ಜೆಡಿಎಸ್ ಕಾರ್ಯಕರ್ತನ ಕೊಲೆ
Team Udayavani, Apr 28, 2018, 7:20 AM IST
ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಕಾವು ಏರತೊಡಗಿದಂತೆ, ಜಿಲ್ಲೆಯಲ್ಲಿ ರಾಜಕೀಯ ಹಿಂಸಾಚಾರದಿಂದಾಗಿ ಜೆಡಿಎಸ್ ಕಾರ್ಯಕರ್ತರೊಬ್ಬರ ಕೊಲೆ ನಡೆದಿದೆ.
ಜಿಲ್ಲೆಯ ಗೌರಿಬಿದನೂರಿನ ಕೋಟಾಲದಿನ್ನೆಯ ಬಳಿ ಇರುವ ಬಾರ್ವೊಂದರಲ್ಲಿ ಗುರುವಾರ ತಡರಾತ್ರಿ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ (27) ಎಂಬಾತನನ್ನು ಕಾಂಗ್ರೆಸ್ ಬೆಂಬಲಿತ ರೌಡಿ ಶೀಟರ್ ರಮೇಶ್ ಹಾಗೂ ಆತನ ಬೆಂಬಲಿಗರು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ.
ರಾಮರೆಡ್ಡಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಮೇಶ್, ತನ್ನ ಸಹಚರರೊಂದಿಗೆ ಹತ್ಯೆ ಮಾಡಿದ್ದಾನೆ. ದುರದೃಷ್ಟವೆಂದರೆ, ಮೇ 6ಕ್ಕೆ ರಾಮರೆಡ್ಡಿ ಮದುವೆ ನಡೆಯಬೇಕಿತ್ತು. ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಆಗಮಿಸಿ, ರಾಮರೆಡ್ಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೆ ಘಟನೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.