ಇಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 12 ವರ್ಷ ಪೂರ್ಣ


Team Udayavani, Aug 23, 2019, 2:24 PM IST

cb-tdy-1

ಚಿಕ್ಕಬಳ್ಳಾಪುರ: ಅವಿಭಜಿತ ಕೋಲಾರ ಜಿಲ್ಲೆಯ ಉಪ ವಿಭಾಗವಾಗಿದ್ದ ಚಿಕ್ಕಬಳ್ಳಾಪುರ, ಸ್ವತಂತ್ರ ಜಿಲ್ಲೆಯಾಗಿ ರಚನೆಗೊಂಡು ಆ.23ಕ್ಕೆ 12 ವರ್ಷ ತುಂಬಿ 13ಕ್ಕೆ ಪಾದಾರ್ಪಣೆ ಮಾಡುತ್ತಿದೆ. ಆದರೆ ಕಳೆದ 12 ವರ್ಷ ದಲ್ಲಿ ಜಿಲ್ಲೆಯನ್ನು ಬರೋಬ್ಬರಿ 10 ವರ್ಷದ ಕಾಲ ಕಾಡಿದ ಬರ ಜಿಲ್ಲೆಯ ಜನತೆಯನ್ನು ಹೈರಾಣಾಗಿಸಿದೆ.

ಸರ್ಕಾರದ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಜಿಲ್ಲೆಗೆ ಯಾವುದೇ ಶಾಶ್ವತ ನೀರಾವರಿ ಹರಿಯದೇ ಜಿಲ್ಲೆಯ ಜನ ಜೀವನ ನಿತ್ಯ ಬರದ ಬೇಗುದಿಯಲ್ಲಿ ಇಂದಿಗೂ ನರಳಾಡುವಂತೆ ಮಾಡಿದೆ.

ಸಂಭ್ರಮ ಹೆಚ್ಚು ದಿನ ಉಳಿಯಲಿಲ್ಲ: ಹೌದು, ಉಪ ವಿಭಾಗವಾಗಿದ್ದ ಚಿಕ್ಕಬಳ್ಳಾಪುರವನ್ನು ಜಿಲ್ಲೆಯಾಗಿ ಘೋಷಣೆ ಮಾಡಿದ್ದು, 2007ರ ಆಗಸ್ಟ್‌ 23 ರಂದು. ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರ ಸ್ವಾಮಿ ರಾಮನಗರವನ್ನು ಮಾತ್ರ ಜಿಲ್ಲೆಯಾಗಿ ಘೋಷಿಸಿದರೆ ಚಿಕ್ಕಬಳ್ಳಾಪುರ ಜನ ತಮ್ಮನ್ನು ತಪ್ಪಾಗಿ ಭಾವಿಸುತ್ತಾರೆ ಎಂದು ಹೇಳಿ ಚಿಕ್ಕಬಳ್ಳಾಪುರವನ್ನು ಜಿಲ್ಲೆಯಾಗಿ ಘೋಷಿಸಿದರು. ಆದರೆ ಜಿಲ್ಲೆಯಾಗಿ ಘೋಷಣೆಗೊಂಡಾಗ ಜಿಲ್ಲೆಯ ರೈತಾಪಿ ಜನರಲ್ಲಿ ಉಂಟಾದ ಸಂಭ್ರಮ, ಬಹುದಿನಗಳ ಕನಸು ಈಡೇರಿದ ಭಾವನೆ ಹೆಚ್ಚು ದಿನ ಉಳಿಯಲಿಲ್ಲ.

ಆಕ್ರೋಶ, ಅಸಮಾಧಾನ: ಚಿಕ್ಕಬಳ್ಳಾಪುರ ಉಪ ವಿಭಾಗ ಆಡಳಿತಾತ್ಮಕ‌ವಾಗಿ ಕೋಲಾರದಿಂದ ಬೇರ್ಪಟ್ಟು ಸ್ವತಂತ್ರ ಜಿಲ್ಲೆಯಾದರೂ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಇಂದಿಗೂ ಪರಿಹಾರ ಸಿಗಲಿಲ್ಲ ಎಂಬ ಆಕ್ರೋಶ, ಸಿಟ್ಟು, ಅಸಮಾಧಾನ ಜಿಲ್ಲೆಯ ಜನರ ನಾಡಮಿಡಿತಗಳಲ್ಲಿ ಜೀವಂತವಾಗಿದೆ.

ದುಷ್ಪರಿಣಾಮ: ವಿಶೇಷವಾಗಿ ಶಾಶ್ವತ ನೀರಾವರಿ ಸೇರಿದಂತೆ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳು ಒದಗಿಸುವ ಕೈಗಾರಿಕೆಗಳು ತಲೆ ಎತ್ತಲಿಲ್ಲ ಎಂಬ ಆಕ್ರೋಶ ಜಿಲ್ಲೆಯ ಜನರಲ್ಲಿ ಕೇಳಿ ಬರುತ್ತಿದೆ. ಇದಕ್ಕಿಂತ ಮುಖ್ಯವಾಗಿ ಕಳೆದ 12 ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ 10 ವರ್ಷಗಳ ಕಾಲ ಮಳೆ ಬೆಳೆ ಕೊರತೆಯಿಂದ ಬರಗಾಲಕ್ಕೆ ತುತ್ತಾಗಿ ಜಿಲ್ಲೆಯ ಜನಜೀವನ ಪರಿತಪಿಸುವಂತಾಗಿದ್ದು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಿದೆ.

ಈಡೇರದ ನೀರಾವರಿ ಕನಸು: ಜಿಲ್ಲೆಯಾಗಿ 12 ವರ್ಷ ತುಂಬಿ 13ನೇ ವರ್ಷಕ್ಕೆ ಪಾರ್ದಪಣೆ ಮಾಡುತ್ತಿ ರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಜಪ ಮುಂದುವರಿದಿದೆ. ಸತತ 25 ವರ್ಷಗಳಿಂದಲೂ ನೀರಾವರಿ ಹೋರಾಟ ನಡೆದರೂ ಸರ್ಕಾರಗಳ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಯಿಂದ ಜಿಲ್ಲೆಯ ನೀರಾವರಿ ಹೋರಾಟ ಕೇವಲ ಅರಣ್ಯರೋದನವಾಗಿದೆ.

ಬಯಲುಸೀಮೆ ಜಿಲ್ಲೆಗಳಿಗೆ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಈ ಭಾಗದಲ್ಲಿ ದೀರ್ಘ‌ ಕಾಲದಿಂದ ಹೋರಾಟಗಳು ನಡೆದರೂ ಸರ್ಕಾರಗಳು ತಮ್ಮ ಇಚ್ಛಾಶಕ್ತಿ ಪ್ರದರ್ಶಿಸಿಲ್ಲ. ಬರೀ ಯೋಜನೆಗಳ ಹೆಸರಿನಲ್ಲಿ ಜಿಲ್ಲೆಯ ಜನತೆಯನ್ನು ಕಣ್ಣೊರೆಸುತ್ತಿವೆಂಬ ಆಕ್ರೋಶ ಇದೆ.

ಅಗತ್ಯವಾದ ಭೂಸ್ವಾಧೀನವಾಗಿಲ್ಲ: ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಡಿ.ವಿ.ಸದಾನಂದ ಗೌಡ ಅವಧಿಯಲ್ಲಿ ಅನುಮೋದನೆ ಪಡೆದ ಎತ್ತಿನಹೊಳೆ ಯೋಜನೆಗೆ ಕಾಂಗ್ರೆಸ್‌ ಸರ್ಕಾರ ಶಂಕುಸ್ಥಾಪನೆ ನೆರವೇರಿಸಿತು. ಆದರೆ ಇಂದಿಗೂ ಯೋಜನೆಗೆ ಅಗತ್ಯವಾದ ಭೂಸ್ವಾಧೀನವಾಗಿಲ್ಲ.

ಯೋಜನೆಗೆ 13 ಸಾವಿರ ಕೋಟಿ ನಿಗದಿಪಡಿಸಿ 5 ಸಾವಿರ ಕೋಟಿ ಖರ್ಚು ಮಾಡಿದ್ದರೂ ಜಿಲ್ಲೆಗೆ ನೀರಾವರಿ ಸಿಗುವ ಲಕ್ಷಣಗಳು ಕಾಣುತ್ತಿಲ್ಲ.

ನೀರಾವರಿಯಿಂದ ಜಿಲ್ಲೆ ವಂಚಿತ: ಎತ್ತಿನಹೊಳೆ ವಿಳಂಬವಾಗುವುದನ್ನು ಸರ್ಕಾರವೇ ಒಪ್ಪಿಕೊಂಡು ಸಾವಿರ ಕೋಟಿ ವೆಚ್ಚದಲ್ಲಿ ಹೆಬ್ಟಾಳ, ನಾಗವಾರ ಕೆರೆಗಳ ತ್ಯಾಜ್ಯ ನೀರನ್ನು ಸಂಸ್ಕರಿಸಿ ಜಿಲ್ಲೆಯ ಕೆರೆಗಳ ತುಂಬಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದ್ದರೂ ಜಿಲ್ಲೆಯ ಬೇಡಿಕೆಯಾದ ಸಮಗ್ರ ನೀರಾವರಿ ಜತೆಗೆ ಕೃಷಿಗೆ ಅಗತ್ಯವಾದ ನೀರಾವರಿಯಿಂದ ಜಿಲ್ಲೆ ವಂಚಿತವಾಗುವುದು ಎದ್ದು ಕಾಣುತ್ತಿದೆ.

ತ್ವರಿತಗತಿಯಲ್ಲಿ ಸಾಗುತ್ತಿಲ್ಲ: ವಿಪರ್ಯಾಸವೆಂದರೆ ಈ ಆಗಸ್ಟ್‌ ವೇಳೆಗೆ ಕಂದವಾರದ ಕೆರೆಗೆ ನೀರು ಹರಿಸುವುದಾಗಿ ಹೇಳಿದ್ದ ಸರ್ಕಾರ, ಇದೀಗ ಇನ್ನೂ ನಾಲ್ಕೈದು ತಿಂಗಳು ಕಾಲಾವಕಾಶಬೇಕೆಂದು ಹೇಳು ತ್ತಿದೆ. ಸದ್ಯ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರೂ ಎತ್ತಿನಹೊಳೆ, ಎಚ್.ಎನ್‌. ವ್ಯಾಲಿ ನೀರಾವರಿ ಯೋಜನೆಗಳು ತ್ವರಿತಗತಿಯಲ್ಲಿ ಸಾಗುತ್ತಾ ಇಲ್ಲ. ಆಮೆಗತಿ ಹಿಡಿಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಕೈಗಾರಿಕೆ, ಮೆಡಿಕಲ್ ಕಾಲೇಜು ಠುಸ್‌: ಜಿಲ್ಲೆಯಾಗಿ ಇದುವರೆಗೂ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಲಿಲ್ಲ. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಘೋಷಣೆಯಾದ ವೈದ್ಯಕೀಯ ಕಾಲೇಜು ಕನಸಾಗಿಯೇ ಉಳಿದಿದೆ. ಜಿಲ್ಲೆಯಾದಾಗಿ ನಿಂದ ಸುಸಜ್ಜಿತ ಜಿಲ್ಲಾಡಳಿತ ಭವನ ಆಗಿರುವುದು ಬಿಟ್ಟರೆ ಜಿಲ್ಲಾಸ್ಪತ್ರೆ, ಬಸ್‌ ನಿಲ್ದಾಣ ಸ್ಥಾಪನೆ ಜನರಲ್ಲಿ ತುಸು ಸಮಾಧಾನ ಇದೆ. ಆದರೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಶಾಶ್ವತ ನೀರಾವರಿ, ಮೆಡಿಕಲ್ ಕಾಲೇಜು ಸ್ಥಾಪನೆ, ಜಿಲ್ಲಾ ಕೇಂದ್ರಕ್ಕೆ ಮೂಲ ಸೌಕರ್ಯ, ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ ಜಿಲ್ಲೆಯ ಪಾಲಿಗೆ ಇನ್ನೂ ಮರೀಚಿಕೆಯಾಗಿ ಉಳಿದಿದ್ದು, ಇದರ ಜೊತೆಗೆ ಸತತವಾಗಿ ಕಾಡುತ್ತಿರುವ ಬರಗಾಲ ಜಿಲ್ಲೆಯ ಜನ ಜೀವನವನ್ನು ಸಂಕಷ್ಟಕ್ಕೆ ತಳ್ಳಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.