ಜಿಲ್ಲೆಯಲ್ಲಿ ಮತ್ತೆ ಮೂರು ಕೋವಿಡ್ 19 ಪ್ರಕರಣ ಪತ್ತೆ
Team Udayavani, Jul 4, 2020, 6:59 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ 19 ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ಹೊಸದಾಗಿ ಚಿಂತಾಮಣಿ 3, ಚಿಕ್ಕಬಳ್ಳಾಪುರದಲ್ಲಿ 1 ಸೇರಿ ಮೂರು ಪ್ರಕರಣಗಳು ಕಂಡು ಬಂದಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 233ಕ್ಕೆ ಏರಿಕೆ ಕಂಡಿದೆ. ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬರುತ್ತಲೇ ಇದ್ದು, ಜಿಲ್ಲೆಯ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.
ಚಿಂತಾಮಣಿಯಲ್ಲಿ 50 ಹಾಗೂ 18 ವರ್ಷದ ಇಬ್ಬರಲ್ಲಿ ಸೋಂಕು ದೃಢಪಟ್ಟರೆ ಚಿಕ್ಕಬಳ್ಳಾಪುರದಲ್ಲಿ 45 ವರ್ಷದ ವ್ಯಕ್ತಿಯಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ. ಮೂವರ ಪೈಕಿ ಇಬ್ಬರಿಗೆ ಬೆಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
233ಕ್ಕೆ ಸೋಂಕಿತರ ಏರಿಕೆ: ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ತಾಲೂಕುಗಳಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಜಿಲ್ಲಾ ಕೇಂದ್ರದಲ್ಲಿ ಬರೋಬ್ಬರಿ 53 ಪ್ರಕರಣಗಳು ದಾಖಲಾದರೆ, ಚಿಂತಾಮಣಿಯಲ್ಲಿ 18, ಬಾಗೇಪಲ್ಲಿ 53, ಗೌರಿಬಿದನೂರು 97, ಶಿಡ್ಲಘಟ್ಟ 12 ತಲುಪಿದೆ.
ಶುಕ್ರವಾರ ಇಬ್ಬರು ಮಾತ್ರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ ಡಿಸ್ಚಾರ್ಜ್ ಆದವರ ಸಂಖ್ಯೆ 173 ದಾಟಿದೆ. ಜಿಲ್ಲೆಯಲ್ಲಿ 53 ಕೋವಿಡ್-19 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಒಟ್ಟು 6 ಮಂದಿ ಕೋವಿಡ್ -19ಗೆ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ