ಸೂಕ್ತ ಪರಿಹಾರಕ್ಕೆ ಸಿಐಟಿಯು ಆಗ್ರಹ
Team Udayavani, May 22, 2021, 5:17 PM IST
ಚಿಕ್ಕಬಳ್ಳಾಪುರ: ಕೊರೊನಾ ಸೋಂಕು ನಿಯಂತ್ರಿಸುವಲ್ಲಿಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದುಆರೋಪಿಸಿ ಸಿಐಟಿಯು, ಕೆಪಿಆರ್ಎಸ್,ಎಐಎಡಬ್ಲೂ ಯು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಅದರಂತೆ ಕಾರ್ಯಕರ್ತರು ಜಿಲ್ಲೆಯಲ್ಲೂ ಭಿತ್ತಿಪತ್ರ ಹಿಡಿದು ಆಕ್ರೋಶ ಹೊರಹಾಕಿದರು.
ನಗರದ ಸಿಐಟಿಯು ಕಚೇರಿ ಮುಂದೆ ಪ್ರತಿಭಟನೆನಡೆಸಿದ ಕಾರ್ಯಕರ್ತರು, ರಾಜ್ಯದಲ್ಲಿ ಕೃಷಿ ಕೂಲಿಕಾರರೂಸೇರಿ 3 ಕೋಟಿ ರೂ.ಗೂ ಹೆಚ್ಚಿನ ಅಸಂಘಟಿತಕಾರ್ಮಿಕರು ಕೆಲಸ ಇಲ್ಲದೆ ಸಮಸ್ಯೆಗೆ ಸಿಲುಕಿದ್ದಾರೆ.ಕಟ್ಟಡ, ವಲಸೆ ಕಾರ್ಮಿಕರು, ಖಾಸಗಿ ವಾಹನಚಾಲಕರು, ಬೀದಿ ಬದಿ ವ್ಯಾಪಾರಿಗಳು, ಮನೆಕೆಲಸದವರು, ಹಮಾಲಿಗಳು, ಬಿಸಿಯೂಟ ನೌಕರರು,ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಸಿಬ್ಬಂದಿಆದಾಯ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಂಘಟನೆ ಪದಾಧಿಕಾರಿಗಳು ಆರೋಪಿಸಿದರು.
ಕೊರೊನಾದಿಂದ ಹೂವು, ಹಣ್ಣು, ತರಕಾರಿಗೆ ಸೂಕ್ತಬೆಲೆ ಇಲ್ಲದೇ ರೈತರು ಕಷ್ಟದಲ್ಲಿದ್ದಾರೆ.ಕೃಷಿಚಟುವಟಿಕೆಗಳುಕುಂಠಿತಗೊಂಡಿವೆ. ಅತಿ ಸಣ್ಣ, ಸಣ್ಣ ಮತ್ತು ಮಧ್ಯಮವರ್ಗದ ರೈತರು ಬೆಳೆಗೆ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ.ಬೆಂಬಲ ಬೆಲೆ, ಪ್ರೋತ್ಸಾಹಧನ ಮತ್ತು ರೈತರಿಂದಖರೀದಿಸಿದ ರಾಗಿ ಹಣನೀಡಿಲ್ಲ ಎಂದು ದೂರಿದರು.ರಾಜ್ಯ ಸರ್ಕಾರ ಕೈಗೆಟುಕದ ಕೋವಿಡ್ ಪರಿಹಾರಘೋಷಿಸಿದೆ. ಈ ಪರಿಹಾರಕ್ಕೆ ಕಟ್ಟಡ ಕಾರ್ಮಿಕ ಕಲ್ಯಾಣಮಂಡಳಿಯಲ್ಲಿದ್ದ 494 ಕೋಟಿ ರೂ. ಬಳಸಲಾಗುತ್ತಿದೆ.
ಸರ್ಕಾರ ಅಸಲಿಗೆ ಖರ್ಚು ಮಾಡುತ್ತಿರುವುದು617.82ಕೋಟಿ ರೂ. ಮಾತ್ರ. ರಾಜ್ಯದಲ್ಲಿ3 ಕೋಟಿ ಅಸಂಘಟಿತಕಾರ್ಮಿಕರಿದ್ದು, ಇಷ್ಟು ಅತ್ಯಲ್ಪ ಮೊತ್ತವನ್ನು ಕೆಲವೇಜನರಿಗೆ ಮಾತ್ರ ಕೊಡಬಹುದು ಎಂದುಪ್ರತಿಭಟನಾಕಾರರು ಆರೋಪಿಸಿದರು.ಬಹುಸಂಖ್ಯಾತ ಅಸಂಘಟಿತ ಕಾರ್ಮಿಕರಿಗೆ ಯಾವುದೇಪರಿಹಾರವೂ ಸಿಗುವುದಿಲ್ಲ, ಎಲ್ಲಾ ಅಸಂಘಟಿತರಿಗೂಸರ್ಕಾರ 10,000 ರೂ. ಪರಿಹಾರ ಮತ್ತು ತಲಾ 10 ಕೇಜಿರೇಷನ್ ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮುಖಂಡ ಬಸವರಾಜು, ಅಂಗನವಾಡಿ ಕಾರ್ಯಕರ್ತೆಗಾಯತ್ರಿ, ಸಹಾಯಕಿ ಶಾಂತಮ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ