![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಾನೂನು ಯಾರ ಪೌರತ್ವ ಕಿತ್ತುಕೊಳ್ಳುವುದಿಲ್ಲ
Team Udayavani, Jan 2, 2020, 3:00 AM IST
![kanoonu-yara](https://www.udayavani.com/wp-content/uploads/2020/01/kanoonu-yara-620x406.jpg)
ಚಿಕ್ಕಬಳ್ಳಾಪುರ: ದೇಶದಲ್ಲಿರುವ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವ ದೃಷ್ಟಿಯಿಂದಲೇ ಕೇಂದ್ರ ಸರ್ಕಾರ ಪೌರತ್ವ ಕಾನೂನನ್ನು ಅನುಷ್ಠಾನಗೊಳಿಸಿದ್ದು, ತಿದ್ದುಪಡಿ ಕಾನೂನು ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಆದರೆ ಪೌರತ್ವ ವಿರೋಧಿಸಿ ನಡೆಯುತ್ತಿರುವ ಗಲಾಟೆ, ಗಲಭೆಗಳ ಹಿಂದೆ ಕಾಂಗ್ರೆಸ್ ಪಿತೂರಿ ಇದೆ ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರತ್ವ ಕಾನೂನಯಡಿ ಯಾರನ್ನು ದೇಶ ಬಿಟ್ಟು ಕಳುಹಿಸುವುದಿಲ್ಲ. ಇದರ ಬಗ್ಗೆ ಕಾಂಗ್ರೆಸ್, ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸುತ್ತಿದ್ದು, ಕಾಂಗ್ರೆಸ್ ನಾಯಕರ ಮಾತಿಗೆ ಯಾರು ಕಿವಿಗೂಡಬಾರದೆಂದು ಮನವಿ ಮಾಡಿದರು.
ಕಾಂಗ್ರೆಸ್ ಕೊಡುಗೆ ಏನು?: ಪೌರತ್ವದ ವಿಷಯ ನಿನ್ನೆ ಮೊನ್ನೆಯದ್ದಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಾಗನಿಂದಲೂ ಪೌರತ್ವದ ಬಗ್ಗೆ ಚರ್ಚೆ ಆಗುತ್ತಿದೆ. ದೇಶದಲ್ಲಿ ಎಲ್ಲ ಧರ್ಮಗಳು ಇದ್ದು, ಎಲ್ಲರಿಗೂ ಸಮಾನವಾದ ಹಕ್ಕು ಹಾಗೂ ಅವಕಾಶಗಳನ್ನು ನೀಡಲಾಗುತ್ತಿದೆ. ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಹಾಗೂ ದಲಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡು ಅವರನ್ನು ಕತ್ತಲಿನಲ್ಲಿಟ್ಟು ರಾಜಕೀಯ ಅಧಿಕಾರ ಪಡೆದಿದ್ದು ಬಿಟ್ಟರೆ ಅವರಿಗೆ ಯಾವುದೇ ಕೊಡುಗೆ ಕೊಟ್ಟಿಲ್ಲ ಎಂದರು.
ಯಾರ ಪೌರತ್ವಕ್ಕೂ ಧಕ್ಕೆ ಬರುವುದಿಲ್ಲ: ಅಲ್ಪಸಂಖ್ಯಾತರ ಹಾಗೂ ದಲಿತರು ಇಲ್ಲದೇ ಹೋಗಿದ್ದರೆ ದೇಶದಲ್ಲಿ ಕಾಂಗ್ರೆಸ್ ಹೆಸರು ಹೇಳುವವರೇ ಇರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಪ್ರಧಾನಿ ನರೇಂದ್ರ ಮೋದಿ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುವ ಉದ್ದೇಶಿಸಿ ದಶಕಗಳಿಂದ ಸಮಸ್ಯೆಗೆ ಪರಿಹಾರ ಕಾಣದೇ ಇರುವ ಪೌರತ್ವ ಕಾನೂನುಗೆ ತಿದ್ದುಪಡಿ ತಂದಿದ್ದಾರೆ. ಇದರಿಂದ ಯಾರ ಪೌರತ್ವಕ್ಕೂ ಧಕ್ಕೆ ಬರುವುದಿಲ್ಲ. ಯಾರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗಲಭೆ ಸೃಷ್ಟಿಸದಿರಿ: ಬಿಜೆಪಿ ಪಕ್ಷಕ್ಕೆ ದೇಶ ಮೊದಲು. ಆನಂತರ ಪಕ್ಷ, ಆದರೆ ಕಾಂಗ್ರೆಸ್ಗೆ ದೇಶಕ್ಕಿಂತ ಮೊದಲು ಅಧಿಕಾರ ಬೇಕು. ಆ ಕಾರಣಕ್ಕಾಗಿ ದೇಶದ ಭದ್ರತೆ ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡಲು ರೂಪಿಸಿರುವ ಸಿಎಎ ವಿರುದ್ಧ ಜನರನ್ನು ಎತ್ತಿಕಟ್ಟಿ ಹೋರಾಟಕ್ಕೆ ಇಳಿಸುವ ಮೂಲಕ ದೇಶದಲ್ಲಿ ಗಲಭೆಗಳನ್ನು ಸೃಷ್ಟಿಸಿ ಆಶಾಂತಿ ಮೂಡಿಸುತ್ತಿದೆ ಎಂದರು.
ಮಾಜಿ ಶಾಸಕ ಎಂ.ಶಿವನಾಂದ್, ಬಿಜೆಪಿ ತಾಲೂಕು ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ಕಾರ್ಯದರ್ಶಿ ಕೇತೇನಹಳ್ಳಿ ಕೃಷ್ಣಾರೆಡ್ಡಿ, ನಗರ ಘಟಕ ಅಧ್ಯಕ್ಷ ಮಂಜುನಾಥ, ಮುಖಂಡರಾದ ಎ.ವಿ.ಬೈರೇಗೌಡ, ಲಕ್ಷ್ಮೀಪತಿ, ಹನುಮಂತಪ್ಪ, ಆರ್.ಶ್ರೀನಿವಾಸ್, ರಾಮಣ್ಣ, ಕಳವಾರ ಶ್ರೀಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾಂಗ್ರೆಸ್ ನಾಯಕರ ತಲೆಯಲ್ಲಿ ಜ್ಞಾನ ಇಲ್ಲ. ಏನೇ ಹೇಳಿದರೂ ಅವರ ತಲೆಗೆ ಹತ್ತಲ್ಲ. ಆ ಕಾರಣಕ್ಕಾಗಿ ಅವರಿಗೆ ಎನ್ಆರ್ಸಿ, ಸಿಇಇ ಬಗ್ಗೆ ಅರ್ಥ ಆಗುತ್ತಿಲ್ಲ. ದೇಶದ ಅಲ್ಪಸಂಖ್ಯಾತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಎಂದಿಗೂ ಬಿಜೆಪಿ ಮಾಡುವುದಿಲ್ಲ. ಪಾಕಿಸ್ತಾನ, ಬಾಂಗ್ಲದೇಶ ಹೊಸದಾಗಿ ರಚನೆಯಾದಾಗ ದೇಶದಿಂದ ಹೋಗದ ಮುಸ್ಲಿಂರನ್ನು ನಾವು ಈಗ ಹೊರ ಕಳುಹಿಸಲು ಸಾಧ್ಯವೇ? ಅಲ್ಪಸಂಖ್ಯಾತರ ರಕ್ಷಣೆಗಾಗಿಯೆ ಕೇಂದ್ರ ಸರ್ಕಾರ ಪೌರತ್ವ ಕಾನೂನು ತಂದಿದೆ.
-ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.