ವೃದ್ಧೆಗೆ ಪ್ಲಾಸ್ಟಿಕ್‌ ನೋಟು ನೀಡಿ ಟಗರು ಖರೀದಿಸಿದ ಕಳ್ಳರು


Team Udayavani, Feb 7, 2019, 10:51 AM IST

chikk-b.jpg

ಚಿಕ್ಕಬಳ್ಳಾಪುರ: ಜೀವನಧಾರಕ್ಕೆ ಕುರಿ ಮೇಯಿ ಸುತ್ತಿದ್ದ ವೃದ್ಧೆಯ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು ವೃದ್ಧೆಗೆ ಎರಡು ಸಾವಿರ ರೂ.ಬೆಲೆಯ ಪ್ಲಾಸ್ಟಿಕ್‌ ನೋಟುಗಳನ್ನು ಕೊಟ್ಟು ಬೆಲೆ ಬಾಳುವ ಟಗರು ಪಡೆದು ವಂಚಿಸಿರುವ ಘಟನೆ ತಾಲೂಕಿನ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ನಾಯನಹಳ್ಳಿಯಲ್ಲಿ ನಡೆದಿದೆ.

ಆಗಿದ್ದೇನು?: ಗ್ರಾಮದ ಕದಿರಮ್ಮ ಹೊರ ವಲಯದಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿದ್ದ ಇಬ್ಬರು ಯುವಕರು ಬೈಕ್‌ನಲ್ಲಿ ಸ್ಥಳಕ್ಕೆ ಬಂದು ಟಗರನ್ನು ಖರೀದಿಗೆ ಕೇಳಿದ್ದಾರೆ. ಈ ವೇಳೆ ಕದಿರಮ್ಮ ಟಗರಿನ ಬೆಲೆ 3 ಸಾವಿರ ರೂ. ಎಂದು ಹೇಳಿದ್ದಾರೆ. ಆದರೆ ಖದೀಮರು ಟಗರಿಗೆ ಆರು ಸಾವಿರ ರೂ. ಬೆಲೆ ನೀಡುವುದಾಗಿ ಹೇಳಿ ಆಕೆಗೆ ಪ್ಲಾಸ್ಟಿಕ್‌ ಮಾದರಿ ಎರಡು ಸಾವಿರ ರೂ. ನೋಟುಗಳನ್ನು ಹೋಲುವ 5 ನೋಟುಗಳನ್ನು ನೀಡಿ ಟಗರು ಪಡೆದು ಕ್ಷರ್ಣಾದಲ್ಲಿ ಪರಾರಿ ಯಾಗಿದ್ದಾರೆ.

ಬೆಳಕಿಗೆ ಬಂದಿದ್ದು ಹೇಗೆ?: ಕುರಿ ಮಾರಾಟದ ವಿಚಾರ ಮನೆಯಲ್ಲಿ ಮಕ್ಕಳಿಗೆ ಗೊತ್ತಾದರೆ ಬೈಯುತ್ತಾರೆಂದು ಹೇಳಿ ಕದಿರಮ್ಮ ಖದೀಮರು ಕೊಟ್ಟಿದ್ದ ನಕಲಿ ನೋಟಗಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ. ಬುಧವಾರ ರಾತ್ರಿ ತನ್ನ ಅಣ್ಣನಿಗೆ ಹುಷಾರಿಲ್ಲದ್ದನ್ನು ತಿಳಿದ ಕದಿರಮ್ಮ ಆಸ್ಪತ್ರೆಗೆ ಹೋಗಲು ಹಣ ಕೊಡೋಣ ಎಂದು ಪಕ್ಕದ ಮನೆಯವರ ಬಳಿ ಎರಡು ಸಾವಿರ ರೂ.ಗೆ ಚಿಲ್ಲರೆ ಕೇಳಿದ್ದಾರೆ. ಈ ವೇಳೆ ಅದು ನಕಲಿ ನೋಟು ಎಂಬುದು ಗೊತ್ತಾಗಿದೆ.

ಕಣ್ಣೀರಿಟ್ಟ ಕದಿರಮ್ಮ: ಬಡತನದಲ್ಲಿ ಬೇಯುತ್ತಿರುವ ಕದಿರಮ್ಮಗೆ ಅಪರಿಚಿತ ಕಳ್ಳರು ಮಾಡಿರುವ ಮೋಸಕ್ಕೆ ಕಣ್ಣೀರು ಹಾಕಿದ್ದಾಳೆ. ಇತ್ತೀಚೆಗೆ ಗ್ರಾಮಾಂತರ ಪ್ರದೇಶದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಕಳ್ಳರು ಗ್ರಾಮೀಣ ಪ್ರದೇಶದಲ್ಲಿ ಒಂಟಿಯಾಗಿ ಕುರಿ, ಮೇಕೆಗಳನ್ನು ಮೇಯಿಸುವ ಅಮಾಯಕರನ್ನು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.