ಮತ್ತೆ ಪಾತಾಳಕ್ಕೆ ಕುಸಿದ ಟೊಮೆಟೋ ಬೆಲೆ


Team Udayavani, Feb 4, 2019, 7:24 AM IST

mathe.jpg

ಚಿಕ್ಕಬಳ್ಳಾಪುರ: ಹಲವು ದಿನಗಳ ಹಿಂದೆಯಷ್ಟೇ ತನ್ನ ಬೆಲೆ ಹೆಚ್ಚಿಸಿಕೊಂಡು ಗ್ರಾಹಕರ ನಿದ್ದೆಗೆಡಿಸಿ ಅನ್ನದಾತರಿಗೆ ಬಂಪರ್‌ ಹೊಡೆದಿದ್ದ ಟೊಮೆಟೋ ಬೆಲೆ ಮಾರುಕಟ್ಟೆಯಲ್ಲಿ ಮತ್ತೆ ಪಾತಾಳಕ್ಕೆ ಕುಸಿದಿದೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾದ್ಯಂತ ಟೊಮೆ ಟೋ ಬೆಲೆ ಭಾರೀ ಕುಸಿತಗೊಂಡಿದ್ದು, 500, 600 ವರೆಗೂ ಮಾರಾಟಗೊಂಡಿದ್ದ 15 ಕೆ.ಜಿ ಟೊಮೆಟೋ ಬಾಕ್ಸ್‌ ಈಗ 30, 50 ರೂ.ಗೆ ಬಿಕರಿಯಾಗಿದೆ.

ಬರದ ಕಾರ್ಮೋಡಕ್ಕೆ ಸಿಲುಕಿ ತೀವ್ರ ಸಂಕಷ್ಟ ದಲ್ಲಿರುವ ಜಿಲ್ಲೆಯ ಅನ್ನದಾತರಿಗೆ ಇದೀಗ ಟೊಮೆಟೋ ಬೆಲೆ ಕುಸಿತ ಸಹಜವಾಗಿಯೇ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಉತ್ತಮ ಬೆಲೆ ನಿರೀ ಕ್ಷಿಸಿದ್ದ ರೈತರು ಕೈ ಸುಟ್ಟುಕೊಳ್ಳುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಹಲವು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿ ಟೊಮೆ ಟೋ ಬೆಳೆಗೆ ಬಂಪರ್‌ ಬೆಲೆ ಬಂದಿತ್ತು. ಬೆಲೆ ಹೆಚ್ಚಳ ನೋಡಿ ಗ್ರಾಹಕರು ಕಂಗಾಲಾಗಿದ್ದರು. ಆದರೆ ಇದೀಗ ಟೊಮೆಟೋವನ್ನು ಮಾರುಕಟ್ಟೆಯಲ್ಲಿ ಕೇಳ್ಳೋರು ಇಲ್ಲವಾಗಿದೆ.

30, 50 ರೂ.ಗೆ ಮಾರಾಟ: ಜಿಲ್ಲೆಯಲ್ಲಿ ಸದ್ಯ 15 ಕೆಜಿ ಟೊಮೆಟೋ ಬಾಕ್ಸ್‌ ಬರೀ 30 ರಿಂದ 50 ರೂ.ಗೆ ಮಾತ್ರ ಮಾರಾಟಗೊಳ್ಳುತ್ತಿದೆ. ದೂರದ ಊರು ಗಳಿಂದ ಟೊಮೆಟೋವನ್ನು ದುಬಾರಿ ಬಾಡಿಗೆ ಕೊಟ್ಟು ಮಾರುಕಟ್ಟೆಗೆ ತರುವ ಸಾಗಾಣಿಕೆ ವೆಚ್ಚವು ಕೂಡ ಬೆಳೆಗಾರರ ಕೈ ಸೇರದ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣ ವಾಗಿದೆ.

ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಕೂಡ ದರ ಕುಸಿತದ ಪರ್ವ ಶುರವಾಗಿದೆ. ಚಿಂತಾ ಮಣಿ ಮಾರುಕಟ್ಟೆಗೆ ಬಾಗೇಪಲ್ಲಿ, ಶಿಡ್ಲಘಟ್ಟ, ಶ್ರೀನಿವಾಸಪುರ, ಹೆಚ್ಕ್ರಾಸ್‌ ಕೋಲಾರ ಜಿಲ್ಲೆಯ ಹಲವು ಭಾಗಗಳಿಂದ ಟೊಮೆಟೋ ಹರಿದು ಬರುತ್ತಿತ್ತು. ಆದರೆ ಇಲ್ಲಿ ಕೂಡ ದರ ಕುಸಿತಗೊಂಡಿದ್ದು 15 ಕೆ.ಜಿ ಬಾಕ್ಸ್‌ 100 ರೂ. ಗಡಿ ದಾಟಿಲ್ಲ. ಹೈಬ್ರಿಡ್ಜ್ ಟೊಮೆಟೋ ಗರಿಷ್ಠ 80 ರಿಂದ 90 ರೂ.ಗೆ ಮಾತ್ರ ಮಾರಾಟಗೊಳ್ಳುತ್ತಿದೆ.

ಉಳಿದಂತೆ ಎಲ್ಲಾ ರೀತಿಯ ಟೊಮೆಟೋ ದರ ಭಾರೀ ಕುಸಿತಗೊಂಡಿದೆ. ತಿಂಗಳ ಹಿಂದೆ ಚಿಂತಾಮಣಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮೆಟೋ ಬಾಕ್ಸ್‌ ಬರೋಬ್ಬರಿ 600 ರಿಂದ 700 ರೂ.ಗೆ ಮಾರಾಟ ಗೊಂಡಿತು. ಚಿಕ್ಕಬಳ್ಳಾಪುರದಲ್ಲಿ 800 ರೂ. ಗಡಿ ದಾಟಿತ್ತು. ಆದರೆ ಒಂದೇ ವಾರದಲ್ಲಿ ಬೆಲೆ ಕುಸಿತ ವಾಗಿರುವುದು ರೈತರನ್ನು ಚಿಂತಗೆಗೀಡು ಮಾಡಿದೆ.

ಟೊಮೆಟೋ ಪ್ರಮುಖ ಬೆಳೆ: ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಟೊಮೆಟೋವನ್ನು ಸಾವಿ ರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯುವ ರೈತರು ಇದ್ದಾರೆ. ಸದ್ಯ ಜಿಲ್ಲಾದ್ಯಂತ ಬರದ ಕಾರ್ಮೋಡ ಆವರಿಸಿ ಮಳೆ ಬೆಳೆ ಇಲ್ಲದೇ ಅಂತರ್ಜಲ ಕುಸಿತ ಗೊಂಡು ಕೊಳವೆ ಬಾವಿಗಳು ಬತ್ತಿ ಹೋಗುತ್ತಿವೆ.

ಆದರೂ ರೈತರು ಉತ್ತಮ ಬೆಲೆ ಸಿಗುವ ನಿರೀಕ್ಷೆ ಯೊಂದಿಗೆ ಅಲ್ಪಸ್ವಲ್ಪ ಇರುವ ನೀರನ್ನು ಬಳಸಿಕೊಂಡು ಬೆಳೆದ ಟೊಮೆಟೋಗೆ ಇದೀಗ ಇದ್ದಕ್ಕಿದ್ದಂತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತಗೊಂಡಿರುವುದು ಲಕ್ಷಾಂತರ ರೂ. ಬಂಡವಾಳ ಹಾಕಿ ಟೊಮೆಟೋ ಬೆಳೆದ ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಬಹಳಷ್ಟು ತೋಟಗಳಲ್ಲಿ ಕೊಯ್ಲಿಗೆ ಬಂದಿರುವ ಟೊಮೆಟೋವನ್ನು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ರೈತರು ಹಾಗೆ ಬಿಟ್ಟಿರುವ ದೃಶ್ಯಗಳು ಕಾಣುತ್ತಿವೆ.

ಒಟ್ಟಿನಲ್ಲಿ ಬರದಿಂದ ತತ್ತರಿಸಿರುವ ಜಿಲ್ಲೆಯ ಅನ್ನ ದಾತರಿಗೆ ಇದೀಗ ಟೊಮೆಟೋ ಬೆಲೆ ಮಾರು ಕಟ್ಟೆಯಲ್ಲಿ ಕುಸಿದಿರುವುದು ತೀವ್ರ ಆತಂಕ ಸೃಷ್ಟಿಸಿದೆ. ಸಾಲ, ಸೂಲ ಮಾಡಿ ಟೊಮೆಟೋ ಬೆಳೆದಿರುವ ರೈತರ ಪರಿಸ್ಥಿತಿ ಹೇಳತೀರದಾಗಿದ್ದು, ಬೆಲೆ ಕುಸಿತದಿಂದ ಟೊಮೆಟೋ ಬೆಳೆಗಾರರು ಕಣ್ಣೀರು ಸುರಿಸು ವಂತಾಗಿದೆ.

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.