ಭೋಗನಂದೀಶ್ವರ ಬ್ರಹ್ಮರಥೋತ್ಸವದ ವೈಭವ


Team Udayavani, Mar 6, 2019, 7:28 AM IST

bhoga.jpg

ಚಿಕ್ಕಬಳ್ಳಾಪುರ: ದಕ್ಷಿಣ ಕಾಶಿಯೆಂದು ಪ್ರಸಿದ್ಧಿಯಾಗಿರುವ ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸಿಕ ನಂದಿಯಲ್ಲಿ ಮಂಗಳವಾರ ಭಕ್ತಿಭಾವದ ಜೊತೆಗೆ ಅದ್ದೂರಿಯಾಗಿ ನಡೆದ ನಂದಿ ಶ್ರೀ ಭೋಗನಂದೀಶ್ವರಸ್ವಾಮಿ ವಾರ್ಷಿಕ ಬ್ರಹ್ಮರಥೋತ್ಸವಕ್ಕೆ ಭಕ್ತರ ಜನಸಾಗರವೇ ಹರಿದು ಬಂದಿತ್ತು. 

ದಿನವಿಡೀ ಸರದಿ ಸಾಲು: ಭಕ್ತಿಯ ತುಡಿತಕ್ಕೆ ಅಲ್ಲಿ ಹೆಜ್ಜೆ ಹೆಜ್ಜೆಗೂ ಕಾಲಿಡದಷ್ಟು ಜನ ಸಾಗರ ನೆರೆದು ಜೋಡಿ ರಥೋತ್ಸವ  ಎಳೆದು ಪುಳಕಿತರಾದರು. ರಥೋತ್ಸವದ ವೇಳೆ ಗೋವಿಂದ ನಾಮಸ್ಮರಣೆಯ ನೀನಾದ ಮುಗಿಲು ಮುಟ್ಟಿದರೆ, ಭೋಗನಂದೀಶ್ವರನ ದರ್ಶನಕ್ಕೆ ದಿನವಿಡೀ ಭಕ್ತರು ಸರದಿ ಸಾಲಿನಲ್ಲಿ ತೆರಳುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. 

ಮಹಾ ಶಿವರಾತ್ರಿಯ ಮರು ದಿನವೇ ನಡೆಯುವ ವೈಭವದ ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ನೆರೆ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸಿ ರಥೋತ್ಸವಕ್ಕೆ ಸಾಕ್ಷಿಯಾದರು. ಭೋಗನಂದೀಶ್ವರನಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ, ಕ್ಷೀರಾಭಿಷೇಕ ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು.

ಬೆಳಗ್ಗೆ 11:40ರ ವೇಳೆ ಆರಂಭಗೊಂಡ ರಥೋತ್ಸವ ಸಂಜೆಯವರೆಗೂ ಸಾಂಗವಾಗಿ ನಡೆಯಿತು. ರಥೋತ್ಸವ ಸಾಗಿದ ನಂದಿ ರಾಜ ಬೀದಿಗಳನ್ನು ಮೊದಲೇ ಸ್ವತ್ಛಗೊಳಿಸಿ ರಂಗೋಲಿ  ಬಿಡಿಸಲಾಗಿತ್ತು. ಅವಘಡಗಳು ಸಂಭವಿಸಿದಂತೆ ರಥದ ಸುತ್ತಲೂ ಭದ್ರತಾ ಸಿಬ್ಬಂದಿ ಹಗ್ಗಗಳನ್ನು ಹಿಡಿದು ಸುತ್ತವರಿದ್ದರು.

ಎಲ್ಲಿ ನೋಡಿದರೂ ಜನಸಾಗರ: ಹೆಜ್ಜೆ ಹೆಜ್ಜೆಗೂ ಕಾಲಿಡದಷ್ಟು ಭಕ್ತರು ನಂದಿಯಲ್ಲಿ ಬೀಡು ಬಿಟ್ಟು ಐತಿಹಾಸಿಕ ರಥೋತ್ಸವವನ್ನು ವೀಕ್ಷಿಸಿ ಪುಳಕಿತರಾದರು. ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಪೈಕಿ ಅತಿ ದೊಡ್ಡ ಜಾತ್ರೆಯೆಂದು ಬಿಂಬಿತವಾಗಿರುವ ನಂದಿ ಭೋಗನಂದೀಶ್ವರನ ಜಾತ್ರೆಯಲ್ಲಿ ನೋಡದಷ್ಟು ಜನ ಸಾಗರ ಕಂಡು ಬಂತು. 

ನೆರೆಯ ಆಂಧ್ರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು ಸೇರಿದಂತೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸಿ, ಹರಿಕೆ ಸಲ್ಲಿಸಿದರು. ರಥಕ್ಕೆ ತೇರು ಬಾಳೆ ಹಣ್ಣು ಎಸೆದು ಪುನೀತರಾದರೆ, ಕೆಲವರು ಮುಡಿ ಕೊಟ್ಟು ಹರಿಕೆ ತೀರಿಸಿದರು.

ರಥೋತ್ಸವಕ್ಕೆ ಚಾಲನೆ: ಭೋಗನಂದೀಶ್ವರ ಹಾಗೂ ಯೋಗ ನಂದೀಶ್ವರ ಬ್ರಹ್ಮರಥೋತ್ಸವಕ್ಕೆ ಸಂಸದ ಎಂ.ವೀರಪ್ಪ ಮೊಯ್ಲಿ, ಕ್ಷೇತ್ರದ ಶಾಸಕ ಡಾ.ಕೆ.ಸುಧಾಕರ್‌ ಚಾಲನೆ ನೀಡಿದರು. ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್‌, ಹಾಪ್‌ಕಾಮ್ಸ್‌ ಮಾಜಿ ಅಧ್ಯಕ್ಷ ಜಿ.ಆರ್‌.ಶ್ರೀನಿವಾಸ್‌,

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಕೋಚಿಮುಲ್‌ ನಿರ್ದೇಶಕ ಕೆ.ವಿ.ನಾಗರಾಜ್‌, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ತಾಪಂ ಇಒ ಸಂಜೀವಪ್ಪ, ಸೇರಿದಂತೆ ರಾಜಕೀಯ ಪಕ್ಷಗಳ ಧುರೀಣರು, ಮುಖಂಡರು ಮತ್ತಿತರ ಗಣ್ಯರು ಪಾಲ್ಗೊಂಡು ಭೋಗನಂದೀಶ್ವರಸ್ವಾಮಿಗೆ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು.

ನಿಯಂತ್ರಣಕ್ಕೆ ತಡೆಗೋಡೆ ನಿರ್ಮಾಣ: ಭಕ್ತರಿಗೆ ನಂದಿ ಭೋಗನಂದೀಶ್ವರನ ದರ್ಶನಕ್ಕೆ ಅನುಕೂಲವಾಗುವಂತೆ ಹಾಗೂ ಭಕ್ತರ ನಡುವೆ ನೂಕುನುಗ್ಗಲು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಒಳಗೆ, ಹೊರಗೆ ತಡೆಗೋಡೆ ನಿರ್ಮಿಸಿ ಅನುವು ಮಾಡಿಕೊಡಲಾಯಿತು. 

ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರಿಗೆ ಉಚಿತವಾಗಿ ಕುಡಿಯುವ ನೀರು, ಅನ್ನದಾನ ಕಲ್ಪಿಸಿದ್ದು, ನಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ಆರೈಕೆ ಕೂಡ ಸಿಕು¤. ರಥೋತ್ಸವದ ಪ್ರಯುಕ್ತ ಪಶು ವೈದ್ಯ ಇಲಾಖೆಯಿಂದ ರಾಸುಗಳ ಪ್ರದರ್ಶನ ನಡೆಸಿ ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಯಿತು.

ಭಾರೀ ಭದ್ರತೆ: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಮುಂಜಾಗ್ರತವಾಗಿ 600 ಕ್ಕೂ ಹೆಚ್ಚು ಪೊಲೀಸರನ್ನು  ಭದ್ರತೆಗೆ ನಿಯೋಜಿಸಿತ್ತು. ಜಾತ್ರೆಗೆ 20 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ಕಣ್ಗಾವಲು ಇತ್ತು. ರಥದ ಬಳಿ ಜನ ಹೋಗದಂತೆ ತಡೆಯಲು ಪ್ರತ್ಯೇಕವಾಗಿ ಸಮವಸ್ತ್ರ ಧರಿಸಿದ್ದ ಪೊಲೀಸರನ್ನು ನಿಯೋಜಿಸಲಾಗಿತ್ತು.

ವಾಹನ ಸಂಚಾರವನ್ನು ಸುಗಮಗೊಳಿಸಲು ಅನೇಕ ಕಡೆ ಮಾರ್ಗಗಳನ್ನು ಬದಲಿಸಿ ವಾಹನಗಳ ಪಾರ್ಕಿಂಗ್‌ಗೆ ಸ್ಥಳಾವಕಾಶ ಒದಗಿಸಲಾಗಿತ್ತು. ಉಪ ವಿಭಾಗದ ಆರಕ್ಷಕ ಉಪ ಅಧೀಕ್ಷಕ ಪ್ರಭುಶಂಕರ್‌, ಆರಕ್ಷಕ ವೃತ್ತ ನಿರೀಕ್ಷಕ ಸುದರ್ಶನ್‌,  ನೇತೃತ್ವದಲ್ಲಿ ನಂದಿ ಠಾಣೆ ಸಿಬ್ಬಂದಿ ಬಂದೋಬಸ್ತ್ ಉಸ್ತುವಾರಿ ವಹಿಸಿದ್ದರು.

150 ಕ್ಕೂ ಬಸ್‌ ವ್ಯವಸ್ಥೆ: ನಂದಿಯ ಭೋಗನಂದೀಶ್ವರ ಹಾಗೂ ಯೋಗ ನಂದೀಶ್ವರಸ್ವಾಮಿ ರಥೋತ್ಸವಗಳನ್ನು ಜೊತೆ ಜೊತೆಯಾಗಿ ನಡೆಸಲಾಯಿತು. ನಂದಿ ಜಾತ್ರೆಗೆ ಬರಲು ಜಿಲ್ಲೆಯ ವಿವಿಧ ತಾಲೂಕುಗಳಿಂದ ನಂದಿಗೆ ನೇರವಾಗಿ 150 ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯ ಕಲ್ಪಿಸಲಾಗಿತ್ತು.

ರಥೋತ್ಸವದ ಬಳಿಕ ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಸ್ಕೃತಿ ಸೌರಭ ಕಾರ್ಯಕ್ರಮ ಹಾಗೂ ಜಾತ್ರೆ ಪ್ರಮುಖ ಆಕರ್ಷಣೆಯಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳು ಜನಾಕರ್ಷಣೀಯವಾಗಿದ್ದವು. ಜಾತ್ರೆಗೆ ಸುತ್ತಮುತ್ತಲಿನ ಹಳ್ಳಿಗಳಿಂದ ಜನ ಎತ್ತಿನ ಬಂಡಿಗಳಲ್ಲಿ ಬಂದು ಪಾನಕ, ಮಜ್ಜಿಗೆ ವಿತರಿಸಿದರು. 

ಪ್ಲಾಸ್ಟಿಕ್‌ ನಿಷೇಧ ಮರೆತ ಆಡಳಿತ: ಕಳೆದ ವರ್ಷ ನಂದಿ ಜಾತ್ರೆಯಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿ ಜಾತ್ರೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದ ಜಿಲ್ಲಾಡಳಿತ ಈ ಬಾರಿ ಪ್ಲಾಸ್ಟಿಕ್‌ ನಿಷೇಧ ಬಗ್ಗೆ ಕಾಳಜಿ ತೋರದ ಕಾರಣ ಪ್ಲಾಸ್ಟಿಕ್‌ ಅಬ್ಬರ ಎಲ್ಲಿ ನೋಡಿದರೂ ಎದ್ದು ಕಾಣುತ್ತಿತ್ತು.

ಇನ್ನೂ ಸಂಪ್ರದಾಯದಂತೆ ಭೋಗನಂದೀಶ್ವರ ರಥೋತ್ಸವಕ್ಕೆ ಜಿಲ್ಲಾಧಿಕಾರಿಗಳು ಬಂದು ದೇವರ ದರ್ಶನ ಪಡೆಯುತ್ತಿದ್ದರು. ಆದರೆ ಜಿಲ್ಲೆಯ ಚುನಾವಣಾ ಅಧಿಕಾರಿ ಅನಿರುದ್ಧ್ ಶ್ರವಣ್‌ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಚುನಾವಣಾ ಒತ್ತಡತದಿಂದ ರಥೋತ್ಸವದಿಂದ ದೂರ ಉಳಿದಿದ್ದರು.

ಬಚ್ಚೇಗೌಡರಿಂದ ಮಜ್ಜಿಗೆ, ನೀರು ವಿತರಣೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿರುವ ಮಾಜಿ ಸಚಿವ ಹೊಸಕೋಟೆಯ ಬಿ.ಎನ್‌.ಬಚ್ಚೇಗೌಡ ನಂದಿ ಜಾತ್ರೆಯಲ್ಲಿ ಭಕ್ತರಿಗೆ ಉಚಿತವಾಗಿ ಕುಡಿಯುವ ನೀರು ಹಾಗೂ ಮಜ್ಜಿಗೆ ವಿತರಿಸಿ ಗಮನ ಸೆಳೆದರು. ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಜಾತ್ರೆಗೆ ಬಂದಿದ್ದ ಭಕ್ತರನ್ನು ಕರೆದು ಮಜ್ಜಿಗೆ ವಿತರಿಸಿದರು. ಬಚ್ಚೇಗೌಡರು ಭೋಗನಂದೀಶ್ವರನಿಗೆ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.