ಶೀಘ್ರದಲ್ಲೇ ಕೆರೆಗಳ ಕಾಮಗಾರಿ ಪೂರ್ಣ


Team Udayavani, Jan 21, 2023, 4:32 PM IST

ಶೀಘ್ರದಲ್ಲೇ ಕೆರೆಗಳ ಕಾಮಗಾರಿ ಪೂರ್ಣ

ಗೌರಿಬಿದನೂರು: ತಾಲೂಕಿನ ವಿವಿಧ ಕೆರೆಗಳ ಅಭಿವೃದ್ಧಿಗೆ ಸರ್ಕಾರದಿಂದ 2.95 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಕೆರೆ ಗಳ ಅಭಿವೃದ್ಧಿಯನ್ನು ಪೂರೈಸಲಾಗುವುದು ಎಂದು ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿ ಹೇಳಿದರು.

ತಾಲೂಕಿನ ಕಲ್ಲೂಡಿ ಗ್ರಾಮದ ಕೆರೆ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಮಳೆಗಾಲದಲ್ಲಿ ಮಳೆ ಹೆಚ್ಚು ಸುರಿದ ಪರಿಣಾಮ ತಾಲೂಕಿನ ಕಲ್ಲೂಡಿ, ಕೆಂಕರೆ ಮ್ಯಾಳ್ಯ ಕೆರೆಗಳ ಕಟ್ಟೆಗಳು ಒಡೆದು ನೀರಿಲ್ಲ ಸೋಲಾಗಿ, ಬೆಳೆಗಳು ಜಲಾವೃತಗೊಂಡು ರೈತರು ಅಪಾರ ನಷ್ಟ ಅನುಭವಿಸುವಂತಾಗಿತ್ತು. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಿದ್ದು, ಸರ್ಕಾರ ಕೆರೆಗಳ ಜೀರ್ಣೋದಾರಕ್ಕಾಗಿ 2.95 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. 3 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ಎಚ್‌.ಎನ್‌.ವ್ಯಾಲಿ ನೀರು: ತಾಲೂಕಿನಲ್ಲಿ ವಿವಿಧ ಕೆರೆಗಳಿಗೆ ಈಗಾಗಲೇ ಎಚ್‌.ಎನ್‌. ವ್ಯಾಲಿ ನೀರು ಹರಿಯುತ್ತಿದೆ. ತಾಲೂಕಿನ ಗಂಗಸಂದ್ರ ಕೆರೆಯಿಂದ ಮುದುಗಾನಕುಂಟೆ, ಸಾಗಾನಹಳ್ಳಿ, ಗೊಟಕನಾ ಮರ, ಕಲ್ಲೂಡಿ ಕೆರೆಗೆ ನೀರು ತುಂಬಿಸುವ ಯೋಜನೆ ಪ್ರಸ್ತಾವನೆ, ಸಲ್ಲಿಸಲಾಗಿದೆ. ಕಲ್ಲೂಡಿ ಕೆರೆಯಿಂದ ಚಿಕ್ಕಕುರುಗೋಡು, ದೊಡ್ಡ ಕುರು ಗೋಡು, ಕುಡುಮಲಕುಂಟೆ ಕೆರೆಗೆ ನೀರು ತುಂಬಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.

ಇದೇ ವೇಳೆ ಗೌರಿಬಿದನೂರು ತಾಲೂಕಿನ ಇಡಗೂರು ನರ್ಲಕುಂಟೆ, ಮಾಳೇನಹಳ್ಳಿ ಕೆರೆಗೆ ನೀರು ತುಂಬಿಸುವ ಯೋಜನೆಗೆ 19 ಕೋಟಿ ರೂ. ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದರಿಂದ ಮಂಟಚಕನಹಳ್ಳಿ, ಹಾಲಗಾನಹಳ್ಳಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪ್ರಸ್ತಾವನೆಯಲ್ಲಿದೆ.ನಂತರ ನಗರ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಎತ್ತಿನ ಹೊಳೆ ಯೋಜನೆಯಿಂದ ಉಡುಮಲೋಡು, ಗುಂಡಾಪುರ, ಗೋಟಕನಾ ಪುರ, ಕೆರೆಗಳಿಗೆ ಎತ್ತಿನ ಹೊಳೆ ಯೋಜನೆಯಿಂದ ನೀರು ಪೂರೈಕೆ ಮಾಡುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

ರಸ್ತೆಗಳ ಅಭಿವೃದ್ಧಿ: ತಾಲೂಕಿನ ರಸ್ತೆಗಳ ಅಭಿವೃದ್ಧಿಯಿಂದ ಮಾತ್ರ ತಾಲೂಕು ಆರ್ಥಿಕ- ಸಾಮಾಜಿಕ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ಅಲ್ಲೀಮರ, ನಾಚ ಕುಂಟೆ, ಗೆದರೆ,ರಸ್ತೆಗಳ ಅಭಿ ವೃದ್ಧಿಗೆ 8 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಾಮಾಗಾರಿ ಎರಡು ತಿಂಗಳಲ್ಲಿ ಪೂರ್ಣಗೊಳಿಸ ಲಾಗುವುದು ಎಂದರು.

ಗೌರಿಬಿದನೂರು ತಾಲೂಕಿಗೆ ಕೆಲವು ಸ್ವಯಂಘೋಷಿತ ಸಮಾಜಸೇವಕರು ಚುನಾವಣೆಗೆ ಬಂದಿದ್ದಾರೆ. ತಾಲೂಕಿನ ಜನತೆ ಪ್ರಬುದ್ಧರು ಹಣದ ಆಮಿಷಕ್ಕೆ ಮತವನ್ನು ಹಾಕುವುದಿಲ್ಲ. ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಜನತೆ ನೆಮದಿ ಜೀವನ ಸಾಗಿಸಲು ಸಾಧ್ಯ ಎಂದು ಹೇಳಿದರು. ‌

ನಗರಸಭೆ ಸದಸ್ಯ ಗಾಯತ್ರಿ ಬಸವರಾಜ್‌, ಎಂ.ಡಿ.ರಫೀಕ್‌, ಗದರ ಗ್ರಾಪಂ ಅಧ್ಯಕ್ಷೆ ಪ್ರೇಮ ಕುಮಾರಿ, ಸದಸ್ಯರಾದ ಸರಳ, ಸುಧಾ, ಶಿವಕುಮಾರ್‌ ರೆಡ್ಡಿ, ಮುಖಂಡ ರಾದ ಎಚ್‌.ಎನ್‌. ಪ್ರಕಾಶ್‌ ರೆಡ್ಡಿ, ನಾನಾ, ಅಶ್ವತ್ಥನಾರಾಯಣ್‌, ತಾರಾ ನಾಥ್‌, ಬೊಮ್ಮಣ್ಣ ತರಿದಾಳು ಚಿಕ್ಕಣ್ಣ ನಾಗರಾಜ್, ರೇಣುಕಮ್ಮ, ವೆಂಕಟರಮಣ ಹಾಜರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.