ಪುಸ್ತಕ ಮಕ್ಕಳ ಜ್ಞಾನ ವೃದ್ಧಿಗೆ ಸಹಕಾರಿ


Team Udayavani, Mar 6, 2019, 7:25 AM IST

pustaka.jpg

ಚಿಂತಾಮಣಿ: ಮಕ್ಕಳ ಭವಿಷ್ಯಕ್ಕೆ ಮತ್ತು ಸಮಾಜಕ್ಕೆ ಬೇಕಾಗಿರುವ ಜ್ಞಾನವನ್ನು ಲೇಖಕ ಮೂಡಲಗೊಲ್ಲಹಳ್ಳಿ ಕೆ.ನರಸಿಂಹಪ್ಪರವರು ಬರೆದ ಹಚ್ಚಿಟ್ಟ ದೀಪ-ಅಂಕಣ ಬರಹಗಳು ಪುಸ್ತಕದ ಮೂಲಕ ತಿಳಿಸಿದ್ದಾರೆ ಎಂದು ಎಇಇ ತುಳವನೂರು ಟಿ.ಎನ್‌.ಸುಧಾಕರರೆಡ್ಡಿ ಹೇಳಿದರು. 

ತಾಲೂಕಿನ ತುಳವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದ ಸ್ವಾತಂತ್ರ ಯೋಧ ಟಿ.ಕೆ.ಗಂಗಿರೆಡ್ಡಿ ಶಾಲಾ ರಂಗಮಂಟಪದಲ್ಲಿ ಟಿ.ಕೆ.ಗಂಗಿರೆಡ್ಡಿ ಮೊಮೋರಿಯಲ್‌ ಟ್ರಸ್ಟ್‌, ಬೆಂಗಳೂರಿನ ಸೃಷ್ಠಿ ಪ್ರಕಾಶನ, ಚಿಂತಾಮಣಿ ಗೆಜ್ಜೆ ಸದ್ದು ಸಾಂಸ್ಕೃತಿಕ ಕಲಾತಂಡ ವತಿಯಿಂದ ಸಾಹಿತ್ಯ ಮತ್ತು ಸಾಂಸ್ಕೃತಿಕ ದಿಬ್ಬಣದಲ್ಲಿ ಲೇಖಕ ಮೂಡಲಗೊಲ್ಲಹಳ್ಳಿಯವರ ಹಚ್ಚಿಟ್ಟ ದೀಪ-ಅಂಕಣಬರಹಗಳು ಕೃತಿಯ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕ ನರಸಿಂಹಪ್ಪ ಮಾತನಾಡಿ, ಮಕ್ಕಳ ಭವಿಷ್ಯಕ್ಕೆ ಮತ್ತು ಸಮಾಜಕ್ಕೆ ಬೇಕಾಗಿರುವ ಜ್ಞಾನವನ್ನು ಪುಸ್ತಕದ ಮೂಲಕ ತಿಳಿಸಿದ್ದಾರೆ.  ನಮ್ಮ ಗ್ರಾಮ ತಾಲೂಕು ಮತ್ತು ರಾಜ್ಯದ ಗಡಿಭಾಗದಲ್ಲಿ ಇದ್ದು ಇಂತಹ ಗ್ರಾಮದ ಚರಿತ್ರೆಯೂ ಈ ಪುಸ್ತಕದಲ್ಲಿರುವುದು ಸಂತೋಷದ ವಿಚಾರ. ಈ ಪುಸ್ತಕ ಪ್ರತಿ ಶಾಲೆಯ ಗ್ರಂಥಾಲಯಕ್ಕೂ ಉಚಿತವಾಗಿ ನೀಡುತ್ತಿದ್ದೇನೆ ಎಂದರು. 

ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಬಹುತೇಕ ವಿದ್ಯಾರ್ಥಿಗಳು ಇಂದು ಸರ್ಕಾರಿ ಕೆಲಸಗಳಲ್ಲಿ, ಉನ್ನತ ಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ನಾನೂ ಸಹ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆ ವಿದ್ಯಾರ್ಥಿಯಾಗಿದ್ದೇನೆ ಎಂದು ಹೇಳಿದರು. 

ಕೋಲಾರದ ರಂಗಕರ್ಮಿ ನಾ.ವೆಂಕಟರವಣ ಪುಸ್ತಕದ ಕುರಿತು ಮಾತನಾಡಿ, ಜನ ಸಮುದಾಯ ಸಂಸ್ಕೃತಿ, ಪ್ರಕೃತಿ ವಿಕೋಪ, ರಾಜಕೀಯ ತಲ್ಲಣಗಳು ಮುಂತಾದ ಅಂಶಗಳನ್ನು ಅರಗಿಸಿಕೊಂಡು ಸಮಾಜಕ್ಕೆ ಹೊಸ ಬೆಳಕನ್ನು ನೀಡುವ ಶಕ್ತಿಯನ್ನು ಹಚ್ಚಿಟ್ಟ ದೀಪ ಕೃತಿ ಒಳಗೊಂಡಿದೆ ಎಂದು ಪ್ರತಿಪಾದಿಸಿದರು.

ಸೃಷ್ಠಿ ಪ್ರಕಾಶನದ ಪ್ರಕಾಶಕ ಷಣ್ಮುಖ್‌ ಪಟೇಲ್‌ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲ ಎನ್‌.ವಿಶ್ವನಾಥಶೆಟ್ಟಿ, ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತೊಗಲುಗೊಂಬೆ ಕಲಾವಿದ ಎಸ್‌.ಶಂಕರಪ್ಪ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕಾಗತಿ ನಾಗರಾಜಪ್ಪ, ವನ್ಯಜೀವಿ ಸಂರಕ್ಷಕ ಪ್ರಸನ್ನ ಕುಮಾರ್‌ರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲೆ ಡಿ.ವಿ.ನಾಗರತ್ನಮ್ಮ, ಭದ್ರಮ್ಮ ಯಜಮಾನ್‌ ಪಟೇಲ್‌ ಗಂಗಪ್ಪ, ವಕೀಲ ಕುರಾರೆಡ್ಡಿ, ನಾರಾಯಣಸ್ವಾಮಿ, ಒ.ಕೆ.ವಿ.ಕಾಳಿದಾಸ, ಎಪಿಎಂಸಿ ಉಪಾಧ್ಯಕ್ಷ ಶ್ರೀ ನಿವಾಸರೆಡ್ಡಿ, ಟಿ.ಆರ್‌.ಮುನಿಶಾಮಿರೆಡ್ಡಿ, ಬಿ.ರವಿ, ಗಂಗಿರೆಡ್ಡಿ, ಟಿ.ವಿ.ಶ್ರೀನಿವಾಸ, ಸಿ.ಆರ್‌.ಪಿ.ಸುಂದರೇಶ್‌, ಜಯದೇವ, ನಾಗರಾಜ್‌, ವೆಂಕಟೇಶ್‌, ಡಿ.ಎಂ.ನಾಗರಾಜ್‌, ರಾಜಾರೆಡ್ಡಿ, ಟಿ.ಕೆ.ನರಸಿಂಹಪ್ಪ, ಕೃಷ್ಣಪ್ಪ, ಸಂಗಂ ಆರ್ಟ್ಸ್ ಶ್ರೀನಿವಾಸ್‌, ಗ್ರಾಮಸ್ಥರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. 

ಸಾಂಸ್ಕೃತಿಕ ನೃತ್ಯ: ಚಿಕ್ಕಬಳ್ಳಾಪುರ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿತ ಭರತನಾಟ್ಯ ಕಾರ್ಯಕ್ರಮವನ್ನು ಕೀರ್ತಿ ಬಸಪ್ಪ ಲಗಳಿ ತಂಡ, ಜಾನಪದ ನೃತ್ಯಗಳನ್ನು ಶಾಲಾ ಮಕ್ಕಳು ಹಾಗೂ ಇಡೀ ರಾತ್ರಿ ಕೊಂಡ್ಲಿಗಾನಹಳ್ಳಿ ನರಸಿಂಹಪ್ಪ ತಂಡ ನಾಟಕ ನಡೆಸಿಕೊಟ್ಟರು. 

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.