ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನ 


Team Udayavani, May 20, 2023, 3:55 PM IST

ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನ 

ಚಿಕ್ಕಬಳ್ಳಾಪುರ: ಪರಿಸರ ಸಂರಕ್ಷಣೆ ಪ್ರಮುಖ ಗುರಿಯೊಂದಿಗೆ ಕೇಂದ್ರ ಸರ್ಕಾರವು ಸ್ವಚ್ಛ ಭಾರತ್‌ ಮಿಷನ್‌ 2.0 ಅಡಿಯಲ್ಲಿ ನನ್ನ ಜೀವನ, ನನ್ನ ಸ್ವಚ್ಛ ನಗರ ಎಂಬ ಅಭಿಯಾನವನ್ನು ಮೇ 25 ರಿಂದ ಜೂ.5 ವರೆಗೂ ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ಮುಂದಾಗಿದೆ.

ಸಾರ್ವಜನಿಕರಲ್ಲಿ ಒಣ ತ್ಯಾಜ್ಯವನ್ನು ಕಡಿಮೆಗೊಳಿಸುವುದು, ಮರು ಬಳಕೆ ಹಾಗೂ ಪುನರ್‌ ಬಳಕೆ ಮಾಡುವುದನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲೆಯ ಪ್ರತಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡಿಮೆಗೊಳಿಸುವುದು, ಮರು ಬಳಕೆ, ಪುನರ್‌ ಕೇಂದ್ರಗಳನ್ನು ತೆರೆದು ಸಾರ್ವಜನಿಕರಲ್ಲಿ ತ್ಯಾಜ್ಯದ ಬಗ್ಗೆ ಅರಿವು ಮೂಡಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶಾ ಮುಂದಾಗಿದೆ.

ಎಷ್ಟು ಕೇಂದ್ರಗಳುತೆರೆಯಬೇಕು: ನವೀಕರಿಸಿ ಮರು ಬಳಸ ಬಹುದಾ ದತಂಹ ವಸ್ತುಗಳ ಉತ್ಪಾದನೆಯನ್ನು ಕಡಿಮೆಗೊಳಿಸಲು ಹಾಗೂ ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿ ಕೊಳ್ಳುವ ಮೂಲಕ ಪರಿಸರ ಸಂರಕ್ಷಿವುದು ಲೈಪ್‌ ಮಿಷನ್‌ ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ಪ್ರತಿ ನಗರಸಭೆ ವ್ಯಾಪ್ತಿಯಲ್ಲಿ 5 ರಿಂದ 7 ಕೇಂದ್ರಗಳು ಹಾಗೂ ಪುರಸಭೆ ವ್ಯಾಪ್ತಿಯಲ್ಲಿ 2 ರಿಂದ 3 ಕೇಂದ್ರಗಳು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ 1 ಕೇಂದ್ರವನ್ನು ತೆರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರಗಳ ಮೂಲಕ ಸಂಗ್ರಹವಾಗುವ ತಾಜ್ಯ ವಸ್ತುಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ವಿಶೇಷವಾಗಿ ಹಳೆ ಪುಸ್ತಕ, ದಿನಪತ್ರಗಳನ್ನು ಗ್ರಂಥಾಲಯಕ್ಕೆ ಇ ತ್ಯಾಜ್ಯವನ್ನು ಎಲೆಕ್ಟ್ರಾನಿಕ್‌ ಏಜೆನ್ಸಿಗೆ, ಮಕ್ಕಳ ಆಟಿಕೆಗಳನ್ನು ಶಿಶು ಪಾಲನಾ ಮಂದಿರಗಳಿಗೆ ನೀಡುವಂತೆ ಸೂಚಿಸಲಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಎಲ್ಲೆಲ್ಲೆ ಕೇಂದ್ರ ಸ್ಥಾಪನೆ?: ಚಿಕ್ಕಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ನಗರಸಭಾ ಕಾರ್ಯಾಲಯ ಆವರಣ, ಗಂಗಮ್ಮ ಗುಡಿ ಬೀದಿ (ವಿಶ್ವಕರ್ಮ ಜ್ಯುವೆಲರ್‌ ಮುಂಭಾಗ) ವಾಪಸಂದ್ರ ರೇಷ್ಮೆ ಮಾರುಕಟ್ಟೆ ರಸ್ತೆ, ದರ್ಗಾ ಮೊಹ ಲ್ಲಾ ಹತ್ತಿರ, ಹಳೇ ಗೋಕುಲ್‌ ಸ್ಕೂಲ್‌ ಹತ್ತಿರ, 12ನೇ ವಾರ್ಡ್‌ ಕಂದಕ, ಸಂತೆ ಮಾರುಕಟ್ಟೆ ಮುಂಭಾಗದಲ್ಲಿ ಕೇಂದ್ರಗಳನ್ನು ಮೇ 25ರಿಂದ ಜೂನ್‌ 05 ರವರೆಗೆ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರೆಯಲಾಗಿರುತ್ತದೆ. ಮಾಹಿತಿಗೆ ನಗರಸಭೆ ನೋಡಲ್‌ ಅಧಿಕಾರಿ ವರ ಮೊಬೈಲ್‌  ಸಂಖ್ಯೆ:9972355666 ಗೆ ಸಂಪರ್ಕಿಸಬಹುದೆಂದು ನಗರಸಭೆ ಪೌರಾಯುಕ್ತರಾ ಪಂಪಶ್ರೀ ತಿಳಿಸಿದ್ದಾರೆ. ‌

ಕೇಂದ್ರಗಳಿಗೆ ನೀಡಬೇಕಾದ ತ್ಯಾಜ್ಯ ವಿವರ: ಮಕ್ಕಳ ಆಟಿಕೆ ವಸ್ತುಗಳು, ಪ್ರತಿಕೆ, ಮಾಸ ಪತ್ರಿಕೆಗಳು, ಹಳೆಯ ಪುಸ್ತಕ ಗಳು-ಸ್ಟೇಷನರಿ ವಸ್ತುಗಳು (ಉದಾ: ಪರಿಸರ ಸ್ನೇಹಿ ಪೆನ್ಸಿಲ್, ಮರು ಬಳಕೆಯ ಪುಸ್ತಕ), ಬಟ್ಟೆ-ಹಳೆಯ ಜೀನ್ಸ್‌, ಸಮವಸ್ತ್ರ ಮತ್ತು ಸೀರೆಗಳು) ಮರುಬಳಕೆ ಮಾಡಬಹುದಾದ ಬಟ್ಟೆಗಳು- ಕಪ್ಪು ಚಿನ್ನ (ಸಾವಯವ ಗೊಬ್ಬರ), ಪ್ಲಾಸ್ಟಿಕ್‌ ಚೀಲಗಳು, ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳು- ಪ್ರತಿ 250 ಗ್ರಾಂ ಪ್ಲಾಸ್ಟಿಕ್‌ ಚೀಲಗಳಿಗೆ 1 ಕೆ.ಜಿ. ಸಾಮರ್ಥ್ಯದ ಬಟ್ಟೆಯ ಚೀಲ, ಎಲೆಕ್ಟ್ರಾನಿಕ್‌ ವಸ್ತುಗಳು-ಡಿಜಿಟಲ್‌ ಪ್ರಮಾಣಪತ್ರ ನೀಡಲಾಗುವುದು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.