ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್‌, ಸಿಬ್ಬಂದಿ ಡಾನ್ಸ್‌

ಮಹತ್ವಾಕಾಂಕ್ಷೆ ಕಾರ್ಯಕ್ರಮದ ಉದ್ದೇಶ ಮರೆತ ಅಧಿಕಾರಿಗಳು , ವಿಡಿಯೋ ವೈರಲ್‌, ಸಾರ್ವಜನಿಕರಿಗೆ ಪುಕ್ಕಟೆ ಮನರಂಜನೆ

Team Udayavani, Feb 22, 2021, 2:43 PM IST

ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್‌, ಸಿಬ್ಬಂದಿ ಡಾನ್ಸ್‌

ಬಂಗಾರಪೇಟೆ: ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ರಾಮವಾಸ್ತವ್ಯ ನೆಪದಲ್ಲಿ ತಾಲೂಕು ದಂಡಾಧಿ ಕಾರಿಗಳು ಆಗಿರುವ ತಹಶೀಲ್ದಾರ್‌ ಹಾಗೂ ಇತರೆ ಅಧಿಕಾರಿಗಳು ಕುಣಿದು ಕುಪ್ಪಳಿಸಿದಪ್ರಸಂಗ ತಾಲೂಕಿನ ಕಾಮ ಸಮುದ್ರ ಹೋಬಳಿಯ ನರಿನತ್ತ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸರ್ಕಾರದ ಮುಖ್ಯ ಯೋಜನೆಯಾಗಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ದೇಶವನ್ನೇ ಮರೆತು ಮಹಿಳಾ ಅಧಿಕಾರಿ ಸಿಬ್ಬಂದಿ ಯೊಂದಿಗೆ ತಹಶೀಲ್ದಾರ್‌ ಎಂ.ದಯಾನಂದ್‌ ಚಲನಚಿತ್ರಗಳ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಗ್ರಾಮ ವಾಸ್ತವ್ಯಕಾರ್ಯಕ್ರಮಕ್ಕೆ ಸರ್ಕಾರ ಹಣ ವ್ಯಯಿಸುವುದು ಒಂದೆಡೆಯಾದರೆ, ಅಧಿಕಾರಿಗಳು ಕಾರ್ಯಕ್ರಮದ ಉದ್ದೇಶಗಳನ್ನು ತಿರುಚಿದ್ದಾರೆ.

ಸಾರ್ವಜನಿಕರಿಗೆ ಮನರಂಜನೆ: ಮುಖ್ಯವಾಗಿ ತಾಲೂಕು ಆಡಳಿತವು ಮೂಲ ಸೌಲಭ್ಯಗಳ ಸಮಸ್ಯೆಗಳು, ಪಿಂಚಣಿ ಸೌಲಭ್ಯಗಳು, ಕಂದಾಯ ಇಲಾಖೆಯ ಖಾತೆ ಸಮಸ್ಯೆಗಳು, ಕುಡಿಯುವ ನೀರಿನ ಸಮಸ್ಯೆ, ರೇಷನ್‌ ಕಾರ್ಡ್‌, ಚುನಾವಣಾ ಕಾರ್ಡ್‌, ಆಧಾರ್‌ ಕಾರ್ಡ್‌ ಸೇರಿದಂತೆ ಎಲ್ಲಾ ತರಹದ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವುದರ ಜೊತೆಗೆ ಸರ್ಕಾರದ ಪ್ರಮುಖಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸಿ ಅರಿವು ಮೂಡಿಸುವುದನ್ನು ಬಿಟ್ಟು ಕುಣಿದು ಕುಪ್ಪಳಿಸಿಸಾರ್ವಜನಿಕರಿಗೆ ಪುಕ್ಕಟೆ ಮನರಂಜನೆನೀಡಿರುವುದು ಇಡೀ ಕಂದಾಯ ಇಲಾಖೆಯ ವಲಯದಲ್ಲಿ ಬೇಸರ ತಂದಿದೆ.

ತಹಶೀಲ್ದಾರ್‌ ಎಂ.ದಯಾನಂದ್‌ ಹಾಗೂ ಸಿಬ್ಬಂದಿಗಳಿಂದ ಡ್ಯಾನ್ಸ್‌ ಮಾಡಿದ್ದನ್ನು ಕಂಡು ಗ್ರಾಮಸ್ಥರು ಕೆಲಕಾಲ ಮೂಕ ಪ್ರೇಕ್ಷಕರಾಗಿನೋಡುತ್ತಿದ್ದರು. ತಹಶೀಲ್ದಾರ್‌ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಸಹಾಯಕನಿರ್ದೇಶಕ ಮುನಿರಾಜು ಸೇರಿದಂತೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರಾದ ದಿವ್ಯಾ ಆರಾಧನ, ಅಂಜಲಿ, ಲಾವಣ್ಯ, ಶ್ವೇತಾ ಹಾಗೂ ಚುನಾವಣಾಶಾಖೆಯ ತೇಜಸ್‌ ಎಂಬುವವರು ಕುಣಿದು ಕುಪ್ಪಳಿಸಿದ್ದಾರೆ.

ಗ್ರಾಮಸ್ಥರು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದರಿಂದ ವೈರಲ್‌ ಆಗಿರುವುದರಿಂದ ಎಲ್ಲಾ ಕಡೆಯಿಂದಲೂ ಆಕ್ಷೇಪಣೆ ವ್ಯಕ್ತವಾಗುತ್ತಿವೆ.

ಸಮಗ್ರ ವರದಿ ನೀಡುವಂತೆ ಸೂಚನೆ :  ಬಂಗಾರಪೇಟೆತಾಲೂಕಿನತಹಶೀಲ್ದಾರ್‌ ಎಂ. ದಯಾನಂದ್‌ ಹಾಗೂ ಇತರೆ ಅಧಿಕಾರಿ ಸಿಬ್ಬಂದಿ ಶನಿವಾರ ಗ್ರಾಮವಾಸ್ತವ್ಯಕ್ಕೆ ಆಯ್ಕೆಯಾಗಿದ್ದ ಗಡಿಭಾಗದ ನರಿನತ್ತ ಗ್ರಾಮದಲ್ಲಿ ಕುಣಿದು ಕುಪ್ಪಳಿಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೀಕ್ಷಿಸಿದ್ದೇನೆ. ಈ ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಕೋಲಾರ ಉಪವಿಭಾಗಾಧಿಕಾರಿ ವಿ.ಸೋಮಶೇಖರ್‌ ಅವರಿಗೆ ಸೂಚಿಸಲಾಗಿದ್ದು, ಗ್ರಾಮವಾಸ್ತವ್ಯ ಕಾರ್ಯಕ್ರಮದ ವಿರುದ್ದ ಯಾರೇ ನಡೆದು ಕೊಂಡರೂ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.