ಆರಂಭಕ್ಕೂ ಮೊದಲೇ ಶಾಲೆ ಅಂಗಳಕ್ಕೆ ಪಠ್ಯಪುಸ್ತಕ!


Team Udayavani, May 18, 2023, 4:49 PM IST

ಆರಂಭಕ್ಕೂ ಮೊದಲೇ ಶಾಲೆ ಅಂಗಳಕ್ಕೆ ಪಠ್ಯಪುಸ್ತಕ!

ಚಿಕ್ಕಬಳ್ಳಾಪುರ: ಬೇಸಿಗೆ ರಜೆಗಳು ಕಳೆದು 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಈ ಬಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆ ಆರಂಭಗೊಳ್ಳುವ ಮುನ್ನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಗೆ ಮುಂದಾಗಿದೆ.

ಜಿಲ್ಲಾದ್ಯಂತ ಮೇ 29 ರಂದು ಶಾಲಾ ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ಜಿಲ್ಲೆಯ ಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದ್ದು, ತರಗತಿಗಳು ಆರಂಭಕ್ಕೂ ಮೊದಲೇ ಅಗತ್ಯವಾದ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿದ್ಯಾರ್ಥಿಗಳ ಕೈ ತಲುಪಲಿದೆ.

ಜಿಲ್ಲೆಗೆ ಶೇ.65.13 ರಷ್ಟು ಪಠ್ಯ ಪುಸ್ತಕ ಪೂರೈಕೆ: ಜಿಲ್ಲೆಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ 1 ರಿಂದ 10ನೇ ತರಗತಿ ಓದುವ ವಿದ್ಯಾರ್ಥಿಗಳಿಗೆ ಒಟ್ಟು 10,59,680 ಪಠ್ಯ ಪುಸ್ತಕಗಳು ಅಗತ್ಯವಾಗಿದ್ದು, ಈಗಾಗಲೇ 6,90,142 ಪಠ್ಯ ಪುಸ್ತಕಗಳು ಜಿಲ್ಲೆಗೆ ಪೂರೈಕೆ ಆಗಿ ಶೇ.65.13 ರಷ್ಟು ಪಠ್ಯ ಪುಸ್ತಕಗಳು ಶಾಲೆಗಳಿಗೆ ಪೂರೈಕೆ ಆಗಿವೆ. ಜಿಲ್ಲೆಗೆ ಬೇಕಿರುವ ಒಟ್ಟು 10,59,680 ಲಕ್ಷ ಪಠ್ಯ ಪುಸ್ತಕಗಳ ಪೈಕಿ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ 6,86,003 ಉಚಿತ ಪಠ್ಯ ಪುಸ್ತಕಗಳು ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಮಾರಾಟಕ್ಕಾಗಿ ಒಟ್ಟು 3,46,403 ಪಠ್ಯ ಪುಸ್ತಕಗಳು ಹಾಗೂ ಆರ್‌ಟಿಇ ಮಕ್ಕಳಿಗೆ ಒಟ್ಟು 27,271 ಪಠ್ಯ ಪುಸ್ತಕಗಳು ಜಿಲ್ಲೆಗೆ ಅಗತ್ಯವಾಗಿವೆ.

ಈಗಾಗಲೇ ಜಿಲ್ಲೆಗೆ 7,71,976 ಪಠ್ಯ ಪುಸ್ತಕಗಳು ಜಿಲ್ಲೆಗೆ ಬ್ಲಾಕ್‌ವಾರು ಪೂರೈಕೆ ಆಗಿ ಆ ಪೈಕಿ 6,90,142 ಪಠ್ಯ ಪುಸ್ತಕಗಳು ಶಾಲೆಗಳಿಗೆ ತಲುಪಿವೆ. ಅದರಲ್ಲಿ ಸರ್ಕಾರಿ ಶಾಲೆಗಳಿಗೆ ಇಲ್ಲಿವರೆಗೂ 4,96,958 ಪಠ್ಯಪುಸ್ತಕಗಳು, ಖಾಸಗಿ ಶಾಲೆಗಳಿಗೆ ಮಾರಾಟಕ್ಕಾಗಿ ಒಟ್ಟು 1,76,720 ಪಠ್ಯ ಪುಸ್ತಕಗಳು ಹಾಗೂ ಖಾಸಗಿ ಶಾಲೆಗಳಲ್ಲಿ ಆರ್‌ಟಿಇನಡಿ ದಾಖಲಾಗಿರುವ ಮಕ್ಕಳಿಗೆ ಉಚಿತವಾಗಿ ವಿತರಿಸಲು ಒಟ್ಟು 16,464 ಪಠ್ಯ ಪುಸಕ್ತಗಳು ಪೂರೈಕೆ ಆಗಿವೆ.

ಮೇ 30 ರಿಂದ ಶಾಲೆ ಆರಂಭ: ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಿದ್ದು, ಅದರಂತೆ ಮೇ 29 ರಂದು ಸಿದ್ಧತಾ ಕಾರ್ಯಕ್ರಮದ ಬಳಿಕ ಮೇ 30 ರಂದು ಮಂಗಳವಾರ ಅಧಿಕೃತವಾಗಿ ಶಾಲೆಗಳ ಕಾರ್ಯಾರಂಭ ಮಾಡಲಿವೆ. ಪ್ರತಿ ವರ್ಷ ಶಾಲೆ ಆರಂಭಗೊಂಡರೂ ಸಮರ್ಪಕವಾಗಿ ಪಠ್ಯ ಪುಸ್ತಕ, ಸಮವಸ್ತ್ರ ವಿದ್ಯಾರ್ಥಿಗಳ ಕೈ ತಲುಪದೇ ವಿದ್ಯಾರ್ಥಿ ಪೋಷಕರಲ್ಲಿ ತೀವ್ರ ಟೀಕೆಗೆ ಗುರಿ ಆಗುತ್ತಿತ್ತು. ಆದರೆ ಈ ಬಾರಿ ಶಾಲೆ ಆರಂಭಕ್ಕೂ ಮೊದಲೇ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಶಾಲೆಗಳ ಅಂಗಳ ತಲುಪಿವೆ. ಶಾಲೆಯ ಆರಂಭದ ದಿನ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಉಸ್ತುವಾರಿಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸುವ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆಯಲ್ಲಿವೆ 2,029 ಶಾಲೆಗಳು: ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಸೇರಿ ಒಟ್ಟು 2,029 ಶಾಲೆಗಳು ಇದ್ದು ಆ ಪೈಕಿ ಜಿಲ್ಲಾದ್ಯಂತ ಕಿರಿಯ ಪ್ರಾಥಮಿಕ ಶಾಲೆಗಳು ಸರ್ಕಾರಿ, ಖಾಸಗಿ, ಅನುದಾನ ರಹಿತ, ವಸತಿ ಮತ್ತಿತರ ಒಟ್ಟು 967 ಶಾಲೆಗಳಿವೆ. ಹಿರಿಯ ಪ್ರಾಥಮಿಕ ಶಾಲೆಗಳು ಸರ್ಕಾರಿ, ಖಾಸಗಿ, ಅನುದಾನಿತ, ವಸತಿ ಶಾಲೆಗಳು ಸೇರಿ ಒಟ್ಟು 713 ಶಾಲೆಗಳಿದ್ದರೆ, ಪ್ರೌಢ ಶಾಲೆಗಳ ಪೈಕಿ ಸರ್ಕಾರಿ 111, ಅನುದಾನಿತ 46, ಅನುದಾನ ರಹಿತ 146, ವಸತಿ ಶಾಲೆಗಳು 26 ಸೇರಿ ಒಟ್ಟು 349 ಪ್ರೌಢ ಶಾಲೆಗಳು ಇವೆ. ಒಟ್ಟು ಜಿಲ್ಲೆಯಲ್ಲಿ 2,29 ಶಾಲೆಗಳು ಕಾರ್ಯಹಿರ್ವಹಿಸುತ್ತಿವೆ.

ಜಿಲ್ಲಾದ್ಯಂತ ಮೇ 30ರಿಂದ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಲಿದೆ. ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದುವರೆಗೂ ಜಿಲ್ಲೆಯ ಶಾಲೆಗಳಿಗೆ ಒಟ್ಟಾರೆ ಶೇ.65.13 ರಷ್ಟು ಪಠ್ಯ ಪುಸ್ತಕಗಳು ಹಂಚಿಕೆ ಆಗಿವೆ. ಉಳಿಕೆ ಒಂದೆರೆಡು ದಿನಗಳಲ್ಲಿ ಪೂರೈಕೆ ಆಗಲಿವೆ. ಈ ಬಾರಿ ಸಮವಸ್ತ್ರ ಕೂಡ ಶಾಲೆ ಆರಂಭದ ದಿನವೇ ಮಕ್ಕಳ ಕೈಗೆ ಸಿಗಲಿದೆ. ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ 1.07 ಲಕ್ಷ ಮಕ್ಕಳು ಓದುತ್ತಿದ್ದಾರೆ. – ಕೆ.ಎಂ.ಜಯರಾಮರೆಡ್ಡಿ, ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.