ಕೋವಿಡ್ 19 ವಿರುದ್ಧ ದಾದಿಯರ ಸೇವೆ ಅನನ್ಯ
Team Udayavani, May 13, 2020, 11:07 AM IST
ಚಿಕ್ಕಬಳ್ಳಾಪುರ: ಜಾಗತಿಕವಾಗಿ ಮಾನವ ಸಮುದಾಯವನ್ನು ಬೆಚ್ಚಿ ಬೀಳಿಸುತ್ತಿರುವ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಎಲ್ಲ ವರ್ಗಗಳಿಗಿಂತ ದಾದಿಯರ ಸೇವೆ ಇಡೀ ಮನುಕುಲಕ್ಕೆ ಮಾದರಿ ಹಾಗೂ ಆದರ್ಶವಾದದ್ದು ಎಂದು ಕೋವಿಡ್-19 ನಿಯಂತ್ರಣದ ವಿಶೇಷ ನೋಡಲ್ ಅಧಿಕಾರಿ ಭಾಸ್ಕರ್ ತಿಳಿಸಿದರು.
ನಗರದ ಜಿಲ್ಲಾಸ್ಪತ್ರೆ ಹಾಗೂ ಕೋವಿಡ್-19 ಐಸೋಲೇಷನ್ ಯಲ್ಲಿ ಮಂಗಳವಾರ ವಿಶ್ವ ದಾದಿಯರ ದಿನಾಚರಣೆ ಪ್ರಯುಕ್ತ ಕೋವಿಡ್-19 ಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಹಿರಿಯ ಮಹಿಳಾ ಆರೋಗ್ಯ ಸಹಾಯಕರಿಗೆ ಹಾಗೂ ಶುಶ್ರೂಷಕಿಯರಿಗೆ ಮಾಸ್ಕ್ ಹಾಗೂ ಸಿಹಿ ವಿತರಿಸಿ ಅವರು ಮಾತನಾಡಿದರು.
2020 ವರ್ಷದಲ್ಲಿ ಮಾನವ ಕುಲದ ಉಳಿವಿಗಾಗಿ ಹೋರಾಡುತ್ತಿರುವ ವೈದ್ಯರ ಜೊತೆಗೆ ದಾದಿಯರ ಪರಿಶ್ರಮ ಹೆಚ್ಚು ಮಹತ್ವ ಪಡೆದುಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲಿ ದಾದಿಯರು ವಿಶೇಷ ಛಾಪೂ ಮೂಡಿಸುವ ಕೆಲಸ ಮಾಡಿದ್ದಾರೆ.
ಅವರನ್ನು ಪ್ರತಿಯೊಬ್ಬರು ಗೌರವಿಸಬೇಕು. ಆದರೆ ಇತ್ತೀಚೆಗೆ ವೈದ್ಯರು ಮತ್ತು ಶುಶ್ರೂಷಕಿಯರ ಮೇಲೆ ಹಲ್ಲೆ ನಡೆಯುತ್ತಿರುವುದು ದುರದೃಷ್ಟಕರ ಎಂದರು.ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೋವಿಡ್ 19 ಸೋಂಕು ತಡೆಗೆ ವೈದ್ಯರು, ಶುಶ್ರೂಷಕಿಯರು ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ವಿಷ್ಣುಪ್ರಿಯ ಶಿಕ್ಷಣ ಸಂಸ್ಥೆ ವತಿಯಿಂದ ಎಲ್ಲ ಶುಶ್ರೂಕಿಯರಿಗೆ ಸಿಹಿ ಹಾಗೂ ಮಾಸ್ಕ್ ವಿತರಿಸಲಾಯಿತು. ತಹಶೀಲ್ದಾರ್ ನಾಗಪ್ರಶಾಂತ್, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ರಮೇಶ್, ವಿಷ್ಣುಪ್ರಿಯ ಕಾಲೇಜಿನ ಅಧ್ಯಕ್ಷ ರಾಮಚಂದ್ರರರೆಡ್ಡಿ, ವಿದ್ಯಾರ್ಥಿ ಮುಖಂಡ ಎನ್.ಮಂಜುನಾಥರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ