ಆರ್ಥಿಕ ಸ್ಥಿತಿ ಆಧೋಗತಿಗೆ ಕೃಷಿ ನಿರ್ಲಕ್ಷ್ಯ ಕಾರಣ


Team Udayavani, Nov 12, 2019, 3:00 AM IST

arhika-stiti

ಚಿಕ್ಕಬಳ್ಳಾಪುರ: ದೇಶ‌ದಲ್ಲಿ ಹೇರಳವಾಗಿ ಉದ್ಯೋಗಾವಕಾಶ ಸೃಷ್ಟಿಸುವ ಬಹುದೊಡ್ಡ ಕ್ಷೇತ್ರವಾದ ಕೃಷಿ ರಂಗವನ್ನು ಇಂದು ಆಳುವ ಸರ್ಕಾರಗಳು ಸಂಪೂರ್ಣ ನಿರ್ಲಕ್ಷ್ಯಿಸುತ್ತಿರುವ ಪರಿಣಾಮ ದೇಶದ ಇಂದಿನ ಆರ್ಥಿಕ, ಸಾಮಾಜಿಕ ಅಧೋಗತಿಗೆ ಕಾರಣವಾಗಿ ನಿರುದ್ಯೋಗ, ಬಡತನ, ಹಸಿವು, ಅಸಮಾನತೆ ಮುಂದುವರಿದಿದೆ ಎಂದು ಸುಪ್ರೀಂಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ ತಿಳಿಸಿದರು.

ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ದಶಮಾನೋತ್ಸವದ ಪ್ರಯುಕ್ತ ನಗರದ ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯದ ಸಹಯೋಗದೊಂದಿಗೆ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಲಾಗಿದ್ದ “ರೈತಪರ ಕಾನೂನುಗಳ ಸಂರಕ್ಷಣೆ’ ಕುರಿತಾದ ವಿಚಾರ ಸಂಕಿರಣದಲ್ಲಿ ವಿಷಯ ಮಂಡಿಸಿದರು.

ದಿವಾಳಿಯತ್ತ: ಕೃಷಿ ಎಂದರೆ ಕೇವಲ ರಾಗಿ, ನವಣೆ, ಭತ್ತ ಬೆಳೆಯುವುದಲ್ಲ. ಕೃಷಿ ವ್ಯಾಪ್ತಿಗೆ ಹೈನುಗಾರಿಕೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸೇರುತ್ತದೆ. ಆದರೆ ಸರ್ಕಾರಗಳು ಕೃಷಿಗೆ ಹೆಚ್ಚಿನ ಆದ್ಯತೆ ಕೊಡುತ್ತಿಲ್ಲ. ಭೂ ಅಭಿವೃದ್ಧಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಎಲ್ಲವನ್ನೂ ವಿದೇಶಿ ಬಹುರಾಷ್ಟ್ರೀಯ ಕಂಪನಿಗಳ ಕೇಂದ್ರೀಕೃತವಾದ ಕೃಷಿ ಪದ್ಧತಿಗಳನ್ನು ರೂಪಿಸುತ್ತಿರುವುದರಿಂದ ದೇಶ ಕೃಷಿ ಕ್ಷೇತ್ರ ದಿವಾಳಿಯತ್ತ ಸಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಧ್ವನಿ ಎತ್ತುವವರೇ ಇಲ್ಲ: ರೈತರ, ಕೃಷಿಕೂಲಿಕಾರರ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವವರು ಇಂದು ದೇಶದ ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಇಲ್ಲ. ಪರಿಣಾಮ ದೇಶದ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಸಿಗದೇ ಅವಸಾನದ ಅಂಚಿಗೆ ಬಂದು ತಲುಪಿದೆ. ದೇಶದ ಕೃಷಿ ಭೂಮಿ ದಿನೇ ದಿನೇ ಕಡಿಮೆಯಾಗುತ್ತಿದ್ದು ಭಾರತ ಭವಿಷ್ಯದ ದಿನಗಳಲ್ಲಿ ತೀವ್ರ ಆಹಾರದ ಸಮಸ್ಯೆ ಎದುರಿಸಲಿದೆ ಎಂದು ತಿಳಿಸಿದರು.

ವೈಜ್ಞಾನಿಕ ಬೆಲೆ ಇಲ್ಲ: ದೇಶದಲ್ಲಿ ಕೈಗಾರಿಕೆಗಳಲ್ಲಿ ಉತ್ಪಾದಿಸುವ ಪ್ರತಿ ವಸ್ತುವಿಗೆ ನಿಗದಿತ ಬೆಲೆ ಇದೆ. ಆದರೆ ಲಕ್ಷಾಂತರ ರೂ, ಸಾಲ ಮಾಡಿ ಬಿತ್ತನೆ ಬೀಜ, ರಸಗೊಬ್ಬರ ಖರೀದಿ ಮಾಡಿ ಬೆಳೆ ತೆಗೆಯುವ ರೈತನ ಬೆಳೆಗೆ‌ ಬೆಲೆಗೆ ಮಾರುಕಟ್ಟೆಯಲ್ಲಿ ಇಂದಿಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ಕುಲಪತಿ ಡಾ.ಪಿ.ಈಶ್ವರಭಟ್‌ ಮಾತನಾಡಿ, ರಾಜ್ಯ ಕಾನೂನು ಮಹಾ ವಿದ್ಯಾಲಯಕ್ಕೆ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ದಶಮಾನೋತ್ಸವ ಮೂಲಕ ಕಾನೂನು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆ ಹೆಚ್ಚಿಸಲು ವಿವಿಧ ವಿಷಯಗಳ ಕುರಿತು ಚರ್ಚೆ, ಸಂವಾದ, ಚಿಂತನ, ಮಂಥನ ರೂಪಿಸಲಾಗುತ್ತಿದೆ. ಈ ಮೂಲಕ ಖ್ಯಾತ ನ್ಯಾಯಮೂರ್ತಿಗಳನ್ನು ಹಾಗೂ ನ್ಯಾಯವಾದಿಗಳನ್ನು ನಾಡಿಗೆ ಪರಿಚಯಿಸುವ ಕೆಲಸ ಮಾಡುತ್ತಿದೆ ಎಂದರು.

ವೇದಿಕೆಯಲ್ಲಿ ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲೆ ಪ್ರೊ.ಬಿ.ಜಿ.ಶೋಭಾ, ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎ.ಮೋಹನ್‌, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಆರ್‌.ನಾರಾಯಣಸ್ವಾಮಿ, ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ್‌, ಆರ್‌.ಶ್ರೀನಿವಾಸ್‌, ಕೆಂಪೇಗೌಡ ಕಾನೂನು ಮಹಾ ವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು ಇದ್ದರು.

ರೈತನ ಬೆನ್ನುಮೂಳೆ ಮುರಿಯುವ ಕೆಲಸ: ರೈತರಿಗೆ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಸಮಾನ ಅವಕಾಶ ಕಲ್ಪಿಸುವ ಕೆಲಸವನ್ನು ಕೇಂದ್ರ, ರಾಜ್ಯ ಸರ್ಕಾರಗಳು ಮಾಡಬೇಕು. ಆದರೆ, ದೇಶದ ಬೆನ್ನಲುಬು ರೈತ ಎಂದು ಹೇಳಿಕೊಂಡು ರೈತನ ಬೆನ್ನುಮೂಳೆ ಮುರಿಯುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ.

ದೇಶದಲ್ಲಿ ಇಂದಿಗೂ ಸಮಾನವಾಗಿ ಭೂಮಿ ಹಂಚಿಕೆ ಮಾಡಿಲ್ಲ. ಕೃಷಿಗೆ ಬೇಕಾದ ಗುಣಮಟ್ಟದ ಬಿತ್ತನೆ ಬೀಜ. ರಸಗೊಬ್ಬರ, ನೀರಾವರಿ, ವಿದ್ಯುತ್‌ ಮತ್ತಿತರ ಮೂಲ ಸೌಕರ್ಯ ಕಲ್ಪಿಸುತ್ತಿಲ್ಲ. ದೇಶದಲ್ಲಿ ಹೊಸ ಆರ್ಥಿಕ ನೀತಿಗಳ ಜಾರಿ ಪರಿಣಾಮ ಕೃಷಿ ರಂಗದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಿವೆ ಎಂದು ಸುಪ್ರೀಂಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ ಕಳವಳ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.