ಪ್ರವಾಸಿಗರ ಆಕರ್ಷಣೆಯ ಗುಡಿಬಂಡೆ ತಾಣಗಳು

ಗುಡಿಬಂಡೆಯಲ್ಲಿ ಹಲವು ತಾಣಗಳು , 90ರಷ್ಟು ತುಂಬಿದ ಅಮಾನಿಬೈರಸಾಗರಕೆರೆ

Team Udayavani, Oct 5, 2020, 4:05 PM IST

ಪ್ರವಾಸಿಗರ ಆಕರ್ಷಣೆಯ ಗುಡಿಬಂಡೆ ತಾಣಗಳು

ಗುಡಿಬಂಡೆಯ ಸುರಸದ್ಮಗಿರಿ ಬೆಟ್ಟದಿಂದ ಸೆರೆ ಹಿಡಿಯಲಾದ ಅಮಾನಿಬೈರಸಾಗರದಕೆರೆ ದೃಶ್ಯ.

ಗುಡಿಬಂಡೆ: ಜಿಲ್ಲೆಯ ಅತಿ ದೊಡ್ಡ ಕೆರೆಗಳಲ್ಲಿ ಒಂದಾದ ಗುಡಿಬಂಡೆ ಅಮಾನಿಬೈರಸಾಗರ ಕೆರೆಯು ಇತ್ತೀಚಿಗೆ ಬಿದ್ದ ಮಳೆಯಿಂದಸುಮಾರು 90 ಭಾಗ ತುಂಬಿದ್ದು, ಕೆರೆ ತುಂಬಿ ಹರಿಯಲು ಕೇವಲ 4 ಅಡಿಗಳು ಮಾತ್ರ ಬಾಕಿಯಿದ್ದು, ಕೆರೆ ನೋಡಲು ರಾಜ್ಯದ ಹಲವು ಜಿಲ್ಲೆಗಳಿಂದ ಪ್ರವಾಸಿಗಳು ಬರುತ್ತಿದ್ದಾರೆ.

ವಿಶಿಷ್ಟ ಶೈಲಿ: ಗುಡಿಬಂಡೆ ಭೈರಸಾಗರ ಕೆರೆ ಭಾರತದ ಭೂಪಟ ಹೋಲುವ ರೀತಿ ಹಾಗೂ ಸಂಜೆ ಸೂರ್ಯಸ್ತದ ದೃಶ್ಯ ನೋಡಲು ನೂರಾರು ಪ್ರವಾಸಿಗರು ಬರುತ್ತಿದ್ದಾರೆ. ಸುತ್ತಲೂ ಹಸಿರ ಮಧ್ಯೆ ಇರುವ ವಿಶಾಲವಾದ ನೀರಿನ ಸಾಗರ, ಏರಿ ಮೇಲೆ ಸಾಗಿದರೆ ಸಾಗರದಂತೆಕಾಣುವಕೆರೆ ಎಂಥವರಿಗೂ ಮೈಜುಮ್ಮೆನ್ನುವ ಅನುಭವ ಆಗುತ್ತದೆ. ಅಮಾನಿಬೈ ರಸಾಗರ ಕೆರೆ ಎತ್ತರಪ್ರ ದೇಶದಿಂದ ನೋಡಿದರೆ ಭಾರತದ ಭೂಪಟದಂತೆ ಗೋಚರಿಸುವುದು ಬಹು ವಿಶಿಷ್ಟ ಶೈಲಿಯಲ್ಲಿ ಕೆರೆ ಕಟ್ಟೆಯನ್ನು ನಿರ್ಮಾಣ ಮಾಡಿರುವುದಕ್ಕೆ ಸಾಕ್ಷಿಯಾಗಿದೆ.

400 ವರ್ಷ ಇತಿಹಾಸ: ಸುಮಾರು 400 ವರ್ಷಗಳ ಹಿಂದೆ ಈ ಪ್ರದೇಶವನ್ನಾಳಿದ ಬೈರೇಗೌಡ ಸಾಮಾಜಿಕ ಹಿತ ಬಯಸುತ್ತಿದ್ದ ಕ್ರಾಂತಿಕಾರಿ ಮನೋಭಾವ ಹೊಂದಿದ್ದ ಪಾಳೇಗಾರ ಎಂಬುದಕ್ಕೆ ಆತ ನಿರ್ಮಿಸಿರುವ ಕೋಟೆ ಕೊತ್ತಲ, ಕೆರೆ ಸೇರಿದಂತೆ ಹಲವಾರುಸ್ಮಾರಕಗಳು ಇಲ್ಲಿ ಕಂಡುಬರುತ್ತವೆ. ಶನಿವಾರ ಮತ್ತು ಭಾನುವಾರ ನೂರಾರು ಪ್ರವಾಸಿಗಳು ಸುರಸದ್ಮಗಿರಿ ಬೆಟ್ಟವನ್ನು ಹತ್ತಿ ವೀಕ್ಷಣೆ ಮಾಡುತ್ತಾರೆ.

ರಜೆ ದಿನಗಳಲ್ಲಿ ಪ್ರವಾಸಿಗರ ದಂಡು: ಗುಡಿಬಂಡೆ ಅಮಾನಿಬೈರ ಸಾಗರ ಮತ್ತು ಸುರಸದ್ಮಗಿರಿ‌ ಬೆಟ್ಟಕ್ಕೆ ರಜೆ ದಿನಗಳಲ್ಲಿ ಚಾರಣಕ್ಕೆ ಆಗಮಿಸುವವರು, ಸುತ್ತಮುತ್ತ ಪಂಚಗಿರಿಗಳನ್ನು ಸುತ್ತಲು ಬರುವ ಪ್ರವಾಸಿಗರು ಬೈರಸಾಗರ ಕೆರೆಗೂ ಭೇಟಿ ನೀಡಿ ಪ್ರಕೃತಿ ಸೌಂದರ್ಯ ಅನುಭವಿಸುತ್ತಿದ್ದಾರೆ. ಹೆಚ್ಚಾಗಿ ಇಲ್ಲಿಗೆ ಬೆಂಗಳೂರು ನಗರ, ಅನಂತಪುರ, ತುಮಕೂರು ಸೇರಿದಂತೆ ಹಲವೆಡೆಯಿಂದಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ: ಇತ್ತೀಚೆಗೆ ಗುಡಿಬಂಡೆ ಪಟ್ಟಣದ ಯುವಕರು ಮತ್ತು ಈಗಾಗಲೇ ಪ್ರಕೃತಿ ಸೊಬಗನ್ನು ಆನಂದಿಸಿರುವ ಪ್ರವಾಸಿಗರು, ಡ್ರೋಣ್‌ ಕ್ಯಾಮೆರಾದ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಬಳಿಕ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಗೆ ಬರುತ್ತಿದ್ದಾರೆ. ಪ್ರವಾಸಿ ತಾಣಗಳನ್ನಾಗಿ ಮಾಡುವಲ್ಲಿ ವಿಫಲ:ಪ್ರತಿ ದಿನ ಇಲ್ಲಿನ ಪ್ರವಾಸಿ ತಾಣಗಳನ್ನುನೋಡಲು ನೂರಾರು ಪ್ರವಾಸಿಗರು ಇಲ್ಲಿಗೆಬರುತ್ತಾರೆ.ಆದರೆಇದನ್ನುಪ್ರವಾಸಿ ತಾಣವನ್ನಾಗಿ ಮಾಡಿ ಪ್ರವಾಸಿಗರಿಗೆ ಮೂಲ ಸೌಲಭ್ಯಗಳನ್ನು ನೀಡುವಲ್ಲಿ ಸ್ಥಳಿಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.

ಮೂಲಸೌಕರ್ಯ ಕಲ್ಪಿಸಿದರೆ ಉತ್ತಮ :  ಬೆಂಗಳೂರಿಗೆ ಹತ್ತಿರದಲ್ಲಿ ಇರುವ ಗುಡಿಬಂಡೆಯಲ್ಲಿ ಅನೇಕ ಪ್ರವಾಸಿ ತಾಣಗಳಿವೆ ಎಂದು ನಮಗೆ ಗೊತ್ತೆ ಇರಲಿಲ್ಲ.ಸಾಮಾಜಿಕಜಾಲತಾಣದಲ್ಲಿಅಮಾನಿಬೈರಸಾಗರ ಕೆರೆಯ ಮತ್ತು ಗುಡಿಬಂಡೆ ಸುರಸದ್ಮಗಿರಿ ಬೆಟ್ಟದ ಫೋಟೋ ಮತ್ತು ವಿಡಿಯೋ ಹಾಕಿದ್ದರು. ಅದನ್ನು ನೋಡಿದ ಬಳಿಕ ನೋಡಲೇ ಬೇಕೆನಿಸಿ ನಾನು ಮತ್ತು ಕುಟುಂಬಸ್ಥರು ಆಗಮಿಸಿ ಸಂತೋಷದಿಂದ ಕಳೆದಿದ್ದೇವೆ. ಆದರೆ ಕೆಲ ಮೂಲ ಸೌಕರ್ಯಗಳ ಕೊರತೆಯಿದ್ದು, ಸರಿಪಡಿಸಿದರೆ ಉತ್ತಮವಾಗಿರುತ್ತದೆ ಎಂದು ಬೆಂಗಳೂರು ನಿವಾಸಿ ಸಾಗರ್‌ ಎಂಬುವವರು ಪ್ರತಿಕ್ರಿಯಿಸಿದರು.

ಬೋಟಿಂಗ್‌ ಮಾಡುವುದಾಗಿ ಹೇಳಿ 5 ವರ್ಷ ಕಳೆದವು :  ಗುಡಿಬಂಡೆ ಅಮಾನಿಬೈರಸಾಗರ ಕೆರೆ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸುತ್ತೇವೆಂದು ಹೇಳಿ ಸುಮಾರು5 ವರ್ಷಗಳೇ ಕಳೆದಿವೆ. ಆದರೆ ಇಲ್ಲಿಯವರೆಗೂ ಅಭಿವೃದ್ಧಿಪಡಿಸುವಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.

ಪೊಲೀಸ್‌ ಬಂದೋಬಸ್ತ್ :  ಕೆರೆಗೆ ಹೆಚ್ಚು ನೀರು ಬಂದು ಇನ್ನೇನು ಹರಿಯುವ ಮಟ್ಟದಲ್ಲಿರುವುದರಿಂದ ಇಲ್ಲಿಗೆ ಅನೇಕ ಪ್ರವಾಸಿಗರು ಮತ್ತು ಮಕ್ಕಳು ಬರುತ್ತಾರೆಂದು ಮುನ್ನೆಚ್ಚರಿಕೆ ಕ್ರಮವಾಗಿ ಅಮಾನಿಬೈರಸಾಗರ ಕೆರೆ ಕಟ್ಟೆಗೆ ಪೊಲೀಸರನ್ನು ನಿಯೋಜನ ಮಾಡಿ ಸೂಕ್ತ ಬಂದೋಬಸ್ತ್ ನೀಡಲಾಗುತ್ತಿದೆ.

 

ವೆಂಕಟೇಶ್‌ ಎನ್‌.ವಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.