ಬೆಳ್ಳಿ ಮೋಡಗಳ ಜತೆ ಮಿಂದೇಳುವ ಪ್ರವಾಸಿಗರು


Team Udayavani, Jul 24, 2023, 1:56 PM IST

TDY-12

ಚಿಕ್ಕಬಳ್ಳಾಪುರ: ಚುಮು ಚುಮು ಚಳಿ, ಹಸಿರು ಕಾನನದ ಮಧ್ಯೆ ಅಪ್ಪಳಿಸುವ ತಂಪಾದ ಗಾಳಿ, ಮೋಡ ಕವಿದ ವಾತಾವರಣಕ್ಕೆ ಆಗಾಗ ಕಾಣದಂತೆ ಮಾಯವಾಗುವ ನಂದಿಗಿರಿ, ಬೆಳ್ಳಿ ಮೋಡಗಳ ನಡುವೆ ಪ್ರೇಮಿಗಳ ಕಲರವ, ಅಲ್ಲೆಲ್ಲೋ ಕೂಗುವ ಪಕ್ಷಿಗಳ ನಿನಾದ…ವಾವ್‌!. – ಜಿಲ್ಲೆಯ ನಂದಿಗಿರಿಧಾಮ ದಲ್ಲಿ ವಾರಾಂತ್ಯದ ಭಾನುವಾರ ಕಂಡು ಬಂದ ದೃಶ್ಯಗಳಿವು.

ಪ್ರಾಕೃತಿಕ ಸೊಬಗು: ಕಳೆದ 2-3 ದಿನದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಅಪಾರ ಸಸ್ಯ ಸಂಕುಲ ವನ್ನು ತನ್ನ ಮಡಲಿನಲ್ಲಿ ಇಟ್ಟುಕೊಂಡು ಕಂಗೊಳಿಸುತ್ತಿ ರುವ ನಂದಿಗಿರಿಧಾಮದ ಪ್ರಾಕೃತಿಕ ಸೊಬಗು ಸವಿಯಲು ಪ್ರವಾಸಿಗರು ಹಾತೊರೆಯುತ್ತಿ ದ್ದಾರೆ. ಸಮುದ್ರ ಮಟ್ಟದಿಂದ ಬರೋಬ್ಬರಿ 4,800ಕ್ಕೂ ಅಧಿಕ ಅಡಿಗಳಷ್ಟು ಎತ್ತರ ಇರುವ ನಂದಿಗಿರಿ ತಂಪಾದ ಗಾಳಿ, ಪ್ರಶಾಂತವಾದ ವಾತಾವರಣಕ್ಕೆ ಹೇಳಿ ಮಾಡಿಸಿದ ಸ್ಥಳ. ಒಂದು ರೀತಿಯಲ್ಲಿ ಪ್ರವಾಸಿಗರ, ಪ್ರೇಮಿಗಳ ಪಾಲಿಗೆ ಸ್ವರ್ಗವಿದ್ದಂತೆ. ಮಳೆಗಾಲ ಶುರುವಾಗುತ್ತಿದ್ದಂತೆ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಜಾಗತಿಕವಾಗಿ ವಿಶ್ವ ವಿಖ್ಯಾತ ನಂದಿಗಿರಿಧಾಮ ಅನೇಕ ಐತಿಹಾಸಿಕ ಸ್ಥಳಗಳ ಜತೆಗೆ ಅಪಾರ ಸಸ್ಯ ಕಾಶಿಯನ್ನೂ ಹೊಂದಿದೆ. ಬಡವರ ಪಾಲಿನ ಊಟಿಯೆಂದೇ ಪ್ರಸಿದ್ಧಿ ಪಡೆದ ನಂದಿಗಿರಿಧಾಮ ಮಳೆಗಾಲದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತದೆ.

ರಾಜ್ಯದ ವಿವಿಧೆಡೆಯಿಂದ ಆಗಮನ: ರಾಜ್ಯಧಾನಿ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ನಂದಿಗಿರಿಧಾಮ ವೀಕ್ಷಣೆಗೆ ಬರುತ್ತಿದ್ದಾರೆ. ಇತ್ತೀಚೆಗೆ ಅಷ್ಟೇ ನಂದಿಗಿರಿಧಾಮವನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸಂಪೂರ್ಣವಾಗಿ ನವೀಕರಿಸಿದ ಬಳಿಕ ಹೊಸ ರೂಪ ಪಡೆದ ನಂದಗಿರಿಧಾಮಕ್ಕೆ ಪ್ರವಾಸಿಗರ ಆಗಮನ ಹೆಚ್ಚಾಗಿದೆ. ಅದರಲ್ಲೂ ಮಳೆ ಸುರಿಯುವ ವೇಳೆ ಬೆಳ್ಳಂ ಬೆಳಗ್ಗೆ ಪ್ರವಾಸಿಗರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬೈಕ್‌, ಕಾರುಗಳಲ್ಲಿ ಆಗಮಿಸುತ್ತಿದ್ದಾರೆ.

ಎಲ್ಲವೂ ಅಂದ, ಚೆಂದ: ನಂದಿಗಿರಿಧಾಮದಲ್ಲಿರುವ ಟಿಪ್ಪು ಡ್ರಾಪ್‌ನಿಂದ ಹಿಡಿದು ಐತಿಹಾಸಿಕ ಕಲ್ಯಾಣಿ, ನೆಹರು ನಿಲಯ, ಗಾಂಧಿ ನಿಲಯ, ಯೋಗನರಸಿಂಹ ಸ್ವಾಮಿ ದೇವಾಲಯ ವೀಕ್ಷಣೆ ಜತೆಗೆ ಗಿರಿಧಾಮದ ಮೇಲಿಂದ ಸುತ್ತಲೂ ಕಾಣುವ ಪಂಚಗಿರಿ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಗಿರಿಧಾಮ ಹಸಿರು ಕಾನನ ಮಧ್ಯೆ ತಮ್ಮ ಲೋಕದಲ್ಲಿ ವಿರಮಿಸಿ ನಂದಿ ಭೇಟಿಯನ್ನು ಅವಿಸ್ಮರಣೀಯವಾಗಿಸಿಕೊಳ್ಳುತ್ತಿದ್ದಾರೆ.

ಆನ್‌ಲೈನ್‌ ಬುಕ್ಕಿಂಗ್‌: ನಂದಿಗಿರಿಧಾಮ ಪ್ರವೇಶ ಸುಗಮಗೊಳಿಸಿರುವ ಪ್ರವಾಸೋದ್ಯಮ ಇಲಾಖೆ, ಪ್ರವಾಸಿಗರ ಅನುಕೂಲಕ್ಕಾಗಿ ಪ್ರವೇಶ ಪಡೆ ಯುವುದಕ್ಕೆ ಆನ್‌ಲೈನ್‌ ಬುಕ್ಕಿಂಗ್‌ ವ್ಯವಸ್ಥೆ ಮಾಡಿದೆ. ಬೆಳಗ್ಗೆ 5ಕ್ಕೆ ನಂದಗಿರಿಧಾಮ ಪ್ರವೇಶ ದ್ವಾರ ಪ್ರವಾಸಿಗರಿಗೆ ಮುಕ್ತವಾಗಲಿದ್ದು ಅದಕ್ಕೂ ಮುಂಚೆಯೇ ಪ್ರವಾಸಿಗರು ನಂದಿ ವೀಕ್ಷಣೆಗೆ ಬರುತ್ತಿದ್ದಾರೆ. ಇನ್ನೂ ಪ್ರವಾಸಿಗರ ದಟ್ಟಣೆ ಪರಿಣಾಮ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಟ್ರಾಫಿಕ್‌ ಕಿರಿಕಿರಿ ಉಂಟಾಗುತ್ತಿದೆ.

ನಿನ್ನೆ 18,567 ಮಂದಿ, 3 ಸಾವಿರ ಬೈಕ್‌, 1,200 ಕಾರು: ಭಾನುವಾರ ಒಂದೇ ದಿನ ನಂದಿಗಿರಿಗೆ ಬರೋಬ್ಬರಿ 18,567 ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಸಾಮಾನ್ಯವಾಗಿ ವಾರಾಂತ್ಯದಲ್ಲಿ 10 ರಿಂದ 12 ಸಾವಿರ ಮಂದಿ ಆಗಮಿಸುತ್ತಾರೆ. ಆದರೆ, ಮಳೆಗಾಲ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ ಒಂದೇ ದಿನ ನಂದಿಗಿರಿಧಾಮಕ್ಕೆ ಒಟ್ಟು 3 ಸಾವಿರ ಬೈಕ್‌, 1,200 ಕಾರು ಬಂದಿದ್ದವೆಂದು ನಂದಿಗಿರಿಧಾಮದ ವಿಶೇಷ ಅಧಿಕಾರಿ ಮಂಜುನಾಥ “ಉದಯವಾಣಿ’ಗೆ ತಿಳಿಸಿದರು.

ಮಳೆಗಾಲದಲ್ಲಿ ಹರಿದು ಬರುವ ಆದಾಯ: ಮಳೆಗಾಲದಲ್ಲಿ ಸಹಜವಾಗಿಯೇ ನಂದಿಗಿರಿಧಾಮಕ್ಕೆ ರಾಜ್ಯದ ವಿವಿಧೆಡೆಯಿಂದ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಪ್ರವಾಸೋದ್ಯಮ ಇಲಾಖೆಗೆ ಆದಾಯವೂ ಹೆಚ್ಚಾಗಿ ಬರಲಿದೆ. ದಿನನಿತ್ಯ ನೂರಾರು ಬೈಕ್‌, ಕಾರುಗಳಲ್ಲಿ ಪ್ರವಾಸಿಗರು ಬರುವುದರಿಂದ ಪಾರ್ಕಿಂಗ್‌ ಶುಲ್ಕದಿಂದ ಲಕ್ಷಾಂತರ ರೂ., ಆದಾಯ ಸಂಗ್ರಹವಾಗುತ್ತಿದೆ. ಹಾಗೆಯೇ ಪ್ರವಾಸಿಗರ ಪ್ರವೇಶಕ್ಕೂ ತಲಾ 20 ರೂ, ಶುಲ್ಕ ಇದ್ದರೆ ಕಾರು, ಬೈಕ್‌ಗೆ ದಿನಕ್ಕೆ 60 ರೂ, ಪಾರ್ಕಿಂಗ್‌ ಶುಲ್ಕ ಸಂಗ್ರಹವಾಗುತ್ತಿದೆ.

ವಾರಾಂತ್ಯದಲ್ಲಿ ಪ್ರವಾಸಿಗರ ಪ್ರವಾಹ:‌ ಪ್ರತಿ ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ನಂದಿಗಿರಿಧಾಮಕ್ಕೆ ಹರಿದು ಬರುತ್ತದೆ. ವಿಶೇಷ ವಾಗಿ ಐಟಿ, ಬಿಟಿ ಉದ್ಯೋಗಿಗಳು, ಶಾಲಾ, ಕಾಲೇಜು ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಕನಿಷ್ಠ 10 ರಿಂದ 15 ಸಾವಿರ ಮಂದಿ ಪ್ರವಾಸಿಗರು ನಂದಿಗಿರಿ ಧಾಮಕ್ಕೆ ವಾರಾಂತ್ಯದಲ್ಲಿ ಭೇಟಿ ನೀಡಿ ಗಿರಿ ಧಾಮದ ಸೌಂದರ್ಯ ಆಸ್ವಾಧಿಸಿ ಹೋಗುತ್ತಾರೆ.

ವ್ಯೂ ಪಾಯಿಂಟ್‌ಗಳಲ್ಲಿ ಕಿಕ್ಕಿರಿದ ಪ್ರವಾಸಿಗರು: ನಂದಿಗಿರಿಧಾಮ ಸೌಂದರ್ಯ ಸವಿಯಲು ಗಿರಿಧಾಮದಲ್ಲಿನ ವ್ಯೂ ಪಾಯಿಂಟ್‌ಗಳಿಗೆ ಪ್ರವಾಸಿಗರು ಕಿಕ್ಕಿರಿದು ಸೇರುತ್ತಿದ್ದಾರೆ. ಬೆಳಗ್ಗೆ ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೂ ಈ ವ್ಯೂ ಪಾಯಿಂಟ್‌ ಗಳಲ್ಲಿ ತುಂಬಿರುತ್ತಾರೆ. ಈ ವೇಳೆ ಪ್ರವಾಸಿಗರು ಬೆಟ್ಟದ ಸೌಂದರ್ಯದ ಜತೆಗೆ ತಮ್ಮ ಮೊಬೈಲ್‌ ಗಳಲ್ಲಿ ಸೆಲ್ಫಿ ತೆಗೆದುಕೊಂಡು ಆನಂದಿಸುತ್ತಿದ್ದಾರೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.