ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನರ್ಸಿಂಗ್ ವಿದ್ಯಾರ್ಥಿನಿ ಸಾವು
Team Udayavani, Jul 28, 2020, 6:36 PM IST
ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ತೋಟಕ್ಕೆ ಹೋಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಠಾಣೆ ವ್ಯಾಪ್ತಿಯ ಬಂಡಹಳ್ಳಿ ಸಮೀಪ ಮಂಗಳವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಬಂಡಹಳ್ಳಿ ಶಿವರಾಜ್ ಎಂಬುವರ ಪುತ್ರಿ ವರ್ಷ (19) ಎಂದು ಗುರುತಿಸಲಾಗಿದ್ದು ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ವರ್ಷ ತಮ್ಮ ತೋಟಕ್ಕೆ ಹೋಗಿ ಮನೆಗೆ ಬರುವಾಗ ತಿರ್ನಹಳ್ಳಿ ಕಡೆಯಿಂದ ಮುದ್ದೇನಹಳ್ಳಿ ಕಡೆಗೆ ಹೊರಟಿದ್ದ ಟಿಪ್ಪರ್ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ವಲ್ಪ ದೂರ ದ್ವಿಚಕ್ರ ವಾಹನವನ್ನು ಎಳೆದುಕೊಂಡು ಹೋಗಿದೆ. ಈ ವೇಳೆ ವರ್ಷ ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಮುದ್ದೇನಹಳ್ಳಿ ರಸ್ತೆಯಲ್ಲಿ ಟಿಪ್ಪರ್ ಲಾರಿಗಳ ಅರ್ಭಟ ಜಾಸ್ತಿಯಾಗಿದ್ದು ಹಲವು ದಿನಗಳ ಹಿಂದೆ ಕಣಿವೆ ಸಮೀಪ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಅಪಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು