40 ಟನ್‌ ದ್ರಾಕ್ಷಿ ಖರೀದಿಸಿದ ಸುರೇಶ್‌

ಚೌಡರೆಡ್ಡಿ ತೋಟದಿಂದ ಖರೀದಿಸಿದ ಸಂಸದರು; ರಾಜ್ಯ ಸರ್ಕಾರ ವಿರುದ್ಧ ವಾಗ್ಧಾಳಿ

Team Udayavani, May 2, 2020, 2:14 PM IST

40 ಟನ್‌ ದ್ರಾಕ್ಷಿ ಖರೀದಿಸಿದ ಸುರೇಶ್‌

ಚಿಕ್ಕಬಳ್ಳಾಪುರ: ಇತ್ತೀಚೆಗೆ ಆಲಿಕಲ್ಲು ಸಮೇತ ಬಿದ್ದ ಬಿರುಗಾಳಿ ಮಳೆಗೆ ಅಪಾರ ಪ್ರಮಾಣದ ದ್ರಾಕ್ಷಿ ನೆಲಕಚ್ಚಿದ್ದರ ಜೊತೆಗೆ ಲಾಕ್‌ಡೌನ್‌ ಪರಿಣಾಮ ಮಾರುಕಟ್ಟೆ ಇಲ್ಲದೇ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್‌ ಕೈ ಹಿಡಿದಿದ್ದು, ತಾಲೂಕಿನ ಹರಿಸ್ಥಳದ ರೈತರಿಂದ ಟನ್‌ಗಟ್ಟಲೇ ದ್ರಾಕ್ಷಿ ಖರೀದಿ ಮಾಡಿದರು. ಕೊರೊನಾ ಹರಡುವುದನ್ನು ತಪ್ಪಿಸಲು ಲಾಕ್‌ಡೌನ್‌ ಜಾರಿಯಲ್ಲಿದ್ದು, ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ ಮಾರುಕಟ್ಟೆ ಇಲ್ಲದೇ ಬೆಳೆದ ಅಪಾರ ಪ್ರಮಾಣದ ದ್ರಾಕ್ಷಿ ತಿಪ್ಪೆಗೆ ಸುರಿಯುವಂತಾಗಿದೆ. ಇದನ್ನರಿತ ಸಂಸದ ಸುರೇಶ್‌, ಹರಿಸ್ಥಳದ ಚೌಡರೆಡ್ಡಿ ಎಂಬುವರು 5 ಎಕರೆಯಲ್ಲಿ ಬೆಳೆದಿದ್ದ ಸುಮಾರು 40 ಟನ್‌ ದ್ರಾಕ್ಷಿಯನ್ನು ಖರೀದಿ ಮಾಡಿದರು.

ಸರ್ಕಾರದಲ್ಲಿ ಗೊಂದಲ: ಈ ವೇಳೆ ಮಾತನಾಡಿದ ಸಂಸದ ಸುರೇಶ್‌, ಕೋವಿಡ್‌ -19 ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ. ಅಧಿಕಾರಿ ಮಂತ್ರಿಗಳಲ್ಲೇ ಗೊಂದಲ ಇದೆ. ಸರ್ಕಾರಕ್ಕೆ ಅರ್ಜೆಂಟಾಗಿ ಖಜಾನೆಗೆ ದುಡ್ಡು ಬರಬೇಕಿದೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡುವಂತೆ ಪ್ರಧಾನಿಗೆ ಸರ್ಕಾರವೇ ಪತ್ರ ಬರೆದಿದೆ. ಆದ್ರೆ ಪಿಎಂ ಎರಡು ಬಾರಿ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ ಎಂದರು.

ಸರ್ಕಾರ ರೈತರಿಗೆ, ಸಾರ್ವಜನಿಕರಿಗೆ ಆತ್ಮಸ್ಥೈರ್ಯ ಮೂಡಿಸಿಲ್ಲ. ಬೆಳೆಗಳನ್ನು ಸರ್ಕಾರವೇ ಖರೀದಿ ಮಾಡಿ ಗ್ರಾಹಕರಿಗೆ ಬಡವರಿಗೆ, ನಿರ್ಗತಿಕರಿಗೆ ಹಂಚಬಹುದಿತ್ತು. ಆದರೆ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ವಾಗ್ಧಾಳಿ ನಡೆಸಿದರು. ದ್ರಾಕ್ಷಿ, ಹೂವು, ಹಣ್ಣು, ತರಕಾರಿ ಬೆಳೆಯುವ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿಂದ ನಾವು ರೈತರ ತೋಟಗಳಿಗೆ ತೆರಳಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ವಿತರಿಸುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ, ಮುಖಂಡರಾದ ನಂದಿ ಅಂಜಿನಪ್ಪ, ಜರಾಮರೆಡ್ಡಿ, ಕೆ.ವಿ.ನವೀನ್‌ ಕುಮಾರ್‌, ಅಡ್ಡಗಲ್‌ ಶ್ರೀಧರ್‌, ಜಿಪಂ ಮಾಜಿ ಅಧ್ಯಕ್ಷ ಮುನೇಗೌಡ, ಕುಂದಲಗುರ್ಕಿ ಮುನೀಂದ್ರ, ಪಟ್ರೇನಹಳ್ಳಿ ಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.

ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್‌ ಕೊಡಲು ಸಾಧ್ಯವಾಗಿಲ್ಲ. ಆದರೆ ಹೊರಗಡೆ ಬಂದ್ರೆ ದಂಡ ಹಾಕ್ತೀವಿ ಅಂತಾರೆ. ಜನ ಎಲ್ಲಿಂ ದ ದುಡ್ಡು ತರಬೇಕು ದಂಡ ಕಟ್ಟೋಕೆ. ಕೋವಿಡ್‌ 19 ವಿಚಾರದಲ್ಲಿ ಅಕ್ಕಿ ಕೊಟ್ಟಿದ್ದು ಬಿಟ್ಟರೆ ಸರ್ಕಾರ ಜನರಿಗೆ ಬೇರೇನೂ ಮಾಡಿಲ್ಲ .
ಡಿ.ಕೆ.ಸುರೇಶ್‌, ಸಂಸದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.