ಶಿಕ್ಷಕರ ಪರಿಶ್ರಮದಿಂದ ಉತ್ತಮ ಫಲಿತಾಂಶ
Team Udayavani, Sep 6, 2020, 1:25 PM IST
ಚಿಂತಾಮಣಿ: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲು ಜಿಲ್ಲೆಯ ಶಿಕ್ಷಕರ ಪರಿಶ್ರಮ ಕಾರಣ ಎಂದು ಊಲವಾಡಿ ಗ್ರಾಪಂ ಪಿಡಿಒ ಕೆ.ಆರ್.ಮಂಜುನಾಥ್ ನುಡಿದರು.
ಬೂರಗಮಾಕಲಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ 2019-2020ನೇ ಸಾಲಿನಲ್ಲಿ ಶೇ. 100 ರಷ್ಟು ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ದಿಣಾಚರಣೆ ಅಂಗವಾಗಿಶಾಲಾ ಶಿಕ್ಷಕರಿಗೆ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಿ ಅವರು ಮಾತನಾಡಿದರು. ನಾನು ಈ ಶಾಲೆಯನ್ನು ಅನೇಕ ವರ್ಷಗಳಿಂದ ನೋಡುತ್ತಿದ್ದೇನೆ. ಈ ಬಾರಿ ಶೇ.100 ಫಲಿತಾಂಶ ಪಡೆದಿರುವುದರಿಂದ ಜೊತೆಗೆ ನಾನು ಈ ಭಾಗದಲ್ಲಿ ಪಿಡಿಒ ಆಗಿ ಕೆಲಸ ನಿರ್ವಹಿಸುವ ಸಮಯದಲ್ಲಿ ಅತ್ಯುತ್ತಮ ಸಾಧನೆ ತೋರಿರುವುದು ಸಂತಸ ತಂದಿದೆ ಎಂದರು.
ಇದೇ ರೀತಿ ಮುಂದೆಯೂ ಕೂಡ ಶಿಕ್ಷಕರು ಉತ್ತಮ ಬೋಧನೆ ಮಾಡಿ ಶಾಲೆ ಉತ್ತಮ ಫಲಿತಾಂಶ ದಾಖಲಿಸಲು ನೆರವಾಗಬೇಕು. ಶಾಲೆಗೆ ಪಂಚಾಯತಿ ವತಿಯಿಂದ ಸಿಗಬೇಕಾದ ಮೂಲ ಸೌಲಭ್ಯ ವ್ಯವಸ್ಥೆ ಕಲ್ಪಿಸಿದ್ದು, ಮುಂದೆಯೂ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು. ಊಲವಾಡಿ ಗ್ರಾಪಂ ಆಡಳಿತಾಧಿಕಾರಿ ಹಾಗೂ ಎಪಿಎಂಸಿ ಕಾರ್ಯದರ್ಶಿ ಉಮಾ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಕಾರಣ ಸನ್ಮಾನಿಸುತ್ತಿರುವುದು ಸಂತೋಷವಾಗುತ್ತಿದೆ ಎಂದರು.
ಊಲವಾಡಿ ಗ್ರಾಪಂ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯ ಆರ್.ನಾರಾಯಣರೆಡ್ಡಿ, ಶಿಕ್ಷಕರಾದ ಎಂ.ಎನ್.ಭಾಗ್ಯಲಕ್ಷ್ಮೀ, ಕಾಂಚನ, ಯಶೋಧಮಣಿ, ನವೀನ್ಕುಮಾರ್, ಜಿ. ಲಕ್ಷಿ¾àದೇವಮ್ಮ, ಬಾಷಾಸಾಬ್, ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ್, ಶಿವಾನಂದ್ ಅವರನ್ನು ಸನ್ಮಾನಿಸಿದರು. ಉಪನ್ಯಾಸಕ ಸಂಘದ ಜಿಲ್ಲಾಧ್ಯಕ್ಷ ಮುನಿರೆಡ್ಡಿ, ಗ್ರಾಪಂ ಕಾರ್ಯದರ್ಶಿ ಆರ್.ವೆಂಕಟೇಶ್, ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ