ಹಾಲಿನ ದರ ಹೆಚ್ಚಿಸಲು ಆಗ್ರಹ
Team Udayavani, Sep 6, 2020, 1:30 PM IST
ಬಾಗೇಪಲ್ಲಿ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹಣ್ಣು ಮತ್ತು ತರಕಾರಿಗಳ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಶಾಖೆ ಆಶ್ರಯದಲ್ಲಿ ಶನಿವಾರ ತಾಪಂ ಕಚೇರಿ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಹಾಗೂ ಸಿಪಿಎಂ ಮುಖಂಡ ಡಾ.ಅನಿಲ್ ಕುಮಾರ್ ಅವುಲಪ್ಪ ಮಾತನಾಡಿ, ಹಾಲಿನ ದರ ಹೆಚ್ಚಿಸಬೇಕು, ಪಶು ಆಹಾರ ರಿಯಾಯಿತಿ ದರದಲ್ಲಿ ನೀಡಬೇಕು, ಡಾ.ಸ್ವಾಮಿನಾಥನ್ ವರದಿ ಅನ್ವಯ ಎಲ್ಲಾ ಕೃಷಿ ಪರ್ದಾಥಗಳ ಬೆಲೆ ನಿಗದಿ ಮಾಡಬೇಕು ಎಂದರು.
ವೇತನ ಬಿಡುಗಡೆಗೆ ಆಗ್ರಹ: ಅಕ್ಷರ ದಾಸೋಹ ನೌಕರರಿಗೆ ಆರು ತಿಂಗಳಿನಿಂದ ವೇತನ ಪಾವತಿ ಮಾಡಿಲ್ಲ. ರಾಜ್ಯ ಸರ್ಕಾರ 3 ತಿಂಗಳ ವೇತನ ಮಾತ್ರ ಬಿಡುಗಡೆ ಮಾಡಿದೆ. ಉಳಿದ ತಿಂಗಳುಗಳ ಹಣ ಕೂಡಲೇ ಬಿಡುಗಡೆ ಮಾಡಬೇಕು. ಗ್ರಾಪಂ ನೌಕರರಿಗೆ 13 ತಿಂಗಳ ವೇತನ ನೀಡದಿರುವುದರಿಂದ ಕುಟುಂಬ ಪೋಷಣೆಗೆತುಂಬ ತೊಂದರೆಯಾಗಿದ್ದು, ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ತಹಶೀಲ್ದಾರ್ ಎಂ.ನಾಗರಾಜ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ಕೆಪಿಆರ್ಸ್ನ ತಾಲೂಕು ಅಧ್ಯಕ್ಷ ಪಿ.ಮಂಜುನಾಥರೆಡ್ಡಿ, ಕಾರ್ಯದರ್ಶಿ ಎ.ಎನ್. ಶ್ರೀರಾಮಪ್ಪ, ರಾಜ್ಯ ಕೃಷಿ ಕೂಲಿ ಕಾರರ ಸಂಘದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ಸಹ ಕಾರ್ಯದರ್ಶಿ ಕೆ. ನಾಗರಾಜು, ಸಿಐಟಿಯು ತಾಲೂಕು ಅಧ್ಯಕ್ಷ ಬಿ. ಆಂಜನೇಯರೆಡ್ಡಿ, ಕಾರ್ಯದರ್ಶಿ ಜಿ.ಮುಸ್ತಾಫ್, ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಮಿತಿ ಸದಸ್ಯೆ ಬಿ.ಸಾವಿತ್ರಮ್ಮ, ತಾಲೂಕು ಸಿಪಿಎಂ ಮಾಜಿ ಕಾರ್ಯದರ್ಶಿ ಎಂ.ಎನ್. ರಘುರಾಮರೆಡ್ಡಿ ಹಾಗೂ ಶಿವಶಂಕರರೆಡ್ಡಿ, ಅಮರಾವತಿ, ಗೋವಿಂದಮ್ಮ, ಮುನಿಲಕ್ಷ್ಮಮ್ಮ, ಮುನಿಯಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ