ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ
Team Udayavani, Jan 25, 2022, 8:25 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕ್ಲಾವಿಕಲ್ ಬೋನಿನ ಶಸ್ತ್ರಚಿಕಿತ್ಸೆಗಾಗಿ ಏಳು ಸಾವಿರ ರೂಗಳನ್ನು ಲಂಚ ಸ್ವೀಕರಿಸುತ್ತಿದ್ದಾಗ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ. ಕೆ. ಸುದರ್ಶನ್ ಅವರನ್ನು ಏಳು ಸಾವಿರ ರೂಗಳ ಲಂಚ ಸ್ವೀಕರಿಸುತ್ತಿದ್ದ ಬಳಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಗೇಪಲ್ಲಿ ತಾಲೂಕಿನ ದೊಡ್ಡ ಕಾರಿನಲ್ಲಿ ಗ್ರಾಮದ ನಿವಾಸಿಯೊಬ್ಬರು ತಮ್ಮ ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಬಾಗೇಪಲ್ಲಿ ತಾಲೂಕಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಶಸ್ತ್ರಚಿಕಿತ್ಸೆ ನಡೆಸಲು ಆಸ್ಪತ್ರೆಯ ಸರ್ಜನ್ ಡಾ. ಕೆ.ಸುದರ್ಶನ್ ಅವರು ಶಸ್ತ್ರಚಿಕಿತ್ಸೆಗಾಗಿ 10000 ಬೇಡಿಕೆಯನ್ನಿಟ್ಟು ಮುಂಗಡವಾಗಿ ಮೂರು ಸಾವಿರ ರೂಗಳನ್ನು ಪಡೆದುಕೊಂಡಿದ್ದರು.
ಈ ಸಂಬಂಧ ದೂರು ದಾಖಲಿಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಂ ಪ್ರವೀಣ್ ಅವರ ನೇತೃತ್ವದ ತಂಡ ಟ್ರ್ಯಾಪ್ ಕಾರ್ಯಚರಣೆ ನಡೆಸಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಸರ್ಜನ್ ಡಾ.ಕೆ. ಸುದರ್ಶನ್ ಅವರನ್ನು ಏಳು ಸಾವಿರ ರೂಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್