ಟ್ಯಾಂಕರ್ ಉರುಳಿ ಸಾವಿರಾರು ಲೀ.ಅಡುಗೆ ಎಣ್ಣೆ ರಸ್ತೆಪಾಲು
Team Udayavani, Jan 30, 2021, 1:44 PM IST
ಚಿಕ್ಕಬಳ್ಳಾಪುರ: ಅಡುಗೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್, ಆಟೋ ಮೇಲೆ ಉರುಳಿಬಿದ್ದು ಸಾವಿರಾರು ಲೀಟರ್ ಎಣ್ಣೆ ರಸ್ತೆಪಾಲಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದವರು ಪವಾಡ ಸದೃಢ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ- ಗೌರಿಬಿದನೂರು ಮಾರ್ಗದಲ್ಲಿ ಸಂಭವಿಸಿದೆ.
ಟ್ಯಾಂಕರ್ ಉರುಳಿದ್ದರಿಂದ ಆಟೋ ಸಂ ಪೂರ್ಣ ವಾಗಿ ನಜ್ಜುಗಜ್ಜಾಗಿದ್ದು, ಸುಮಾರು 12 ಸಾವಿರ ಲೀಟರ್ ಎಣ್ಣೆ ರಸ್ತೆ ಪಾಲಾಗಿದೆಯೆಂದು ಅಂದಾಜಿಸಲಾಗಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರು ಕಡೆ ಸಾಗುತ್ತಿದ್ದಾಗ ಆಟೋವೊಂದು ಟ್ಯಾಂಕರ್ನ್ನುಹಿಂದಿಕ್ಕಲು ಮುನ್ನುಗ್ಗಿದಾಗ ಟ್ಯಾಂಕರ್ ಸಹವೇಗವಾಗಿ ತಿರುಗಿ ನಿಯಂತ್ರಣ ತಪ್ಪಿ ಆಟೋ ಮೇಲೆ ಉರುಳಿದೆ.
ಇದೇ ವೇಳೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಐವರು ಮತ್ತು ಟ್ಯಾಂಕರ್ನಲ್ಲಿದ್ದ ಇಬ್ಬರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತ ದಿಂದಾಗಿ ಚಿಕ್ಕಬಳ್ಳಾಪುರ-ಗೌರಿಬಿದ ನೂರುಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡು ವಂತಾಯಿತು.
ಇದನ್ನೂ ಓದಿ:ಕಬ್ಬಿನ ಆಸೆಗೆ ಪ್ರಾಣ ಕಳೆದುಕೊಂಡ ಬಾಲಕ
ರಸ್ತೆಯಲ್ಲಿ ಎಣ್ಣೆ ಬಿದ್ದಿದ್ದರಿಂದ ಕಣಿವೆ ಪ್ರದೇಶದಲ್ಲಿ ವಾಹನ ಚಲಾಯಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರದಿಂದ ಮುಂಬೈಗೆ ತೆರಳುವ ಸರಕು ಸಾಗಾಣಿಕೆ ವಾಹನಗಳು ಇದೇ ಮಾರ್ಗ ಅನುಸರಿಸುತ್ತಾರೆ.
ಆದರೆ ಕಣಿವೆಪ್ರದೇಶದಲ್ಲಿ ತಿರುವುಗಳಲ್ಲಿ ಯಾವ ವಾಹನ ಗಳು ಬರುತ್ತಿವೆ ಎಂದು ಗೊತ್ತಾಗುವುದಿಲ್ಲ ಎನ್ನುತ್ತಾರೆ ವಾಹನ ಸವಾರರು.ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ಮಾರ್ಗದಲ್ಲಿ ವಾಹನಗಳನ್ನು ಸುಲಭವಾಗಿ ಸಂಚರಿಸಲು ಅಧಿಕಾರಿಗಳು ಅನುಕೂಲ ಕಲ್ಪಿಸಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ