ಜಿಲ್ಲೆಗೆ ಬೇಕು 19,428 ಕ್ವಿಂಟಲ್‌ ಬಿತ್ತನೆ ಬೀಜ

ಕೃಷಿ ಇಲಾಖೆಗೆ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ, ಬಿತ್ತನೆ ಬೀಜ ಒದಗಿಸುವ ಸವಾಲು

Team Udayavani, May 7, 2020, 3:03 PM IST

ಜಿಲ್ಲೆಗೆ ಬೇಕು 19,428 ಕ್ವಿಂಟಲ್‌ ಬಿತ್ತನೆ ಬೀಜ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಮುಂಗಾರು ಹಂಗಾಮಿನ ಮಳೆ ಶುಭಾರಂಭ ಮಾಡುತ್ತಿದ್ದಂತೆ ರೈತರು ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದು, ಹಲವು ದಿನಗಳಿಂದ ಬೀಳುತ್ತಿರುವ ಮಳೆಯಿಂದ ಭೂಮಿಯನ್ನು ಹದ ಮಾಡಿಕೊಂಡಿದ್ದ ರೈತರು ಇದೀಗ ಸದ್ದಿಲ್ಲದೇ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದು, ಜಿಲ್ಲೆಗೆ ಬರೋಬ್ಬರಿ 19,428 ಕ್ವಿಂಟಲ್‌ ಬಿತ್ತನೆ ಬೀಜ ಅವಶ್ಯಕವಾಗಿದೆ. ಜಿಲ್ಲಾದ್ಯಂತ ಈ ವರ್ಷ 1.40 ಲಕ್ಷ ಹೆಕ್ಟೇರ್‌ ಭೂ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈಗಾಗಲೇ ಜಿಲ್ಲೆಯ ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ, ಗೌರಿಬಿದನೂರು ತಾಲೂಕುಗಳಲ್ಲಿ ರೈತರು ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದು ವಾಡಿಕೆಯಂತೆ ರೈತರು ಆರಂಭದ ಬೆಳೆಯಾಗಿ ನೆಲಗಡಲೆ ಬಿತ್ತನೆಗೆ ಮುಂದಾಗಿದ್ದಾರೆ. ಜಿಲ್ಲೆಗೆ ನೆಲಗಡಲೆ ಮಾತ್ರ 9,438 ಕ್ವಿಂಟಲ್‌ನಷ್ಟು ಅವಶ್ಯಕವಾಗಿದೆ.

26 ಸಾವಿರ ಹೆಕ್ಟೇರ್‌ ಪ್ರದೇಶ: ಜಿಲ್ಲೆಯಲ್ಲಿ ನೀರಾವರಿ ಇಲ್ಲದ ರೈತರು ನೆಲಗಡಲೆಯನ್ನು ಪ್ರಮುಖ ವಾಣಿಜ್ಯ ಬೆಳೆಯಾಗಿ ಬೆಳೆಯುವುದರಿಂದ ನೆಲಗಡಲೆ ಬೆಳೆಯುವ ರೈತರ
ಸಂಖ್ಯೆ ಅಧಿಕವಾಗಿದೆ. ರಾಗಿ, ಮುಸುಕಿನ ಜೋಳ ಹೊರತುಪಡಿಸಿದರೆ ಜಿಲ್ಲೆಯಲ್ಲಿ ಮೂರನೇ ಅತಿದೊಡ್ಡ ಬೆಳೆಯಾಗಿ ನೆಲಗಲಡೆ ಬೆಳೆಯುತ್ತಾರೆ. ಈ ವರ್ಷ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ ಸುಮಾರು 26 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ನೆಲಗಡಲೆ ಬಿತ್ತನೆ ಪ್ರದೇಶ ಗುರುತಿಸಿದೆ. ಜಿಲ್ಲೆಗೆ ಅವಶ್ಯಕ ವಾದ 19,428 ಕ್ವಿಂಟಲ್‌ನಷ್ಟು ವಿವಿಧ ಬಿತ್ತನೆ ಬೀಜ ಅವಶ್ಯಕವಾಗಿದ್ದು ಆ ಪೈಕಿ 4,569 ಕ್ವಿಂಟಲ್‌ಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ಜಿಲ್ಲೆಯ ರೈತರು ಬಿತ್ತನೆ ಬೀಜ ಕ್ಕಾಗಿ ಕೃಷಿ ಇಲಾಖೆಗೆ ಸಂಪರ್ಕ ಮಾಡಿದ್ದು ಕೆಲವು ತಾಲೂಕುಗಳಲ್ಲಿ ನೆಲಗಲಡೆ, ತೊಗರಿ ವಿತರಿಸುವ ಕಾರ್ಯ ನಡೆದಿದೆ. ಆದರೆ ರೈತರ
ಬೇಡಿಕೆಗೆ ತಕ್ಕಂತೆ ಜಿಲ್ಲೆಗೆ ಅವಶ್ಯ ಕವಾದ ಬಿತ್ತನೆ ಬೀಜಗಳು, ರಸಗೊಬ್ಬರ ಪೂರೈಕೆ ಆಗಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಸರ್ಕಾರವು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಸಕಾಲದಲ್ಲಿ ಒದಗಿಸಿ ರೈತರ ಆತಂಕ ದೂರ ಮಾಡ ಬೇಕಾಗಿದೆ. ಕಳೆದ ಸಲ ಬಾಗೇಪಲ್ಲಿ ತಾಲೂಕಿನಲ್ಲಿ ಮುಂಗಾರು ಮುಗಿದು ಹಿಂಗಾರಿನ ಸಮಯದಲ್ಲಿ ನೆಲಗಡಲೆ ಹಂಚಿಕೆಯಾಗಿತ್ತು. ಇದರಿಂದ ಬಹಳಷ್ಟು ರೈತರಿಗೆ ತೊಂದರೆಯಾಗಿತ್ತು.
● ಮಾಡಪ್ಪಲ್ಲಿ ನರಸಿಂಹಮೂರ್ತಿ, ಯುವ ರೈತ

● ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.