ಸಂಚಾರ ನಿಯಮ ಉಲ್ಲಂಘಿಸಿದರೆ ಕ್ರಮ
ಪೊಲೀಸ್ ಉಪ ನಿರೀಕ್ಷಕ ಪಿ.ಎಂ. ನವೀನ್ ಎಚ್ಚರಿಕೆ
Team Udayavani, May 27, 2019, 8:07 AM IST
ಎಚ್.ಎನ್.ವೃತ್ತದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕೂಲಿ ಕಾರ್ಮಿಕರು, ವಾಹನ ಗಳ ಚಾಲಕರಿಗೆ ಪೊಲೀಸ್ ಉಪನಿರೀಕ್ಷಕ ನವೀನ್ ಜಾಗೃತಿ ಮೂಡಿಸಿದರು.
ಬಾಗೇಪಲ್ಲಿ: ದ್ವಿಚಕ್ರ, ಆಟೋ ಸೇರಿದಂತೆ ಸರಕು ಸಾಗಣಿಕೆ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವಂತಹ ವಾಹನಗಳ ಮಾಲೀಕರ ಮತ್ತು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಉಪ ನಿರೀಕ್ಷಕ ಪಿ.ಎಂ. ನವೀನ್ ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದರು.
ಪಟ್ಟಣದ ಡಾ.ಎಚ್.ಎನ್.ವೃತ್ತದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಾರ್ಮಿಕರಿಗೆ, ವಾಹನ ಚಾಲಕರಿಗೆ ಕಾನೂನು ಅರಿವು ಮೂಡಿಸುವ ಜನಜಾಗೃತಿ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಟೋ ಮತ್ತು ಸರಕು ಸಾಗಣಿಕೆ ಸೇರಿದಂತೆ ವಿವಿಧ ರೀತಿ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆ ಯಲ್ಲಿ ಜನರನ್ನು ತುಂಬಿಸಿ ಕೊಂಡು ಹೋಗುತ್ತಿರುವುದು ಹೆಚ್ಚಾಗಿದೆ.
ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಅಮಾಯಕ ಪ್ರಯಾ ಣಿಕರು ಜೀವ ಕಳೆದುಕೊಳ್ಳುವಂತಾಗಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಉಲ್ಲಂಘಿಸುವಂತಹ ವಾಹನ ಚಾಲಕರ ಮತ್ತು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಈ ಸಂಬಂಧ ಕಟ್ಟಡ ನಿರ್ಮಾಣ ಮಾಲೀಕರು ಮತ್ತು ಗುತ್ತಿಗೆದಾರರು, ಕೂಲಿ ಕಾರ್ಮಿಕರು, ಆಟೋ ಚಾಲಕ ರೊಂದಿಗೆ ಸಭೆ ನಡೆಸಿ ದ್ವಿಚಕ್ರ ವಾಹನ ಸವಾರರು 3 ಮಂದಿ ಸವಾರಿ ಮಾಡ ಬಾರದು ಎಂದರಲ್ಲದೇ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ತಾಕೀತು ಮಾಡಿದರು. ಆಟೋ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಗಳನ್ನು ಧರಿಸಬೇಕು, ಚಾಲನಾ ಪರ ವಾನಗಿ, ವಿಮೆ ಸೇರಿದಂತೆ ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿರ ಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್