ಮಹಿಳಾ ಕಾಲೇಜು ಕಟ್ಟಡಕ್ಕೆ ಅನುದಾನ ನೀಡಲು ಒತ್ತಾಯ
Team Udayavani, Nov 1, 2019, 3:55 PM IST
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಕಳೆದಆರೇಳು ವರ್ಷಗಳಿಂದ ಅನುದಾನ ಇಲ್ಲದೇ ಕಾಮಗಾರಿ ಕುಂಟುತ್ತಾ ಸಾಗಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜು ಕಟ್ಟಡಕ್ಕೆ ಅಗತ್ಯ ಅನುದಾನ ನೀಡುವಂತೆ ಕೋರಿ ಎಬಿವಿಪಿ ಮುಖಂಡರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವಡಾ.ಸಿ.ಎನ್.ಅಶ್ವತ್ಥನಾರಾಯಣಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಜಿಲ್ಲೆಗೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣಗೆ, ಎಬಿವಿಪಿ ಮುಖಂಡರು ಮನವಿ ಸಲ್ಲಿಸಿ ಸರ್ಕಾರಿ ಮಹಿಳಾ ಕಾಲೇಜು ಕಟ್ಟಡ ಅನುದಾನ ಇಲ್ಲದೇ ನೆನಗುದಿಗೆಬಿದ್ದಿರುವುದನ್ನು ಗಮನಕ್ಕೆ ತಂದರು.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಪದವಿ ಕಾಲೇಜಿನಲ್ಲಿಸಾವಿರಾರು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ಕಟ್ಟಡ ಮತ್ತಿತರ ಮೂಲ ಸೌಕರ್ಯಗಳ ಕೊರತೆಯಿಂದ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆ ಆಗಿದ್ದು, ಸರ್ಕಾರ ಈ ಬಗ್ಗೆಗಮನ ಹರಿಸಿ ಕಾಲೇಜಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಲಮಿತಿಯೊಳಗೆ ಕಟ್ಟಡ ಕಾಮಗಾರಿಪೂರ್ಣಗೊಳಿಸಬೇಕು. ಇದರಿಂದ ಜಿಲ್ಲೆಯ ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂದು ಎಬಿವಿಪಿ ಮುಖಂಡರು ಸಚಿವರ ಗಮನ ಸೆಳೆದರು. ವಿದ್ಯಾರ್ಥಿಮುಖಂಡರ ಮನವಿಗೆ ಸ್ಪಂದಿಸಿದಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ