ಆಧಾರ್‌ ನೋಂದಣಿ ಕೇಂದ್ರ ತೆರೆಯಲು ಆಗ್ರಹ


Team Udayavani, Jun 14, 2019, 3:48 PM IST

cb-tdy-3..

ಶಿಡ್ಲಘಟ್ಟದಲ್ಲಿ ಆಧಾರ್‌ ಕಾರ್ಡ್‌ ಕೇಂದ್ರ ತೆರೆಯಲು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಂದಾಯ ನಿರೀಕ್ಷಕ ವಿಶ್ವನಾಥ್‌ಗೆ ಮನವಿ ಸಲ್ಲಿಸಿದರು.

ಶಿಡ್ಲಘಟ್ಟ: ನಗರದಲ್ಲಿ ಆಧಾರ್‌ ಕಾರ್ಡ್‌ ನೋಂದಣಿ ಕೇಂದ್ರ ಒಂದೇ ಇದ್ದು ಜನ ಸಾಮಾನ್ಯರು ಪರದಾಡುವಂತಾಗಿದ್ದು, ಕೂಡಲೆ ಒಂದೆರೆಡು ಆಧಾರ್‌ ಕೇಂದ್ರಗಳನ್ನು ತೆರೆಯಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಕನ್ನಡ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ, ಕರವೇ ಶಿವರಾಮೇಗೌಡ ಬಣ ಹಾಗೂ ಕರ್ನಾಟಕ ಜನಸೈನ್ಯದ ಕಾರ್ಯಕರ್ತರು ನಗರದ ಸಾರಿಗೆ ಬಸ್‌ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದರು.

3 ತಿಂಗಳು ಕಾಯಬೇಕು: ನಗರದಲ್ಲಿ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ಮಾತ್ರ ಆಧಾರ್‌ ನೋಂದಣಿ ಮಾಡುತ್ತಿದ್ದು, ಇದರಿಂದ ನಾಗರಿಕರಿಗೆ ತೊಂದರೆಯಾಗಿದೆ. ಆಧಾರ್‌ ತೆಗೆಯುವುದು, ತಿದ್ದುಪಡಿ ಮಾಡಿಕೊಡುವುದು ಸೇರಿ ಯಾವುದಕ್ಕೂ 3 ತಿಂಗಳು ಬಿಟ್ಟು ಟೋಕನ್‌ ಕೊಡಲಾಗುತ್ತದೆ. ಹೊಸ ಕಾರ್ಡು ಪಡೆಯಲು ತಿದ್ದುಪಡಿ ಮಾಡಲು 3 ತಿಂಗಳು ಕಾಯಬೇಕು ಎಂದರು.

ಪ್ರತಿಭಟನೆ ಉದ್ದೇಶಿಸಿ ಕರವೇ ತಾಲೂಕು ಅಧ್ಯಕ್ಷ ಶ್ರೀಧರ್‌ ಮಾತನಾಡಿ, ಯಾವುದೆ ಇಲಾಖೆಯ ಸೌಲಭ್ಯ ಪಡೆದುಕೊಳ್ಳಲು ಆಧಾರ್‌ ಕಾರ್ಡ್‌ ಅಗತ್ಯವಾಗಿದೆ. ಬ್ಯಾಂಕುಗಳಲ್ಲಿ ಆಧಾರ್‌ ಇಲ್ಲದೇ ಹಣದ ವಹಿವಾಟು ನಡೆಯಲ್ಲ.

ವಿಜಯಪುರಕ್ಕೆ ಹೋಗಬೇಕು: ಆಧಾರ್‌ನಲ್ಲಿ ಹೆಸರು, ವಿಳಾಸ, ವಯಸ್ಸು ಇನ್ನಿತರೆ ಸ್ವಲ್ಪ ತಪ್ಪಿದ್ದರೂ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಪಟ್ಟಣದಲ್ಲಿ ಆಧಾರ್‌ ನೋಂದಣಿ ಕೇಂದ್ರ ಆರಂಭಿಸಿ ನಾಗರಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಶಿಡ್ಲಘಟ್ಟ ನಗರದಲ್ಲಿ ಏಕೈಕ ಆಧಾರ್‌ ನೋಂದಣಿ ಕೇಂದ್ರವಿರುವುದರಿಂದ ನಾಗರಿಕರು ತುರ್ತಾಗಿ ಕಾರ್ಡ್‌ ಬೇಕಾದವರು, ತಿದ್ದುಪಡಿ ಮಾಡಿಸಿಕೊಳ್ಳಬೇಕಾದವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರಕ್ಕೆ ಹೋಗಿ ಅಲ್ಲಿ 500-600 ರೂ.ಹಣ ಕೊಟ್ಟು ದಿನಪೂರ್ತಿ ಕಾದು ಮಾಡಿಸಿಕೊಂಡು ಬರುತ್ತಿದ್ದಾರೆ ಎಂದರು.

ನಾಗರಿಕರಿಗೆ ಅನುಕೂಲ ಕಲ್ಪಿಸಿ: ಕೂಲಿ ನಾಲಿ ಮಾಡಿ ಬದುಕುವ ಜನರು ದಿನಗಟ್ಟಲೇ ಕಾದು ಹಣ ಕೊಟ್ಟು ಕಾರ್ಡ್‌ ಮಾಡಿಸಿಕೊಳ್ಳುವ ಸಂಕಷ್ಟ ತಪ್ಪಿಸಲು ತಾಲೂಕು ಆಡಳಿತದಿಂದ ಇಲ್ಲಿ ಒಂದೆರಡು ಆಧಾರ್‌ ತಿದ್ದುಪಡಿ ಕೇಂದ್ರಗಳನ್ನು ತೆರೆದು ಅನುಕೂಲ ಕಲ್ಪಿಸಬೇಕೆಂದು ಮನವಿ ಸಲ್ಲಿಸಿದರು. ತಹಶೀಲ್ದಾರರ ಅನುಪಸ್ಥಿತಿಯಲ್ಲಿ ಕಂದಾಯ ನಿರೀಕ್ಷಕ ವಿಶ್ವನಾಥ್‌ ಮನವಿ ಸ್ವೀಕರಿಸಿದರು. ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್‌, ಕರವೇ ಸ್ವಾಭಿಮಾನಿ ಬಣದ ತಾಲೂಕು ಅಧ್ಯಕ್ಷ ಕೆ.ಎ.ಮಂಜುನಾಥ್‌, ಗಂಗಾಧರ್‌, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಮುನಿರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.