23ಕ್ಕೆ ತಾಲೂಕು ಸಾಹಿತ್ಯ ಸಮ್ಮೇಳನ
Team Udayavani, Nov 8, 2019, 3:30 PM IST
ಬಾಗೇಪಲ್ಲಿ: ತಾಲೂಕು ಕಸಾಪ ವತಿಯಿಂದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನ.23 ರಂದು ಪಟ್ಟಣದ ಬಾಲಕಿಯರ ಶಾಲಾ ಸಂಕೀರ್ಣ ಆವರಣದಲ್ಲಿ ನಡೆಸಲು ಸಾಹಿತ್ಯ ಪರಿಷತ್ನ ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾ ಆವರಣದ ಕನ್ನಡ ಭವನದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಎ.ಜಿ.ಸುಧಾಕರ್ ಅಧ್ಯಕ್ಷತೆಯಲ್ಲಿ ತುರ್ತುಸಭೆ ನಡೆಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹಮದ್ ಮಾತನಾಡಿ, ಆಂಧ್ರದ ಗಡಿಯ ತಾಲೂಕಿನಲ್ಲಿ ಕನ್ನಡ ಭಾಷೆ, ನಾಡು, ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಕನ್ನಡ ಸಾಹಿತ್ಯ ಪರಿಚಯಿಸುವ ಕೆಲಸ ಆಗಬೇಕು. ಇಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಸಾಹಿತ್ಯ, ಕಲೆ, ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕೆಂದರು.
ಸಾಹಿತ್ಯ ಪರಿಷತ್ನ ತಾಲೂಕು ಪ್ರ. ಕಾರ್ಯದರ್ಶಿ ಡಿ.ಎನ್.ಕೃಷ್ಣಾರೆಡ್ಡಿ, ತಾಲೂಕು ಕಸಾಪ ಅಧ್ಯಕ್ಷ ಎ.ಜಿ. ಸುಧಾಕರ್ ಮಾತನಾಡಿದರು. ಸಭೆಯಲ್ಲಿ ನ್ಯಾಷನಲ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಮಯ್ಯ, ಜಿಲ್ಲಾ ರಾಜ್ಯೋ ತ್ಸವ ಪ್ರಶಸ್ತಿ ಪುರಸ್ಕೃತ ವಲೀಭಾಷ, ತಾಲೂಕು ಕಸಾಪ ಸಂಚಾಲಕ ಶ್ರೀನಿವಾಸ್, ಕಾರ್ಯದರ್ಶಿ ಡಾ.ಚಿನ್ನ ಕೈವಾರಮಯ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ಮಣಿಕಂಠ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೈಯದ್ ಸಿದ್ದೀಕ್, ಪತ್ರಿಕಾ ಕಾರ್ಯದರ್ಶಿ, ಕನ್ನಡ ಕಲಾ ಸಂಘದ ಅಧ್ಯಕ್ಷ ಪಿ.ಎಸ್. ರಾಜೇಶ್, ಸಾಹಿತಿಗಳಾದ ಶ್ರೀನಿವಾಸ ತಂತ್ರಿ, ಚಂದ್ರಶೇಖರ್, ಉಪನ್ಯಾಸಕ ಉಮೇಶ್ ಭಾವಿಕಟ್ಟಿ, ಮುಖ್ಯಶಿಕ್ಷಕ ಮಂಜುನಾಥ್, ಮಹಿಳಾ ಪ್ರತಿನಿಧಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ