ಸಮಾಜ ಸುಧಾರಕರ ತತ್ವಾದರ್ಶ ಪಾಲಿಸಿ


Team Udayavani, Feb 17, 2020, 3:00 AM IST

samaja-sudha

ಚಿಕ್ಕಬಳ್ಳಾಪುರ: ಸಂತ ಶ್ರೀ ಸೇವಾಲಾಲ್‌ರವರ ಹಿತೋಪದೇಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದ ಏಳಿಗೆಗೆ ಶ್ರಮಿಸಬೇಕು ಎಂದು ಚಿಕ್ಕಬಳ್ಳಾಪುರ ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಹೇಳಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್‌ ಜಯಂತಿಯಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಸೇವೆ ಸಲ್ಲಿಸಿದಂತಹ ಸುಧಾರಕರ ಜಯಂತಿಗಳನ್ನು ಸರ್ಕಾರವು ಆಚರಿಸಿಕೊಂಡು ಬರುತ್ತಿದ್ದು, ಅಂತಹವರಲ್ಲಿ ಸಂತ ಸೇವಾಲಾಲ್‌ರವರು ಒಬ್ಬರಾಗಿದ್ದಾರೆ. ಸಮಾಜದಲ್ಲಿ ಹಿಂದುಳಿದ ಲಂಬಾಣಿಯವರ ಏಳಿಗೆಯನ್ನೇ ಅಲ್ಲದೇ ಎಲ್ಲರ ಒಳಿತಿಗಾಗಿ ಹೋರಾಡಿದ್ದಾರೆ ಎಂದರು.

ಮುಖ್ಯವಾಹಿನಿಗೆ ತರಬೇಕು: ರೋಣೂರಿನ ಸರ್ಕಾರಿ ಫ್ರೌಢ ಶಾಲೆಯ ಸಹ ಶಿಕ್ಷಕರಾದ ಟಿ.ವೆಂಕಟರಮಣನಾಯಕ್‌ ವಿಶೇಷ ಉಪನ್ಯಾಸ ನೀಡಿ, ತಾಂಡ ಅಥವಾ ಲಂಬಾಣಿ ಎಂದು ಕರೆಯಲ್ಪಡುವ ಇವರು ವಿಭಿನ್ನ ವೇಷಭೂಷಣಗಳೊಂದಿಗೆ ಸಂಸೃತಿಯನ್ನು ಒಳಗೊಂಡ ಒಂದು ಪಂಗಡದವರಾಗಿದ್ದು, ಸಮಾಜದ ಮುಖ್ಯವಾಹಿನಿಗೆ ತರುವ ಕಾರ್ಯವಾಗಬೇಕಾಗಿದೆ ಎಂದರು.

ಕಂದಾಯ ನೀತಿ ವಿರುದ್ಧ ಹೋರಾಟ: ಸಂತ ಸೇವಾಲಾಲರು ಕೇವಲ ಸಮುದಾಯಕ್ಕೆ ಸೀಮಿತರಾಗದೆ, ಟಿಪ್ಪುಸಲ್ತಾನ್‌ ಕಾಲದಲ್ಲಿನ ಸ್ವಾತಂತ್ರ ಹೋರಾಟಗಾರರು ಹಾಗೂ “ಬ್ರಿಟೀಷ್‌ ಕಂದಾಯ ನೀತಿಯ ವಿರುದ್ಧ ಹೋರಾಡಿದ ವ್ಯಕಿ ಆಗಿರುವುದು ವಿಶೇಷ. ಲಂಬಾಣಿ ಜನಪದದಲ್ಲಿ ಶ್ರೀಮಂತ ಸಂಸೃತಿಯನ್ನು ಹೊರತರುವ ಕೆಲಸ ಮಾಡಿದ್ದಾರೆ ಎಂದರು. ಭೀಮಾನಾಯಕ್‌ ಮತ್ತು ಧರ್ಮಿಣಿ ಬಾಯಿಯವರಿಗೆ 14 ವರ್ಷಗಳ ನಂತರ ಹುಟ್ಟಿದ ಮಗುವೇ ಸಂತ ಶ್ರೀಸೇವಾಲಾಲ್‌.

ಸಮುದಾಯದ ಲಾವಣಿಗಳಲ್ಲಿ ಇವರಿಗೆ ವಿಶಿಷ್ಟ ಸ್ಥಾನವನ್ನು ನೀಡಿದ್ದರು. ಶಿಕ್ಷಣದ ಬಗ್ಗೆಯೂ ಕಾಳಜಿ ಹೊಂದಿದವರಾಗಿದ್ದು, ಶಿಕ್ಷಣ ಪಡೆದವರು ರಾಜ್ಯಭಾರ ಮಾಡುತ್ತಾರೆ. ವಿದ್ಯೆ ಪಡೆದವರಿಗೆ ಸಿಗುವುದು ತುಪ್ಪದ ಬಟ್ಟಲು ಎಂದಿದ್ದರು. ಸೇವಾಲಾಲ್‌ರವರು ಜನರನ್ನು ಕುರಿತು ತಮ್ಮ ಕಡಿಗಳಲ್ಲಿ(ಲಾವಣಿ) ಉತ್ತಮವಾಗಿ ಆಲಿಸು, ಆಲಿಸದ್ದನ್ನು ಶೋಧಿಸು, ಶೋಧಿಸಿದರಲ್ಲಿ ಉತ್ತಮವಾದುದನ್ನು ಅಳವಡಿಸಿಕೊಳ್ಳಿ. ಆಗ ಮಾತ್ರ ಸಮಾಜದ ಏಳಿಗೆ ಸಾಧ್ಯ.

ಯಾರಿಗೂ ನೀವು ದುಃಖ ನೀಡಬೇಡಿ- ನಮ್ಮ ಬದುಕಿಗೆ ನಾವೇ ಯಜಮಾನರಾದಾಗ ಮಾತ್ರ ಅಭಿವೃದ್ಧಿ ಕಾಣಬಹುದಾಗಿದೆ ಎಂಬ ಸಂದೇಶವನ್ನು ಸಾರಿದ್ದರು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು. ಕನ್ನಡ ಮತ್ತು ಸಂಸೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ.ರವಿಕುಮಾರ್‌, ಶಿಡ್ಲಘಟ್ಟದ ವೈದ್ಯಾಧಿಕಾರಿಗಳಾದ ಮಂಜಾನಾಯಕ್‌, ಗ್ರಾಮ ಪಂಚಾಯಿತಿ ಸದಸ್ಯರಾದ ಭೀಮಾನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.