ಕೈಗಾರಿಕೆ ತಂದು 25 ಸಾವಿರ ಮಂದಿಗೆ ನೌಕರಿ ಕಲಿಸುವ


Team Udayavani, May 3, 2018, 2:16 PM IST

chikk.jpg

 ತಾವು ಕ್ಷೇತ್ರದ ಶಾಸಕರಾಗಿ 5 ವರ್ಷದಲ್ಲಿ ಭವಿಷ್ಯದ ಪೀಳಿಗೆ ಗುರುತಿಸುವಂತಹ ಅಭಿವೃದ್ಧಿ ಏನಾಗಿದೆ?
ಜಿಲ್ಲೆಗೆ ಮೆಡಿಕಲ್‌ ಕಾಲೇಜು ಮಂಜೂರಾಗಿರು ವುದು. ಮಹಿಳಾ ಪದವಿ ಕಾಲೇಜು ಮಂಜೂರಾಗಿ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಜಿಲ್ಲಾಸ್ಪತ್ರೆ, ಹೊಸ ಬಸ್‌ ನಿಲ್ದಾಣ, ತಾಯಿ ಮಕ್ಕಳ ಆಸ್ಪತ್ರೆ, ವಿಶೇಷವಾಗಿ ಮುದ್ದೇನಹಳ್ಳಿ ಸಮೀಪ ಸರ್‌ ಎಂವಿ ವಿಶ್ವೇಶ್ವರಯ್ಯ ಹೆಸರಿನಲ್ಲಿ ತಾಂತ್ರಿಕ ಶಿಕ್ಷಣ ಸಂಶೋಧನೆ ಕೇಂದ್ರ ನಿರ್ಮಾಣ, ಜಿಲ್ಲಾ ಕೇಂದ್ರಕ್ಕೆ 100 ಕೋಟಿ ರೂ.ಗೂ ಮೀರಿ ಅನುದಾನ ತಂದಿದ್ದೇನೆ.

 ಕ್ಷೇತ್ರದಲ್ಲಿ ಸತತ ಎರಡನೇ ಬಾರಿ ಶಾಸಕರಾಗಿ ಯಾರೂ ಪುನರಾಯ್ಕೆ ಆಗಿಲ್ಲ ಎಂಬ ಮಾತಿದೆ?
ಯಾರು ಅಭಿವೃದ್ಧಿ ಪರ ನಿಂತು ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದ್ದಾರೆ, ಅವರ ಕೈ ಹಿಡಿಯುತ್ತಾರೆ, ಅವರಿಗೆ ಪೂರ್ಣ ಬೆಂಬಲ ನೀಡಿ ಕ್ಷೇತ್ರದಲ್ಲಿರುವ ಇತಿಹಾಸವನ್ನು ಜನರೇ ಮುರಿಯುತ್ತಾರೆ ಎಂಬ ವಿಶ್ವಾಸವಿದೆ.

ಎರಡನೇ ಬಾರಿಗೆ ಶಾಸಕರಾದರೆ ಅಭಿವೃದ್ಧಿ ವಿಚಾರದಲ್ಲಿ ನಿಮ್ಮ ದೂರದೃಷ್ಟಿ ಏನು?
ಈ ಭಾಗಕ್ಕೆ ಶಾಶ್ವತ ನೀರಾವರಿ ಕಲ್ಪಿಸುವುದು, ಸದ್ಯ ಅನುಷ್ಠಾನದಲ್ಲಿರುವ ಎತ್ತಿನಹೊಳೆ ಯೋಜನೆಗೆ ಬೇಕಾದ ಅನುದಾನವನ್ನು ಬಿಡುಗೊಳಿಸಿ 2 ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಿ ಈ ಭಾಗಕ್ಕೆ ಕುಡಿಯುವ ನೀರು ಕಲ್ಪಿಸುವುದು ನನ್ನ ಆದ್ಯತೆ. 8 ತಿಂಗಳ ಒಳಗೆ ತಾಲೂಕಿನ 26 ಕೆರೆಗಳಿಗೆ ಸಂಸ್ಕರಿಸಿದ ಕೊಳಚೆ ನೀರು ಹರಿಸಿ ಈ ಭಾಗದಲ್ಲಿ ಅಂತರ್ಜಲ ವೃದ್ಧಿಸುವುದು, ಕ್ಷೇತ್ರದಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ ಕ್ಷೇತ್ರದಲ್ಲಿನ ಕನಿಷ್ಠ 25 ಸಾವಿರ ಯುವಕ, ಯುವತಿ ಯರಿಗೆ ಉದ್ಯೋಗ ಕಲ್ಪಿಸುವುದು ನನ್ನ ಗುರಿ.

 ತಾವು ಶಾಸಕರಾಗಿ ಕಳೆದ 5 ವರ್ಷಗಳ ಕ್ಷೇತ್ರದ ಅಭಿವೃದ್ಧಿ, ನಿಮ್ಮ ನಿರೀಕ್ಷೆಗಳ ಈಡೇರಿಕೆ ವಿಚಾರದಲ್ಲಿ ತೃಪ್ತಿ ತಂದಿದೆಯೆ?
ನನ್ನ ನಿರೀಕ್ಷೆಗಳು, ಕನಸುಗಳು ಸಾಕಷ್ಟಿವೆ. ಆದರೆ, ಸರ್ಕಾರದ ವಿಧಿ ವಿಧಾನಗಳು, ಅಧಿಕಾರಶಾಹಿ ಧೋರಣೆಯಿಂದ ಕೆಲವು ನಿಧಾನವಾಗಿವೆ. ಜತೆಗೆ ಐದು ವರ್ಷದಲ್ಲಿ ಎದುರಾದ ಹಲವು ಚುನಾವಣೆಗಳ ನೀತಿ ಸಂಹಿತೆಯಿಂದ ನಮಗೆ ಕೆಲಸ ಮಾಡಲು ಸಮಯ ಸಿಗಲಿಲ್ಲ. ಆದರೂ ನನ್ನ ಶಕ್ತಿ ಮೀರಿ ಅಭಿವೃದ್ಧಿಗೆ ಶ್ರಮಿಸಿದ್ದೇನೆಂಬ ಸಂತೃಪ್ತಿ ನನಗಿದೆ.

ಈ ಬಾರಿ ಚುನಾವಣೆಯಲ್ಲಿ ನಿಮ್ಮ ಗೆಲುವುಗೆ ಶ್ರೀರಕ್ಷೆ ಯಾವುದು? 
ಕ್ಷೇತ್ರದಲ್ಲಿ ಕಳೆದ 5 ವರ್ಷದಲ್ಲಿ ಆಗಿರುವ ಸಾವಿರಾರು ಕೋಟಿ ರೂ. ವೆಚ್ಚದ ಅಭಿವೃದ್ಧಿ, ಸಾಮಾಜಿಕ ನ್ಯಾಯದಡಿ ಆಡಳಿತ, ಮಹಿಳಾ ಸಬಲೀಕರಣ, ಯುವಕರ ಸಬಲೀಕರಣ, ಮುಖ್ಯವಾಗಿ ರೈತರಿಗೆ ನೀರು ತಂದುಕೊಡುವ
ಪ್ರಯತ್ನ ಹಾಗೂ ನಮ್ಮ ಕಾಂಗ್ರೆಸ್‌ ಸರ್ಕಾರದ ಐದು ವರ್ಷಗಳ ಜನಪರ ಆಡಳಿತ, ನುಡಿದಂತೆ ನಡೆದಿರುವುದು ನನಗೆ ಗೆಲುವು ತಂದುಕೊಡಲಿದೆ.

ನಿಮ್ಮ ಸರ್ಕಾರ ರೂಪಿಸಿರುವ ಸಂಸ್ಕರಿಸಿದ ತ್ಯಾಜ್ಯ ನೀರು ಯೋಜನೆ ಬಗ್ಗೆ ಸಾಕಷ್ಟು ವಿರೋಧ, ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ನಿಮ್ಮ ನಿಲುವು ಏನು?
ಸಂಸ್ಕರಿಸಿದ ಕೊಳಚೆ ನೀರಿನ ಬಗ್ಗೆ ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಎರಡು ಬಾರಿ ಅಲ್ಲ, ಮೂರು ಬಾರಿ ಬೇಕಾದರೂ ಕೊಳಚೆ ನೀರನ್ನು ಸಂಸ್ಕರಿಸಿ ಈ ಭಾಗಕ್ಕೆ ಹರಿಸುತ್ತೇವೆ. ಈ ವಿಚಾರದಲ್ಲಿ ಯಾರಿಗೂ ಅನುಮಾನ, ಗೊಂದಲ ಬೇಡ.

ಐದು ವರ್ಷಗಳ ನಿಮ್ಮ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಕೊಟ್ಟ ಒತ್ತು ಉದ್ಯೋಗಾವಕಾಶ ಒದಗಿಸುವಂತಹ ಕೈಗಾರಿಕೆಗಳ ಸ್ಥಾಪನೆಗೆ ನೀಡಲಿಲ್ಲ ಎಂಬ ಆರೋಪ ಇದೆ?
ಇದು ನಿಜ, ನಾನು ಒಪ್ಪಿಕೊಳ್ಳುತ್ತೇನೆ. ನೀರು ಇಲ್ಲದಿದ್ದರೆ ಯಾವ ಕೈಗಾರಿಕೆಗಳು ಬರಲ್ಲ ಎಂಬುದನ್ನು ವಿರೋಧ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು. ಹೀಗಾಗಿ ನನ್ನ ಮೊದಲ ಆದ್ಯತೆ ನೀರಾವರಿ. ನೀರು ಬಂದ ನಂತರ ಜಮೀನು ಗುರುತಿಸಿ ಕನಿಷ್ಠ ಕ್ಷೇತ್ರದ 25 ಸಾವಿರ ಮಂದಿಗೆ ಉದ್ಯೋಗ ಒದಗಿಸುವಂತಹ ಕೈಗಾರಿಕೆ ತರಲು ಪ್ರಯತ್ನಿಸುವೆ.

 ಕ್ಷೇತ್ರದಲ್ಲಿ ನಿಮ್ಮ ವಿರುದ್ಧ ನಿಮ್ಮ ವಿರೋಧಿಗಳು ಅನೇಕ ಅಪಾದನೆಗಳನ್ನು ಮಾಡುತ್ತಿದ್ದಾರೆ. ಇದು ಅವರ ಬಾಲಿಶತನದ ಪರಮಾವಧಿ, ಅವರ ಆರೋಪಗಳು ಸತ್ಯಕ್ಕೆ ದೂರ. ಆಧಾರ ರಹಿತ. ನನ್ನ ಜನಪ್ರಿಯತೆ, ಅವರ ಊಹೆಗೂ ಮೀರಿರುವುದದಿಂದ ಅದನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ.
 
ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಜನತೆಗೆ ಏನು ಹೇಳಕ್ಕೆ ಇಷ್ಟಪಡುತ್ತೀರಿ?
2013ರಲ್ಲಿ ನಾನೊಬ್ಬ ಯುವಕ ಅಂತ ಹೇಳಿ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರ ಆಶಯಗಳಿಗೆ ಚ್ಯುತಿ ಬಾರದಂತೆ ನನ್ನ ಶಕ್ತಿ ಮೀರಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಮುಂದಿನ 5 ವರ್ಷ ದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕನಸು ಹೊಂದಿದ್ದೇನೆ.

 ಕ್ಷೇತ್ರದಲ್ಲಿ ಈ ಬಾರಿ ನಡೆಯುತ್ತಿರುವ ಚುನಾವಣೆಯನ್ನು ಯಾವುದಕ್ಕೆ ಹೋಲಿಕೆ ಮಾಡುತ್ತಿರಿ? ಇದೊಂದು ಧರ್ಮಯುದ್ಧ ಅಂತ ಭಾವಿಸಿದ್ದೇನೆ. ಈ ಚುನಾವಣೆಯಲ್ಲಿ ನನ್ನ ಹೋರಾಟ ಭೂಗಳ್ಳರ, ಮದ್ಯದ ದೊರೆಗಳ ಹಾಗೂ ಜಾತಿವಾದಿಗಳ ವಿರುದ್ಧವಾಗಿದೆ. ನನ್ನ ಹೋರಾಟ ಜನಪರ ಹಾಗೂ ಸಾಮಾಜಿಕ ನ್ಯಾಯದ ಪರವಾಗಿದೆ. ಈ ವಿಚಾರದಲ್ಲಿ ರಾಜೀ ಇಲ್ಲದ ಹೋರಾಟ ಮಾಡುತ್ತೇನೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.