ಕೇಂದ್ರ ಪುರಸ್ಕೃತ ಯೋಜನೆ ಪರಿಶೀಲಿಸಿದ ತಂಡ
ಜಿಲ್ಲೆಯ ಆಯ್ದ10 ಗ್ರಾಪಂಗಳಿಗೆ ಭೇಟಿ , ನರೇಗಾ, ವಸತಿ, ಪಿಎಂಜಿಎಸ್ವೈ, ಎನ್ ಆರ್ಎಲ್ಎಂ ಕಾಮಗಾರಿ ವೀಕ್ಷಣೆ
Team Udayavani, Nov 12, 2020, 8:29 PM IST
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಎನ್ಎಲ್ಎಂ ವಿಜಯವ್ಯಾಸ್ ಮತ್ತು ಸುಹಾಸ್ ಅವರನ್ನು ಒಳಗೊಂಡ ತಂಡದ ಸದಸ್ಯರು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಕುರಿತು ಪರಿಶೀಲಿಸಿದರು.
ಜಿಲ್ಲೆಯ ಶಿಡ್ಲಘಟ್ಟ, ಗೌರಿಬಿದನೂರು ಹಾಗೂ ಬಾಗೇಪಲ್ಲಿ ತಾಲೂಕಿನ ಆಯ್ದ10 ಗ್ರಾಪಂಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆ, ವಸತಿ, ಪಿಎಂಜಿಎಸ್ ವೈ ಹಾಗೂ ಎನ್ಆರ್ಎಲ್ಎಂ ಯೋಜನೆಗಳ ಕಾಮಗಾರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೆಚ್ಚುಗೆ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಇ-ತಿಮ್ಮಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಮಾದರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಮಕ್ಕಳ ಕಲಿಕಾ ವ್ಯವಸ್ಥೆಯನ್ನು ಕಂಡು ಹರ್ಷ ವ್ಯಕ್ತಪಡಿಸಿ ಮಕ್ಕಳು ಆಟದೊಂದಿಗೆ ಪಾಠ ಕಲಿಯುವ ವಿಧಾನ ನೋಡಿ ಇದೇ ಮಾದರಿಯಲ್ಲಿ ಬೇರೆ ಕಡೆ ಕಲಿಕಾ ವ್ಯವಸ್ಥೆ ಮಾಡಬೇಕೆಂದರು.
ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಮಜಿ ನರೇಗಾ ಯೋಜನೆ ಯಡಿನಿರ್ಮಿಸಿರುವ ಗ್ರಾಮೀಣಾ ಉದ್ಯಾನ ವೀಕ್ಷಿಸಿ ವಿಶ್ರಾಂತಿ ಪಡೆಯುವ ಮೂಲಕ ಸಂತಸ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿದರು. ತದನಂತರ ಗೌರಿಬಿದನೂರು ತಾಲೂಕಿನ ರಮಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಕರ್ನಾಟಕ ನಕ್ಷೆ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಗೋಕುಂಟೆ ಕಾಮಗಾರಿ ವೀಕ್ಷಣೆ ಮಾಡಿ ಪ್ರಶಂಶಿಸಿದರು.
ಶಿಡ್ಲಘಟ್ಟ ಪಂಚಾಯ್ತಿ ಇಒ ಶಿವಕುಮಾರ್, ಮಜಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಇ.ತಿಮ್ಮಸಂದ್ರ ಗ್ರಾಪಂ ಪಿಡಿಒ ತನ್ವೀರ್ ಮತ್ತಿತರರು ಇದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಜಿನರೇಗಾ ಯೋಜನೆಕಾಮಗಾರಿಗಳನ್ನು ವೀಕ್ಷಣೆ ಮಾಡಿದ ಎನ್ ಎಲ್ಎಂ ತಂಡ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು, ಗೊರತುಪಲ್ಲಿ,ಪಾಲ್ಯಾಕ್, ಎಲ್ಲಂಪಲ್ಲಿ, ಗೌರಿಬಿದನೂರು ತಾಲೂಕಿನ ಬಿ.ಬೊಮ್ಮಸಂದ್ರ, ಗೌಡಗೆರೆ, ಹೊಸೂರು, ರಮಾಪುರ ಹಾಗೂ ಶಿಡ್ಲಘಟ್ಟ ತಾಲೂಕಿನ ಇ.ತಿಮ್ಮಸಂದ್ರ ಮತ್ತು ಮೇಲೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧಕಾಮಗಾರಿ ವೀಕ್ಷಣೆ ಮಾಡಿದರು ಬಳಿಕ ಜಿಪಂ ಸಭಾಂಗಣದಲ್ಲಿ ಸಭೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ