ಡಿಕೆಶಿ ಪರ ಒಕ್ಕಲಿಗರ ಪ್ರತಿಭಟನೆ ಕಾಂಗ್ರೆಸ್ ಗೆ ಸೀಮಿತ: ಸಂಸದ ಬಿ.ಎನ್.ಬಚ್ಚೇಗೌಡ
Team Udayavani, Sep 11, 2019, 12:22 PM IST
ಚಿಕ್ಕಬಳ್ಳಾಪುರ: ಇ.ಡಿ. ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರ ಒಕ್ಕಲಿಗರು ನಡೆಸುತ್ತಿರುವ ಪ್ರತಿಭಟನೆ ಕೇವಲ ಕಾಂಗ್ರೆಸ್ ಗೆ ಸೀಮಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಬುಧವಾರ ತಮ್ಮ ನೂತನ ಕಚೇರಿ ಉದ್ಹಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಕ್ಕಲಿಗರ ಪ್ರತಿಭಟನೆ ಕಾಂಗ್ರೆಸ್ ಪಕ್ಷಕ್ಕೆ ಸೀಮಿತವಾಗಿರುವ ಪ್ರತಿಭಟನೆ, ಅದಕ್ಕೂ ಬಿಜೆಪಿ ಪಕ್ಷಕ್ಕೂ ಸಂಬಂಧವಿಲ್ಲ ಎಂದರು. ದೇಶದಲ್ಲಿ ಅಥವಾ ರಾಜ್ಯದಲ್ಲಿ ಎಲ್ಲರೂ ಬೇಕಾದರೆ ರಾಜಕಾರಣ ಮಾಡಬೇಕು. ಅದು ಬಿಟ್ಟು ಒಕ್ಕಲಿಗರಿಗೆ ಮಾತ್ರ ಸೀಮಿತಗೊಳಿಸಿದರೆ ಯಾವ ಸಂದೇಶ ರವಾನೆಯಾಗುತ್ತದೆ. ಹಾಗಾದರೆ ಉಳಿದವರು ಬೇಡವೆ? ಜಾತಿ, ಸಮುದಾಯ ತಂದು ರಾಜಕೀಯ ಮಾಡುವುದು ಎಷ್ಟು ಸರಿ? ಎಂದು ಡಿಕೆಶಿ ಪರ ಒಕ್ಕಲಿಗ ರನ್ನು ಬಳಸಿಕೊಂಡು ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುಧ್ಧ ಬಚ್ಚೇಗೌಡ ಕಿಡಿಕಾರಿದರು.
ದೇಶದ ರಾಜಕಾರಣ ದ್ವೇಷದ ರಾಜಕಾರಣವಾಗಬಾರದು. ಇಡಿ, ಐಟಿ, ಸಿಬಿಐ ಸ್ವಾಯತ್ತ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ. ತನಿಖೆ ಮುಗಿದ ಬಳಿಕ ನಾವು ಮಾತನಾಡುತ್ತೇವೆ. ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಅವರವರು ಮಾಡಿದ್ದು ಅವರು ಅನುಭವಿಸುತ್ತಾರೆ. ಸುಮ್ಮನೆ ಎಲ್ಲದ್ದಕ್ಕೂ ರಾಜಕೀಯ ಬಣ್ಣ ಹಚ್ಚುತ್ತಾರೆ. ಡಿಕೆಶಿ ಬೆಂಬಲಿಸಿ ಒಕ್ಕಲಿಗರು ಪ್ರತಿಭಟನೆ ನಡೆಸಿರುವುದು ತಪ್ಪು. ಇಂತಹ ವಿಷಯದಲ್ಲಿ ಗೊಂದಲ ಸಮುದಾಯದ ನಡುವೆ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ