ವಿಕಲ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Team Udayavani, Feb 9, 2021, 3:25 PM IST
ಚಿಕ್ಕಮಗಳೂರು: ಅಂಗವೈಕಲ್ಯ ಹೊಂದಿದವರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸರ್ಕಾರ ಮೂರು ಚಕ್ರದ ವಾಹನವನ್ನು ನೀಡುತ್ತಿದ್ದು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಜಿಪಂ ಉಪಾಧ್ಯಕ್ಷ ಸೋಮಶೇಖರ್ ಹೇಳಿದರು.
ಸೋಮವಾರ ನಗರದ ಜಿಪಂ ಆವರಣದಲ್ಲಿ 2019-20ನೇ ಸಾಲಿನ ಜಿಪಂ ವತಿಯಿಂದ ವಿಕಲ ಚೇತನರಿಗೆ ಸಾಂಕೇತಿಕವಾಗಿ ಮೂರು ಚಕ್ರದ ವಾಹನ ವಿತರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಂಗವಿಕಲರ ಅನುದಾನದಡಿ ಕಳೆದ ಬಾರಿ 29 ವಾಹನಗಳನ್ನು ನೀಡಿದ್ದು, ಈ ಬಾರಿ 28 ವಾಹನಗಳನ್ನು ವಿತರಣೆ ಮಾಡಲಾಗಿದೆ. ಇದರ ಸದುಪಯೋಗವನ್ನು ಫಲಾನುಭವಿಗಳೇ ಪಡೆದುಕೊಳ್ಳಬೇಕು. ಅವರಿಗೂ ಸಹ ಸಾಮಾನ್ಯ ಜನರಂತೆ ಓಡಾಡಲು ಅನುಕೂಲವಾಗಬೇಕು ಎಂದರು.
ಇದನ್ನೂ ಓದಿ:ರೈತರ ಒಕ್ಕಲೆಬ್ಬಿಸುವ ಕಾಯ್ದೆ ತಂದಿದ್ದು ಬಿಜೆಪಿ: ಹೆಗ್ಡೆ
ಜಿಪಂ ಸದಸ್ಯೆ ಕವಿತ ಲಿಂಗರಾಜು ಮಾತನಾಡಿ, ಅಂಗವಿಕಲರ ಮೇಲೆ ನಮಗೆ ಕರುಣೆ ಇರಬಾರದು. ಬದಲಾಗಿ ನಾವು ಅವರಿಗೆ ಧೈರ್ಯ ತುಂಬುವ ಮೂಲಕ ಸ್ವಂತವಾಗಿ ದುಡಿಮೆ ಮಾಡುವ ಶಕ್ತಿ ನೀಡಬೇಕೆಂಬ ದೃಷ್ಟಿಯಲ್ಲಿ ವಾಹನಗಳನ್ನು ನೀಡಿದ್ದೇವೆ ಎಂದು ಹೇಳಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಎಸ್. ಪೂವಿತಾ ಹಾಗೂ ಜಿಪಂ ಸದಸ್ಯರಾದ ಜಸಂತಾ ಅನಿಲ್ ಕುಮಾರ್, ರವೀಂದ್ರ ಬೆಳವಾಡಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ