನೂನು ಅರಿವು ನೆರವು
Team Udayavani, Oct 9, 2021, 3:47 PM IST
ಚಿಕ್ಕಬಳ್ಳಾಪುರ: ವೈಯಕ್ತಿಕ, ಸಾರ್ವಜನಿಕ ಉದ್ದೇಶಕ್ಕೆ ಬಳಕೆ ಮಾಡುವ ಎಲ್ಲಾ ವಾಹನಗಳಿಗೆ ವಿಮೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮೀಕಾಂತ್ ಜಾನಕಿ ಮಿಸ್ಕಿನ್ ತಿಳಿಸಿದರು.
ನಗರದ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಇಲಾಖೆಯು 1988ರ ಮೋಟಾರು ವಾಹನಗಳ ಕಾಯ್ದೆ ಮತ್ತು ಗ್ರಾಹಕರ ಕಾನೂನು ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಚಾರ ನಿಯಮ ಪಾಲಿಸಿ: ವಾಹನ ವಿಮೆ ಮಾಡಿಸಿಕೊಂಡಿಲ್ಲದ ಕೆಲವು ಮಾಲಿಕರು, ಅಪಘಾತ ಸಂಭವಿಸಿದಾಗ ತಮ್ಮ ಆಸ್ತಿ, ಮನೆ, ಸಂಪತ್ತನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಮೋಟಾರು ವಾಹನಗಳ ಕಾಯ್ದೆಯು ನಿಗದಿಪಡಿಸಿರುವ ಸಂಚಾರ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಅಗತ್ಯ ವಾಹನ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ವಾಹನಗಳನ್ನು ಜಾಗರೂಕತೆಯಿಂದ ಚಾಲನೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ;- ಗಡಿಕೇಶ್ವರ ಗ್ರಾಮದಲ್ಲಿ 6 ವರ್ಷಗಳಿಂದ ಕಂಪಿಸುತ್ತಿದೆ ಭೂಮಿ: ಗ್ರಾಮಸ್ಥರಲ್ಲಿ ಹೆಚ್ಚಾದ ಆತಂಕ
ಕುಟುಂಬದವರ ನೆನಪಿರಲಿ: ಸಾರ್ವಜನಿಕರ ಉದ್ದೇಶಕ್ಕೆ ಬಳಸುವ ವಾಹನಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಆಸನಗಳನ್ನು ಭರ್ತಿಮಾಡಬೇಕು, ಅತ್ಯಧಿಕ ತೂಕವನ್ನು ಹಾಕಬಾರದು, ಪರವಾನಗಿ ಹೊಂದಿರಬೇಕು, ಅಂತಹ ವಾಹನಗಳ ಚಾಲಕರು ಬ್ಯಾಡ್ಜ್ ಒಳಗೊಂಡ ಸಮವಸ್ತ್ರವನ್ನು ಧರಿಸಬೇಕು, ಚಾಲನಾ ಅವಧಿಯಲ್ಲಿ ಮೊಬೈಲ್ ಬಳಸುವಂತಹದ್ದು, ಶಿಕ್ಷಾರ್ಹ ಅಪರಾಧವಾಗಿದೆ.
ಮೋಟಾರ್ ವಾಹನ ಕಾಯ್ದೆ, ಸಂಚಾರ ನಿಯಮಗಳ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕುಟುಂಬದ ಸದಸ್ಯರು ನಿಮ್ಮನ್ನು ನಂಬಿ ಬದುಕು ಸಾಗಿಸುತ್ತಿದ್ದಾರೆ ಎಂಬುದನ್ನು ಅರಿತು ಜ್ಞಾನ ಭರಿತವಾಗಿ ಚಾಲಕರು ಚಾಲನೆ ಮಾಡಬೇಕು ಎಂದು ವಿವರಿಸಿದರು. 4 ಸಾವಿರ ರೂ.ವರೆಗೂ ದಂಡ: ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ಮಂಜುನಾಥ್ ಮಾತನಾಡಿ, 15 ವರ್ಷ ಮೇಲ್ಪಟ್ಟ ವಾಹನಗಳು ರಸ್ತೆಗೆ ಇಳಿಯದಂತೆ ತಡೆಯಲು ಹಾಗೂ ಅಂತಹ ವಾಹನಗಳನ್ನು ನಿರುಪಯುಕ್ತಗೊಳಿಸಲು ಸರ್ಕಾರ ನಿಯಮಗಳನ್ನು ರೂಪಿಸುತ್ತಿದೆ.
ಈಗಾಗಲೇ ಸರ್ಕಾರ ನೀಡಿರುವ ನಿರ್ದೇಶನಗಳನ್ವಯ ಅನಧೀಕೃತವಾಗಿ ರಸ್ತೆಗೆ ಇಳಿದ ದ್ವಿಚಕ್ರ, ಆಟೋಗಳಿಗೆ 2 ಸಾವಿರ ಹಾಗೂ ಕಾರು ಮತ್ತು ಬಸ್ಗಳಿಗೆ 4 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ ಎಂದರು. ಪ್ಯಾನಲ್ ವಕೀಲ ಪಿ.ಎ.ಬಾಬು ಫಕ್ರುದ್ದೀನ್, ಸಾರಿಗೆ ಅಧಿಕಾರಿ ಡಿ.ವಿ.ನಾಗರಾಜ, ವಿವಿಧ ವಾಹನಗಳ ಚಾಲಕರು, ಸವಾರರು, ಸಾರಿಗೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು