ಚಿಕ್ಕಬಳ್ಳಾಪುರ: ವಾರಾಂತ್ಯದ ಕರ್ಫ್ಯೂಗೆ ಬೆಂಬಲ
Team Udayavani, Apr 26, 2021, 2:54 PM IST
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ನಿಯಂತ್ರಿಸುವಉದ್ದೇಶದಿಂದ ವಾರಾಂತ್ಯದ ಕರ್ಫ್ಯೂ ಜಾರಿಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ರೇಷ್ಮೆನಾಡಿನಜನರು ಭಾನುವಾರವೂ ಉತ್ತಮ ಬೆಂಬಲ ವ್ಯಕ್ತಪಡಿಸಿದರು.
ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರ ಸೇರಿಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ನಾಗರಿಕರುಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದರು.ವಾಹನ ಸಂಚಾರವೂ ಸಂಪೂರ್ಣ ಬಂದ್ ಆಗಿತ್ತು.ಭಾನುವಾರ ನಗರದ ಕೆಎಸ್ಆರ್ಟಿಸಿ ಬಸ್ನಿಲ್ದಾಣದಲ್ಲಿ ಕೆಲವೇ ಬಸ್ಗಳು ಸಂಚಾರ ನಡೆಸಿದ್ದು,ಬಹುತೇಕ ಬಸ್ಗಳು ಡಿಪೋಗಳಿಂದ ಹೊರಬಂದಿಲ್ಲ.
ಗ್ರಾಮೀಣ ಪ್ರದೇಶವೂ ಸ್ತಬ್ಧ: ಚಿಕ್ಕಬಳ್ಳಾಪುರ ನಗರದಪ್ರಮುಖ ರಸ್ತೆಗಳು ಖಾಲಿ ಆಗಿದ್ದು, ಜನಸಂಚಾರವಾಹನಗಳ ಸಂಚಾರ ಇಲ್ಲದೇ ರಸ್ತೆಗಳು ಬಿಕೋಎನ್ನುತ್ತಿವೆ. ಭಾನುವಾರ ಬೆಳಗ್ಗೆ 6 ರಿಂದ 10ರವರೆಗೆಅಗತ್ಯ ವಸ್ತುಗಳ ಅಂಗಡಿ ಮುಂಗಟ್ಟುಗಳುತೆರೆದುಕೊಂಡು ವ್ಯಾಪಾರ ವಹಿವಾಟು ನಡೆಸಿದವು.ಇನ್ನು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲೂಜನಸಂಚಾರ, ವಾಹನ ಸಂಚಾರ ಸ್ತಬ್ಧಗೊಂಡಿತ್ತು.
ಆಸ್ಪತ್ರೆ, ಮೆಡಿಕಲ್ ಕಾರ್ಯನಿರ್ವಹಿಸಿದವು. ನಗರಹಾಗೂ ಪಟ್ಟಣ ಪ್ರದೇಶಗಳಲ್ಲಿ ಸುಮ್ಮನೆಓಡಾಡುವರಿಗೆ ಪೊಲೀಸರು ಬಸ್ಕಿ ಹೊಡೆಸಿದರು.ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಜ್ಯ ನಗರಿಚಿಂತಾಮಣಿ, ರೇಷ್ಮೆ ನಗರ ಶಿಡ್ಲಘಟ್ಟ, ಗೌರಿಬಿದನೂರು,ಬಾಗೇಪಲ್ಲಿ, ಗುಡಿಬಂಡೆ ತಾಲೂಕಿನಲ್ಲಿ ವಾರಾಂತ್ಯದಕರ್ಫ್ಯೂಗೆ ಉತ್ತಮ ಸ್ಪಂದನೆ ಸಿಕ್ಕಿದೆ.
ನಾಗರಿಕರು ಕಷ್ಟದನಡುವೆಯೂ ಕೊರೊನಾ ಸೋಂಕು ನಿಯಂತ್ರಿಸಲುಸರ್ಕಾರದ ನಿರ್ಧಾರಕ್ಕೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಾರಿಗೆ ಬಸ್ ಸಂಚಾರ ಇದ್ದರೂಪ್ರಯಾಣಿಕರು ಸಂಚರಿಸಲು ಹಿಂದೇಟು ಹಾಕಿದ್ದರಿಂದಬಸ್ ಸಂಚಾರ ಕಡಿಮೆ ಆಗಿತ್ತು.
ಎಪಿಎಂಸಿ ಮಾರುಕಟ್ಟೆ ಬಂದ್: ಕೊರೊನಾಸೋಂಕು ನಿಯಂತ್ರಿಸಲು ಸರ್ಕಾರ ವಾರಾಂತ್ಯದಕರ್ಫ್ಯೂ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯಮಾರುಕಟ್ಟೆ ಪ್ರಾಂಗಣ, ಉಪಮಾರುಕಟ್ಟೆ ಪ್ರಾಂಗಣದ(ಕೆ.ವಿ.ಕ್ಯಾಂಪಸ್ ಹತ್ತಿರದ ಜಾಗಕ್ಕೆ ಸ್ಥಳಾಂತರಿಸಿದಹೂವಿನ ಮಾರುಕಟ್ಟೆ) ಮಾರುಕಟ್ಟೆಗಳಿಗೆ ರಜೆಘೋಷಿಸಿದ್ದರಿಂದ ಭಾನುವಾರದಂದು ಸಹಯಾವುದೇ ವ್ಯಾಪಾರ ವಹಿವಾಟು ನಡೆದಿಲ್ಲ ಎಂದುಎಪಿಎಂಸಿ ಕಾರ್ಯದರ್ಶಿ ಫೆ„ಸಲ್ ಅಹಮದ್ ಹಕೀಂತಿಳಿಸಿದರು.
61 ವಾಹನ ವಶ: ಚಿಕ್ಕಬಳ್ಳಾಪುರ ಜಿಲ್ಲಾದ್ಯಂತವಾರಾಂತ್ಯದ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆವ್ಯಕ್ತವಾಗಿದ್ದರಲ್ಲದೆ, ಚಿಕ್ಕಬಳ್ಳಾಪುರ-ಶಿಡ್ಲಘಟ್ಟಮಾರ್ಗದ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ವಾಹನಸಂಚಾರ ಇಲ್ಲದೇ ಬಿಕೋ ಎನ್ನುತ್ತಿತ್ತು. ಸೋಂಕುನಿಯಂತ್ರಿಸಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿಬೆಂಬಲ ವ್ಯಕ್ತಪಡಿಸಿದ್ದಾರೆ. ವಾರಾಂತ್ಯದ ಕರ್ಫ್ಯೂಉಲಂಘಿಸಿ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರಸಂಚರಿಸಿದ 61 ವಾಹನ ವಶಪಡಿಸಿಕೊಳ್ಳಲಾಗಿದೆಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ತಿಳಿಸಿದ್ದಾರೆ.
ದಂಡ: ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆವ್ಯಾಪಾರ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದರಿಂದಕೆಲವರು ಮಹಾವೀರ್ ಜಯಂತಿ ಇರುವುದನ್ನುಲೆಕ್ಕಿಸದೆ ಮಾಂಸದ ಅಂಗಡಿಗಳನ್ನು ತೆರೆದು ಮಾರಾಟಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ಅರಿತಪೊಲೀಸರು ಕೂಡಲೇ ಕಾರ್ಯಪ್ರವೃತರಾಗಿಅಂಗಡಿಗಳನ್ನು ಮುಚ್ಚಿದ್ದರಲ್ಲದೆ ಅಂಗಡಿ ಮಾಲಿಕರಿಗೆದಂಡ ವಿಧಿ ಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ