ತಾಟಲಿಂಗುಗೆ ಹೆಚ್ಚಿದ ಬೇಡಿಕೆ


Team Udayavani, Apr 22, 2019, 3:00 AM IST

tatiling

ಚಿಕ್ಕಬಳ್ಳಾಪುರ: ಬೇಸಿಗೆ ಕಾಲದ ಅಪರೂಪದ ಅತಿಥಿಯಾಗಿರುವ ತಾಟಲಿಂಗುಗೆ ಈಗ ಎಲ್ಲಿಲ್ಲದ ಬೇಡಿಕೆ. ಶಾಲಾ, ಕಾಲೇಜು, ಸಾರ್ವಜನಿಕ ಬಸ್‌ ನಿಲ್ದಾಣ, ಚಿತ್ರ ಮಂದಿರ ಹೀಗೆ ನಗರದ ಪ್ರದೇಶದಲ್ಲಿ ಜನನಿಬಿಡ ರಸ್ತೆಗಳಲ್ಲಿ ಎತ್ತ ಕಣ್ಣಾಯಿಸಿ ನೋಡಿದರೂ ಈಗ ತಾಟಲಿಂಗು ಹಣ್ಣುಗಳದ್ದೇ ದರ್ಶನ.

ಬಿಸಿಲಿನ ತಾಪಕ್ಕೆ ತತ್ತರ: ತಮಿಳುನಾಡು ಮೂಲದ ತಾಟಲಿಂಗು ಹಣ್ಣು ಬೇಸಿಗೆ ಬಂದರೆ ಸಾಕು ಬರದ ನಾಡು ಚಿಕ್ಕಬಳ್ಳಾಪುರ ಜಿಲ್ಲೆಗೆ ಖಾಯಂ ಅತಿಥಿ. ಸದ್ಯ ಜಿಲ್ಲೆಯಾದ್ಯಂತ ತಾಟಲಿಂಗು ಹಣ್ಣುಗಳ ಭರ್ಜರಿ ಮಾರಾಟ ನಡೆಯುತ್ತಿದ್ದು, ಬಿಸಿಲಿನ ಪ್ರತಾಪಕ್ಕೆ ತತ್ತರಿಸುತ್ತಿರುವ ನಾಗರಿಕರು, ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಈಗ ತಾಟಲಿಂಗು ಹಣ್ಣುಗಳ ಮೊರೆ ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.

ಕೇರಳ, ತುಳುನಾಡು ರಾಜ್ಯಗಳಲ್ಲಿ ಹೆಚ್ಚಾಗಿ ಬೆಳೆಯುವ ಈ ತಾಟಲಿಂಗು ಹಣ್ಣಿಗೆ ಬಯಲು ಸೀಮೆ ಜಿಲ್ಲೆಗಳಲ್ಲಿ ಹೆಚ್ಚು ಬೇಡಿಕೆ. ಬೇಸಿಗೆಯಲ್ಲಿ ಮಾತ್ರ ಜಿಲ್ಲೆಗೆ ಪ್ರವೇಶ ಮಾಡುವ ಈ ಹಣ್ಣು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ ಬಲು ಅಚ್ಚುಮೆಚ್ಚು. ಸದ್ಯ ಜಿಲ್ಲಾ ಕೇಂದ್ರದ ಜನನಿಬಿಡ ರಸ್ತೆಗಳಲ್ಲಿ, ಜನ ವಸತಿ ಪ್ರದೇಶಗಳಲ್ಲಿ ಹಣ್ಣುಗಳ ಮಾರಾಟ ಭರದಿಂದ ಸಾಗಿದೆ.

ಕೈಗೆಟುಕುವ ಬೆಲೆ: ಬೇಸಿಗೆಯಲ್ಲಿ ತಾಟಲಿಂಗು ಹಣ್ಣುಗಳ ಸೇವಿಸುವರ ಸಂಖ್ಯೆ ಹೆಚ್ಚಾದರೂ ಅದರ ಬೆಲೆ ಮಾತ್ರ ಸಾಮಾನ್ಯರ ಪಾಲಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿದೆ. 10 ರಿಂದ 15 ರೂ.ಗೆ ಸುಭವಾಗಿ ಮಾರಾಟವಾಗುತ್ತಿವೆ. ಉತ್ತಮ ಗುಣಮಟ್ಟದ ಹಣ್ಣು 15 ರಿಂದ 20 ರೂ. ವರೆಗೂ ಮಾರಾಟಗೊಳ್ಳುತ್ತಿವೆ.

ನಗರದ ಎಂಜಿ ರಸ್ತೆಯ ಬಾಲಕರ ಪದವಿ ಹಾಸ್ಟೆಲ್‌ ಮುಂಭಾಗ ತಮಿಳುನಾಡಿನಿಂದ ಬಂದಿರುವ ವ್ಯಾಪಾರಸ್ಥರು ಹಣ್ಣುಗಳನ್ನು ತರಿಸಿಕೊಂಡು ತಳ್ಳುವ ಬಂಡಿಯಲ್ಲಿ ದಿನವಿಡೀ ನಗರ ಪ್ರದೇಶಗಳಲ್ಲಿ ಸುತ್ತಾಡಿ ಮಾರಾಟ ಮಾಡುವ ದೃಶ್ಯಗಳು ಕಂಡು ಬರುತ್ತಿವೆ.

ಎಳನೀರಿಗಿಂತ ಬೆಲೆ ಕಡಿಮೆ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಎಳನೀರು 25 ರಿಂದ 30 ರೂ. ದಾಟಿದೆ. ಇಂತಹ ಸಂದರ್ಭದಲ್ಲಿ ಕಡಿಮೆ ದರದಲ್ಲಿ ಅದರಲ್ಲೂ ಎಳ್ಳುನೀರುಗಿಂತ ಸುಲಭವಾಗಿ ತಾಟಲಿಂಗು ಬಡವರ ಕೈಗೆಟುಕುತ್ತಿದೆ. ಹಣ್ಣು ಸೇವಿಸಿದರೆ ದೇಹದಲ್ಲಿ ಉಷ್ಣಾಂಶ ಕಡಿಮೆ ಆಗುತ್ತದೆ, ಬಿಸಿಲಿನ ಸಂದರ್ಭದಲ್ಲಿ ಸೇವಿಸಿದರೆ ತಂಪು ನೀಡುತ್ತದೆ ಎನ್ನುತ್ತಾರೆ ನಗರದ ಸರ್‌.ಎಂ.ವಿ ಲೇಔಟ್‌ನ ನಿವಾಸಿ ನಾರಾಯಣಸ್ವಾಮಿ.

ತಾಟಲಿಂಗು ಹಣ್ಣುಗಳ ಸೇವನೆಯಿಂದ ಬೇಸಿಗೆಯಲ್ಲಿ ಮನುಷ್ಯನ ದೇಹಕ್ಕೆ ತಂಪು ಕೊಡುತ್ತದೆ. ಇದು ನಮ್ಮ ಜಿಲ್ಲೆಯೊಳಗೆ ಎಲ್ಲೂ ಬೆಳೆಯುವುದಿಲ್ಲ. ಬೇಸಿಗೆ ಅವಧಿಯಲ್ಲಿ ಮಾತ್ರ ನೆರೆಯ ಕೇರಳ, ತಮಿಳುನಾಡಿನಿಂದ ಬರುತ್ತವೆ. ನಾವು ಪ್ರತಿ ವರ್ಷ ಬೇಸಿಗೆಯಲ್ಲಿ ತಾಟಲಿಂಗು ಹಣ್ಣುಗಳನ್ನು ತಪ್ಪದೇ ಸೇವಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ನಗರದ ನಿವಾಸಿ ಇಸ್ಮಾಯಿಲ್‌ ತಿಳಿಸಿದರು.

ಪ್ರತಿ ವರ್ಷ ನಾವು ಬೇಸಿಗೆಯಲ್ಲಿ ತಾಟಲಿಂಗು ಹಣ್ಣುಗಳನ್ನು ತಮಿಳುನಾಡಿನಿಂದ ಜಿಲ್ಲೆಗೆ ತಂದು ಮಾರಾಟ ಮಾಡುತ್ತೇವೆ. ಈ ಭಾಗದಲ್ಲಿ ತಾಟಲಿಂಗು ಹಣ್ಣು ಇಷ್ಟಪಡುವರ ಸಂಖ್ಯೆ ಹೆಚ್ಚಾಗಿದೆ. ದರ ಕೂಡ ಕಡಿಮೆ. ಒಂದು ಹಣ್ಣು 10 ರೂ.ಗೆ ಮಾರಾಟ ಮಾಡುತ್ತೇವೆ. ನಿತ್ಯ 1,000 ರಿಂದ 1,500 ರೂ. ವರೆಗೂ ವ್ಯಾಪಾರ ಮಾಡುತ್ತೇವೆ.
ಧರ್ಮೇಶ್‌, ವ್ಯಾಪಾರಿ, ಕೃಷ್ಣಗಿರಿ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.